ತಿರುವನಂತಪುರಂ: ಶಬರಿಮಲೆಗೆ ಸಾಂಪ್ರದಾಯಿಕ ಕಾಡು ದಾರಿಯಲ್ಲಿ ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತರಿಗೆ ಶೀಘ್ರದಲ್ಲೇ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ತಿರುವಾಂಕೂರ್ ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.ಅರಣ್ಯ ಇಲಾಖೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪಾದಯಾತ್ರಿಗಳಿಗೆ ವಿಶೇಷ ಟ್ಯಾಗ್ಗಳನ್ನು ನೀಡಲಾಗುವುದು ಮತ್ತು ಈ ಟ್ಯಾಗ್ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನೀಡುವರು ಎಂದು ಅವರು ತಿಳಿಸಿದ್ದಾರೆ.ಈ ಹೊಸ ವ್ಯವಸ್ಥೆಯಿಂದ ಪಾದಯಾತ್ರಿಗಳು ಸುಲಭವಾಗಿ ಸ್ವಾಮಿಯ ದರ್ಶನ ಪಡೆಯಲು ಸಾಧ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








