ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡಿದ್ರೂ ಗ್ಲೇನ್ ಮ್ಯಾಕ್ಸ್ ವೆಲ್ ಗೆ ಯಾಕಿಷ್ಟು ಡಿಮ್ಯಾಂಡ್…?

admin by admin
February 19, 2021
in Newsbeat, Sports, ಕ್ರೀಡೆ
Glenn Maxwell ipl 2021 saakshatv
Share on FacebookShare on TwitterShare on WhatsappShare on Telegram

ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡಿದ್ರೂ ಗ್ಲೇನ್ ಮ್ಯಾಕ್ಸ್ ವೆಲ್ ಗೆ ಯಾಕಿಷ್ಟು ಡಿಮ್ಯಾಂಡ್…?

Glenn Maxwell  ipl 2021 saakshatvಗ್ಲೇನ್ ಮ್ಯಾಕ್ಸ್ ವೆಲ್.. ಆಸ್ಟ್ರೇಲಿಯಾದ ಆಲ್ ರೌಂಡರ್. ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆಯುವ ಗ್ಲೇನ್ ಮ್ಯಾಕ್ಸ್ ವೆಲ್ ಅಪಾಯಕಾರಿ ಬ್ಯಾಟ್ಸ್ ಮೆನ್ ಎಂಬುದರಲ್ಲಿ ಎರಡು ಮಾತಿಲ್ಲ. ಏಕಾಂಗಿಯಾಗಿ ತಂಡದ ಗತಿಯನ್ನೇ ಬದಲಾಯಿಸುವಂತತಹ ಸಾಮಥ್ರ್ಯ ಗ್ಲೇನ್ ಮ್ಯಾಕ್ಸ್ ವೆಲ್ ಗಿದೆ.
ಹಾಗಾಗಿಯೇ ಆಧುನಿಕ ಕ್ರಿಕೆಟ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಎದುರಾಳಿ ಬೌಲರ್ ಗಳಿಗೆ ದುಃಸ್ವಪ್ನವಾಗಿ ಕಾಡುತ್ತಿರುತ್ತಾರೆ. ಅದರಲ್ಲೂ ಚುಟುಕು ಕ್ರಿಕೆಟ್ ನಲ್ಲಿ ಮ್ಯಾಕ್ಸ್ ವೆಲ್ ಅಬ್ಬರ ಜೋರಾಗಿಯೇ ಇರುತ್ತೆ. ಹೀಗಾಗಿಯೇ ಐಪಿಎಲ್ ನಲ್ಲಿ ಮ್ಯಾಕ್ಸ್ ವೆಲ್ ಗೆ ಭಾರೀ ಡಿಮ್ಯಾಂಡ್.
ಹೌದು, 2021ರ ಐಪಿಎಲ್ ಮಿನಿ ಬಿಡ್ಡಿಂಗ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಅವರು, 14.25 ಕೋಟಿ ರೂಪಾಯಿಗೆ ಆರ್ ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ.
ಆದ್ರೆ 2020ರ ಐಪಿಎಲ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ತೀರಾ ಕಳಪೆ ಪ್ರದರ್ಶನ ನೀಡಿದ್ದರು. ಸಾಲು ಸಾಲು ಅವಕಾಶ ನೀಡಿದ್ರೂ ಮ್ಯಾಕ್ಸ್ ವೆಲ್ ಬ್ಯಾಟ್ ನಿಂದ ರನ್ ಗಳು ಹರಿದು ಬಂದಿರಲಿಲ್ಲ. ಹೀಗಾಗಿ ಸಾಕಷ್ಟು ಟೀಕೆಗಳನ್ನು ಕೇಳಬೇಕಾಯ್ತು. ಆದ್ರೂ ಗ್ಲೇನ್ ಮ್ಯಾಕ್ಸ್ ವೆಲ್ ಅವರನ್ನು ಈ ಬಾರಿಯೂ ಬಿಡ್ಡಿಂಗ್ ನಲ್ಲಿ ಖರೀದಿ ಮಾಡಲು ಫ್ರಾಂಚೈಸಿಗಳು ಮುಗಿಬಿದ್ದಿದ್ದವು.
Glenn Maxwell  ipl 2021 saakshatvಅಂದ ಹಾಗೇ ಗ್ಲೇನ್ ಮ್ಯಾಕ್ಸ್ ವೆಲ್ 2012ರಿಂದ ಐಪಿಎಲ್ ನಲ್ಲಿ ಆಡಲು ಶುರು ಮಾಡಿದ್ದರು. ಬೇಡಿಕೆಯ ಆಟಗಾರನಾಗಿರುವ ಗ್ಲೇನ್ ಮ್ಯಾಕ್ಸ್ ವೆಲ್ ಕೋಟಿಯ ಲೆಕ್ಕಚಾರದಲ್ಲೇ ದುಡ್ಡು ಪಡೆದುಕೊಂಡಿದ್ದಾರೆ. ಕಳೆದ ಬಾರಿಯಂತೂ 10.75 ಕೋಟಿಗೆ ಹರಾಜಾಗಿದ್ದರು. ಆದ್ರೆ ದುಡ್ಡಿಗೆ ತಕ್ಕಂತೆ ಗ್ಲೇನ್ ಮ್ಯಾಕ್ಸ್ ವೆಲ್ ಆಡುತ್ತಿಲ್ಲ ಅನ್ನೋ ಆರೋಪವೂ ಅವರ ಮೇಲಿದೆ.
ಇನ್ನು 2012ರಲ್ಲಿ ಮ್ಯಾಕ್ಸ್ ವೆಲ್ ಡೆಲ್ಲಿ ತಂಡದ ಪರ ಆಡಿದ್ದರು. ಆಡಿರುವ ಎರಡು ಪಂದ್ಯಗಳಲ್ಲಿ ಗಳಿಸಿದ್ದು ಆರು ರನ್ ಹಾಗೂ ಒಂದು ವಿಕೆಟ್
2013ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಆಡಿದ್ದ ಗ್ಲೇನ್, ಆಡಿರುವ ಮೂರು ಪಂದ್ಯಗಳಲ್ಲಿ 36 ರನ್ ಗಳಿಸಿದ್ದರು. ಯಾವುದೇ ವಿಕೆಟ್ ಪಡೆದಿರಲಿಲ್ಲ.
2014ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಕಣಕ್ಕಿಳಿದಿದ್ದ ಗ್ಲೇನ್ ಮ್ಯಾಕ್ಸ್ ವೆಲ್, ಆಡಿರುವ 16 ಪಂದ್ಯಗಳಲ್ಲಿ 552 ರನ್ ಹಾಗೂ ಒಂದು ವಿಕೆಟ್ ಪಡೆದುಕೊಂಡಿದ್ದರು. ಇದು ಗ್ಲೇನ್ ಮ್ಯಾಕ್ಸ್ ವೆಲ್ ಅವರ ಐಪಿಎಲ್ ನ ಶ್ರೇಷ್ಠ ಸಾಧನೆಯಾಗಿದೆ.
ಇನ್ನು 2015ರಲ್ಲೂ ಕಿಂಗ್ಸ್ ಇಲೆವೆನ್ ತಂಡದ ಪರ ಆಡಿದ್ದ ಗ್ಲೇನ್, 11 ಪಂದ್ಯಗಳಲ್ಲಿ 145 ರನ್ ಹಾಗೂ ಎರಡು ವಿಕೆಟ್ ಪಡೆದಿದ್ದರು.
Glenn Maxwell  ipl 2021 saakshatv2016ರಲ್ಲಿ 11 ಪಂದ್ಯಗಳನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡಿ 179 ರನ್ ಗಳಿಸಿದ್ದರು. ಯಾವುದೇ ವಿಕೆಟ್ ಪಡೆದಿಲ್ಲ.
2017ರಲ್ಲೂ ಕಿಂಗ್ಸ್ ಇಲೆವೆನ್ ತಂಡದ ಪರ 14 ಪಂದ್ಯಗಳಲ್ಲಿ ಆಡಿ 310 ರನ್ ಗಳಿಸಿದ್ದರು. ಏಳು ವಿಕೆಟ್ ಉರುಳಿಸಿದ್ದರು.
2018ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ 12 ಪಂದ್ಯಗಳನ್ನು ಆಡಿ 169 ರನ್ ಹಾಗೂ ಐದು ವಿಕೆಟ್ ಉರುಳಿಸಿದ್ದರು. ಆದ್ರೆ 2019ರ ಐಪಿಎಲ್ ನಲ್ಲಿ ಆಡಿಲ್ಲ.
ಇನ್ನು 2020ರ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಪರ 13 ಪಂದ್ಯಗಳನ್ನು ಆಡಿ ಗಳಿಸಿದ್ದು ಬರೀ 108 ರನ್. ಪಡೆದಿರುವ ವಿಕೆಟ್ ಗಳು ಮೂರು.
ಇದು ಮ್ಯಾಕ್ಸ್ ವೆಲ್ ಅವರ ಐಪಿಎಲ್ ಸಾಧನೆ. ಕೋಟಿ ಕೋಟಿ ದುಡ್ಡು ಪಡೆದುಕೊಂಡ್ರೂ ಐಪಿಎಲ್ ನಲ್ಲಿ ಫ್ರಾಂಚೈಸಿಗಳ ನಂಬಿಕೆಗೆ ತಕ್ಕಂತೆ ಆಡಲು ಗ್ಲೇನ್ ಮ್ಯಾಕ್ಸ್ ವೆಲ್ ವಿಫಲರಾಗಿದ್ದಾರೆ. ಆದ್ರೂ ಮ್ಯಾಕ್ಸ್ ವೆಲ್ ಅವರನ್ನು ಖರೀದಿ ಮಾಡಲು ಫ್ರಾಂಚೈಸಿಗಳು ಮುಗಿಬೀಳುತ್ತಿರುವುದು ಅಚ್ಚರಿಯಾಗುತ್ತದೆ.
ಈ ಹಿಂದೆ ವೀರೇಂದ್ರ ಸೆಹ್ವಾಗ್ ಗ್ಲೇನ್ ಮ್ಯಾಕ್ಸ್ ವೆಲ್ ವಿರುದ್ಧ ಕಿಡಿ ಕಾರಿದ್ದರು. ಗ್ಲೇನ್ ಎಂಜಾಯ್ ಮಾಡಲು ಐಪಿಎಲ್ ನಲ್ಲಿ ಆಡುತ್ತಾನೆ ಎಂದೇ ನೇರವಾಗಿ ಟೀಕೆ ಮಾಡಿದ್ದರು.
ಒಟ್ಟಿನಲ್ಲಿ ಇದೀಗ ಗ್ಲೇನ್ ಮ್ಯಾಕ್ಸ್ ವೆಲ್ ಅವರು ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪಾಲಾಗಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಾದ್ರೂ ಗ್ಲೇನ್ ಮ್ಯಾಕ್ಸ್ ವೆಲ್ ಬ್ಯಾಟ್ ನಿಂದ ರನ್ ಹರಿದು ಬರೊತ್ತೋ ಅನ್ನೋದನ್ನು ಕಾದು ನೋಡಬೇಕು.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
Tags: #saakshatvaustreliadelhli capitalsGlenn MaxwellIPL 2020ipl 2021IPL auctionskings 11 punjabmumbai indiansRCB
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram