ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Minister Dr. K. Sudhakar | 2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ

Mahesh M Dhandu by Mahesh M Dhandu
July 16, 2022
in Health, Newsbeat, ಆರೋಗ್ಯ
Goal of malaria free Karnataka by 2025 saaksha tv

Goal of malaria free Karnataka by 2025 saaksha tv

Share on FacebookShare on TwitterShare on WhatsappShare on Telegram

Minister Dr. K. Sudhakar | 2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ

ಬೆಂಗಳೂರು : ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಜನ ಸಮುದಾಯದಲ್ಲಿ ಅರಿವು ಮೂಡಿಸುವುದು ಕೂಡ ಅವಶ್ಯಕ. ಮಲೇರಿಯಾ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಜನರೇ ಮುನ್ನೆಚ್ಚರಿಕೆ ಕ್ರಮ ವಹಿಸಲು ತಿಳಿಸಿಕೊಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದರು.

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದಲ್ಲಿ ಆಯೋಜಿಸಿದ್ದ, 2025 ರ ವೇಳೆಗೆ ಕರ್ನಾಟಕವನ್ನು ಮಲೇರಿಯಾ ಮುಕ್ತ ಮಾಡುವ ವಿಷಯ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಸಚಿವರು, ಮಲೇರಿಯಾಗೆ ಹಿಂದೆ ಸರಿಯಾದ ತಪಾಸಣಾ ವ್ಯವಸ್ಥೆಯೇ ಇರಲಿಲ್ಲ. ಇದರಿಂದಾಗಿ ಸಾವುಗಳು ಸಂಭವಿಸುತ್ತಿತ್ತು. 80, 90 ರ ದಶಕದಲ್ಲಿ ಯಾವುದೇ ಜ್ವರ ಬಂದರೂ ಮೊದಲು ಮಲೇರಿಯಾ ತಪಾಸಣೆ ಮಾಡಲು ಆರಂಭವಾಯಿತು. ಈ ರೀತಿ ಸರ್ಕಾರ ತಪಾಸಣೆ ಹಾಗೂ ಅರಿವು ಕಾರ್ಯಕ್ರಮಗಳ ಮೂಲಕ ಕ್ರಮ ವಹಿಸುತ್ತಿದೆ. ಯಾವುದೇ ರೋಗದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಹೆಚ್ಚು ಅಗತ್ಯ ಎಂದರು.

ಮಲೇರಿಯಾ, ಡೆಂಘೀ ಮೊದಲಾದ ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗುತ್ತದೆ. ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಅಂತಹ ಕಡೆಗಳಲ್ಲಿ ಸ್ವಾಭಾವಿಕವಾಗಿ ಮಳೆ ನೀರು ಶೇಖರಣೆಯಾಗುತ್ತದೆ. ಇದರಿಂದಾಗಿ ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗುತ್ತದೆ. ದೇಶದಲ್ಲಿ 2020 ರಲ್ಲಿ 1,86,532 ಮಲೇರಿಯಾ ಪ್ರಕರಣ ಪತ್ತೆಯಾಗಿತ್ತು. ಈ ಪೈಕಿ ಕರ್ನಾಟಕದಲ್ಲಿ 1,701 ಪ್ರಕರಣಗಳು ವರದಿಯಾಗಿದ್ದವು. ಅಂದರೆ ರಾಜ್ಯದ ಪಾಲು ಶೇ.0.9 ಆಗಿತ್ತು. ಇದೇ ವರ್ಷ ಜಗತ್ತಿನಲ್ಲಿ 21 ಕೋಟಿ ಜನರು ಮಲೇರಿಯಾ ರೋಗಕ್ಕೊಳಗಾಗಿದ್ದು, 6.27 ಲಕ್ಷ ರೋಗಿಗಳು ಮೃತಪಟ್ಟಿದ್ದರು. ರಾಜ್ಯದಲ್ಲಿ ಮಲೇರಿಯಾ ನಿಯಂತ್ರಣದಲ್ಲಿದ್ದು, ಇದಕ್ಕಾಗಿ ಅಧಿಕಾರಿ, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದರು.

Goal of malaria free Karnataka by 2025 saaksha tv
Goal of malaria free Karnataka by 2025 saaksha tv

ಮಲೇರಿಯಾ ರೋಗವನ್ನು ಸಾಧಾರಣ ರೋಗ ಎಂದು ಪರಿಗಣಿಸುವಂತಿಲ್ಲ. ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ 100 ಪ್ರಕರಣ ಮಾತ್ರ ವರದಿಯಾಗಿದೆ. ಈ ಮಳೆಗಾಲವು ಅತ್ಯಂತ ಸವಾಲಿನ ಅವಧಿಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಈ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದೆ. ಹೆಚ್ಚು ಅರಣ್ಯ ಪ್ರದೇಶ ಇರುವ ಕಡೆಗಳಲ್ಲಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನವ ಕರ್ನಾಟಕ ನಿರ್ಮಾಣದ ಕನಸು ಕಂಡಿದ್ದಾರೆ. ಆರೋಗ್ಯ ಕರ್ನಾಟಕ ನಿರ್ಮಿಸಿದಾಗ ಮಾತ್ರ ಇದು ಸಾಧ್ಯ. ಮಲೇರಿಯಾ ಮಾತ್ರವಲ್ಲದೆ, ಕ್ಷಯ ರೋಗವನ್ನು ಕೂಡ ನಿರ್ಮೂಲನೆ ಮಾಡಬೇಕಿದೆ. ಮಲೇರಿಯಾ ನಿರ್ಮೂಲನೆಗೆ 2030 ರ ಗುರಿಯನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ 2025 ರ ಗುರಿ ಇರಿಸಿಕೊಳ್ಳಲಾಗಿದೆ. ಸರ್ಕಾರದ ಕೆಲಸ, ಸಂಘ, ಸಂಸ್ಥೆಗಳ ನೆರವು ಹಾಗೂ ಜನರ ಸಹಭಾಗಿತ್ವದಿಂದ ಇದು ಸಾಧ್ಯವಾಗುತ್ತದೆ. ಪ್ರತಿ ನಾಗರಿಕರು ತಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಈ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು ಎಂದರು.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೇರಿಯಾ ಹೆಚ್ಚಿರುವ ಕಡೆಗಳಿಗೆ ಹೋಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ರೋಗ ನಿರ್ಮೂಲನೆ ಮಾಡಿದರೆ ಮಾತ್ರ ಸಾಲುವುದಿಲ್ಲ. ಅದು ಮತ್ತೆ ಕಾಣಿಸಿಕೊಳ್ಳದಂತೆ ಎಚ್ಚರ ವಹಿಸಬೇಕು. ಕೋಲಾರ, ಚಿಕ್ಕಬಳ್ಳಾಪುರ ಮೊದಲಾದ ಜಿಲ್ಲೆಗಳಲ್ಲಿ ಪ್ರಕರಣ ಕಂಡುಬಂದಿಲ್ಲ ಎಂದಾಕ್ಷಣ, ಅಲ್ಲಿ ರೋಗ ಇಲ್ಲ ಎಂದು ಭಾವಿಸಬಾರದು. ಸಾಮೂಹಿಕ ಪ್ರಯತ್ನ, ಸಂಘಟಿತ ಕಾರ್ಯದ ಮೂಲಕ ಮಲೇರಿಯಾ ನಿರ್ಮೂಲನೆ ಕಾರ್ಯ ನಡೆಯಬೇಕು ಎಂದು ಸಚಿವರು ಕಿವಿಮಾತು ಹೇಳಿದರು.

Tags: #Saaksha TVDr. K SudhakarkarnatakaMalaria
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram