ಮಂಡ್ಯ: ಕೆರಗೋಡು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಹನುಮ ಧ್ವಜವನ್ನು (Hanuman Dhwaja) ತೆರವುಗೊಳಿಸಿದ್ದನ್ನು ಖಂಡಿಸಿ ಹಿಂದೂ ಸಂಘಟನೆಗಳು (Hindu Organisation) ಕೆರಗೋಡು ಬಂದ್ಗೆ (Keregodu Bandh) ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಬಂದ್ ಗೆ ವ್ಯಾಪಾರಸ್ಥರು, ಹೊಟೇಲ್ ಮಾಲೀಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಗರದಲ್ಲಿ ವ್ಯಾಪಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಹೀಗಾಗಿ ಕೆರಗೋಡಿನಲ್ಲಿ ಬಿಗಿ ಪೊಲೀಸ್ (Police) ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗ್ರಾಮಕ್ಕೆ ಎಎಸ್ಪಿ ತಿಮ್ಮಯ್ಯ ಭೇಟಿ ನೀಡಿ ಭದ್ರತೆ ಪರಿಶೀಲಿಸಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಅಲ್ಲದೇ, ಧ್ವಜ ಸ್ತಂಭದ ಹತ್ತಿರ ಕೂಡ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹನುಮಧ್ವಜ ತೆರವು ಮಾಡುವಲ್ಲಿ ಶಾಸಕರ ಪಾತ್ರ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ (Ganiga Ravikumar) ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.