ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಅಪರಾಧ

ಸಾವಿನಲ್ಲೂ ಸತ್ಯ ಹೇಳಿದ ಡೆತ್ ನೋಟ್- ಇಸ್ಲಾಂ ಧರ್ಮಕ್ಕೆಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಶೂಟಿಂಗ್ ಕೋಚ್ ಈಗ ಕಂಬಿ ಹಿಂದೆ

Shwetha by Shwetha
August 26, 2026
in ಅಪರಾಧ, Crime, National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಆಂಧ್ರಪ್ರದೇಶದ ಗೋದಾವರಿ ನದಿಗೆ ಹಾರಿ ಎಂಜಿನಿಯರ್ ಕುಟುಂಬವೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಈಗ ಸ್ಫೋಟಕ ಸತ್ಯವೊಂದು ಹೊರಬಂದಿದೆ. ಮೃತ ಎಂಜಿನಿಯರ್ ಬರೆದಿಟ್ಟಿರುವ ಡೆತ್ ನೋಟ್ ಇಡೀ ಪ್ರಕರಣಕ್ಕೆ ಹೊಸ ಆಯಾಮ ನೀಡಿದ್ದು ರೈಫಲ್ ಶೂಟಿಂಗ್ ಕೋಚ್ ನೀಡುತ್ತಿದ್ದ ಮತಾಂತರ ಕಿರುಕುಳವೇ ಇಡೀ ಕುಟುಂಬದ ಸಾವಿಗೆ ಕಾರಣ ಎನ್ನುವ ಅಂಶ ಬಯಲಾಗಿದೆ.

ಕಳೆದ ಆಗಸ್ಟ್ 16 ಮತ್ತು 17 ರ ಮಧ್ಯರಾತ್ರಿ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಎಂಜಿನಿಯರ್ ತಿಲ್ಲಪುಡಿ ನೂಕರಾಜು ಅವರು ತಮ್ಮ ಪತ್ನಿ ಮೀನಾ ಮತ್ತು ಮಗಳು ಸೌಜನ್ಯ ಅವರೊಂದಿಗೆ ರಾಜಮಹೇಂದ್ರವರಂ ಸೇತುವೆಯಿಂದ ಗೋದಾವರಿ ನದಿಗೆ ಹಾರಿ ಪ್ರಾಣ ಬಿಟ್ಟಿದ್ದರು. ಈ ದುರಂತದಲ್ಲಿ ಹತ್ತು ವರ್ಷದ ಮೊಮ್ಮಗ ಮಾತ್ರ ಮೀನುಗಾರರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದು ಉಳಿದ ಮೂವರು ಸಾವನ್ನಪ್ಪಿದ್ದಾರೆ.

Related posts

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

August 26, 2026
ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

August 26, 2026

ಡೆತ್ ನೋಟ್ ನಲ್ಲಿ ಅಡಗಿದೆ ಸಾವಿನ ರಹಸ್ಯ

ಈ ಕುಟುಂಬದ ಸಾವಿನ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ನೂಕರಾಜು ಬರೆದಿದ್ದ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ಶೇಖ್ ಸಾದಿಕ್ ಖಾನ್ ಎಂಬ ವ್ಯಕ್ತಿಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದೆ. ಶೇಖ್ ಸಾದಿಕ್ ಖಾನ್ ತಮ್ಮ ಇಡೀ ಕುಟುಂಬ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೆ ಮತಾಂತರವಾಗದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಹಣಕ್ಕಾಗಿ ಸುಲಿಗೆ ಮಾಡಲು ಯತ್ನಿಸಿದ್ದ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಐದು ರಾಜ್ಯಗಳಲ್ಲಿ ನಡೆದ ಹೈಡ್ರಾಮಾ

ಘಟನೆಯ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಸಾದಿಕ್ ಖಾನ್ ನನ್ನು ಬಂಧಿಸಲು ಪೊಲೀಸರು 10 ವಿಶೇಷ ತಂಡಗಳನ್ನು ರಚಿಸಿದ್ದರು. ಯಾವುದೇ ಮೊಬೈಲ್ ಫೋನ್ ಬಳಸದೆ ಮತ್ತು ಡಿಜಿಟಲ್ ವಹಿವಾಟು ನಡೆಸದೆ ಪೊಲೀಸರ ಕಣ್ಣಿಗೆ ಮಣ್ಣೆರಚುತ್ತಿದ್ದ ಆರೋಪಿಯನ್ನು ಐದು ರಾಜ್ಯಗಳಲ್ಲಿ ಸತತವಾಗಿ ಬೆನ್ನಟ್ಟಿದ ತನಿಖಾಧಿಕಾರಿಗಳು ಕೊನೆಗೂ ಉತ್ತರ ಪ್ರದೇಶದ ಮೀರತ್ ನಲ್ಲಿ ಸೆರೆಹಿಡಿದಿದ್ದಾರೆ. ಮೃತ ನೂಕರಾಜು ಅವರ ಮೊಮ್ಮಗನಿಗೆ ಶಾಲೆಯಲ್ಲಿ ರೈಫಲ್ ಶೂಟಿಂಗ್ ತರಬೇತಿ ನೀಡುತ್ತಿದ್ದ ಖಾನ್ ಕಳೆದ ಎರಡು ವರ್ಷಗಳಿಂದ ಈ ಕುಟುಂಬಕ್ಕೆ ಹತ್ತಿರವಾಗಿದ್ದನು ಎಂದು ತಿಳಿದುಬಂದಿದೆ.

ಸಿಬಿಐ – ಎನ್ ಐ ಎ ತನಿಖೆಗೆ ಹೆಚ್ಚಿದ ಒತ್ತಾಯ

ಈ ಪ್ರಕರಣದ ಆಳ ಮತ್ತು ಗಂಭೀರತೆಯನ್ನು ಗಮನಿಸಿರುವ ಮಾಜಿ ಸಂಸದ ವಿಜಯಸಾಯಿ ಅವರು ಇದರಲ್ಲಿ ಅಂತರಾಷ್ಟ್ರೀಯ ಪಿತೂರಿ ಇರುವ ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿ ಖಾನ್ ಕೇವಲ ಮತಾಂತರ ಮಾತ್ರವಲ್ಲದೆ ಅಕ್ರಮ ಬಂದೂಕು ಸರಬರಾಜು ಮತ್ತು ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಾಧ್ಯತೆಯಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಅಥವಾ ಎನ್ ಐ ಎ ತನಿಖೆಗೆ ಒಪ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕಾಕಿನಾಡ ಜಿಲ್ಲಾ ಎಸ್ಪಿ ಬಿಂದು ಮಾಧವ್ ನೇತೃತ್ವದಲ್ಲಿ ನಡೆದ ಈ ಕಠಿಣ ಕಾರ್ಯಾಚರಣೆಯು ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ.

ShareTweetSendShare
Join us on:

Related Posts

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಜಾ: ಅಲಹಾಬಾದ್ ಹೈಕೋರ್ಟ್

by Shwetha
August 26, 2026
0

ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಅಥವಾ ತಲೆಗೆ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ತರಗತಿಯಲ್ಲಿ ಹಿಜಾಬ್...

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

ಕರ್ನಾಟಕಕ್ಕೆ ಮತ್ತೆ ಶಾಕ್; CWRC ಶಿಫಾರಸು ಎತ್ತಿಹಿಡಿದ CWMA

by Shwetha
August 26, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಾಡಿದ್ದ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

ಕೈ ಪಾಳಯದಲ್ಲಿ ಮುಗಿಯದ ಸಂಪುಟ ಪುನಾರಚನೆ ಸರ್ಕಸ್!: ಹಿರಿಯ ಸಚಿವರಿಗೆ ಕೊಕ್ ಹೊಸ ಮುಖಗಳಿಗೆ ಚಾನ್ಸ್ ದೆಹಲಿ ಪ್ರವಾಸದಲ್ಲಿ ನಿರ್ಧಾರವಾಗಲಿದೆ ಕೈ ನಾಯಕರ ಭವಿಷ್ಯ

by Shwetha
August 26, 2026
0

ಬೆಂಗಳೂರು ಶಾಸಕರ ಬಂಡಾಯದ ಕಿಚ್ಚು ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆಯ ಗುಸುಗುಸು ಈಗ ಜೋರಾಗಿ ಕೇಳಿಬರುತ್ತಿದೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು...

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

ಕುಂಭಮೇಳಕ್ಕೆ ಕೋಟಿ ಕೋಟಿ ಶಾಲೆ ಉಳಿಸಲು ನಯಾಪೈಸೆ ಇಲ್ಲವೇ ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಕಳವಳ

by Shwetha
August 26, 2026
0

ದೇಶದಲ್ಲಿ ಶಿಕ್ಷಣದ ಸ್ಥಿತಿಗತಿ ಮತ್ತು ಸರ್ಕಾರದ ಆದ್ಯತೆಗಳ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಸಾವಿರಾರು...

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

ಪತ್ನಿ ಮನೆಯಾಳಲ್ಲ ಪತಿ ಮಾಲೀಕನಲ್ಲ ಅತ್ತೆ ಮಾವನ ಸೇವೆ ಸೊಸೆಯ ಹೊಣೆಯಲ್ಲ : ಮದುವೆ ಅಂದ್ರೆ ಗುಲಾಮಗಿರಿ ಅಲ್ಲ ಹೈಕೋರ್ಟ್ ಮಹತ್ವದ ತೀರ್ಪಿನಿಂದ ಗಂಡಂದಿರಿಗೆ ಬಿಗ್ ಶಾಕ್

by Shwetha
August 26, 2026
0

ಬೆಂಗಳೂರು ಕೌಟುಂಬಿಕ ಜೀವನದಲ್ಲಿ ಪತ್ನಿಯ ಸ್ಥಾನಮಾನ ಮತ್ತು ಅವಳ ವೈಯಕ್ತಿಕ ಸ್ವಾತಂತ್ರ್ಯದ ಬಗ್ಗೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ತೀರ್ಪನ್ನು ನೀಡಿದೆ. ಪತ್ನಿಯಾದವಳು ಕೇವಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram