ತಿರುವನಂತಪುರಂ: ಶಬರಿಮಲೆಗೆ ಸಾಂಪ್ರದಾಯಿಕ ಕಾಡು ದಾರಿಯಲ್ಲಿ ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತರಿಗೆ ಶೀಘ್ರದಲ್ಲೇ ವಿಶೇಷ ದರ್ಶನದ ವ್ಯವಸ್ಥೆ ಮಾಡಲಾಗುವುದು ಎಂದು ತಿರುವಾಂಕೂರ್ ದೇವಸ್ವಂ ಮಂಡಳಿಯ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.ಅರಣ್ಯ ಇಲಾಖೆಯ ಸಹಕಾರದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಪಾದಯಾತ್ರಿಗಳಿಗೆ ವಿಶೇಷ ಟ್ಯಾಗ್ಗಳನ್ನು ನೀಡಲಾಗುವುದು ಮತ್ತು ಈ ಟ್ಯಾಗ್ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನೀಡುವರು ಎಂದು ಅವರು ತಿಳಿಸಿದ್ದಾರೆ.ಈ ಹೊಸ ವ್ಯವಸ್ಥೆಯಿಂದ ಪಾದಯಾತ್ರಿಗಳು ಸುಲಭವಾಗಿ ಸ್ವಾಮಿಯ ದರ್ಶನ ಪಡೆಯಲು ಸಾಧ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಜಿಬಿಎ ದಂಡದ ಬಿಸಿ- ಆ.22ರ ಡೆಡ್ಲೈನ್ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?
ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...







