ಬೆಂಗಳೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರ ಗುಡ್ನ್ಯೂಸ್ ಕೊಟ್ಟಿದ್ದು, ನಾಳೆ ಅಥವಾ ನಾಡಿದ್ದು ರಾಜ್ಯಕ್ಕೆ 13 ಲಕ್ಷ ಡೋಸ್ ಕೊರೊನಾ ಲಸಿಕೆ ಬರಲಿದೆ.
ನಾಳೆಯೇ ಲಸಿಕೆ ಬರುವುದು ಖಚಿತವಾಗಿದ್ದು, ನಾಳೆ ಸಾಧ್ಯವಾಗದಿದ್ದರೆ ಭಾನುವಾರ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಸಿಹಿ ಸುದ್ದಿಕೊಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಭೇಟಿ 2ನೇ ಹಂತದ ಲಸಿಕೆ ಡ್ರೈರನ್ ಪರಿಶೀಲನೆ ನಡೆಸಿ ಮಾತನಾಡಿದ ಸುಧಾಕರ್, ಯಾವುದೇ ಲೋಪದೋಷವಿಲ್ಲದೇ, ತಾಂತ್ರಿಕ ಸಮಸ್ಯೆ ಇಲ್ಲದಂತೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವತ್ತಿನಿಂದ ಲಸಿಕೆ ವಿತರಣೆ ವಿಚಾರವಾಗಿ ಜಾಹೀರಾತು ನೀಡಲಾಗುತ್ತಿದೆ. ಲಸಿಕೆ ಪಡೆಯಲು ಕೋವಿಡ್ ವಾರಿಯರ್ಸ್ಗಳು ನೋಂದಣಿ ಮಾಡಿಕೊಳ್ಳದಿದ್ದವರು ಹೆಸರು ರಿಜಿಸ್ಟರ್ ಮಾಡಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ನಾಳೆ ಕೇಂದ್ರ ಸರ್ಕಾರದಿಂದ 13 ಲಕ್ಷದ 90 ಸಾವಿರ(13,90,000) ಲಸಿಕೆ ಕರ್ನಾಟಕಕ್ಕೆ ಬರಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ಪರವಾಗಿ ಧನ್ಯವಾದ ತಿಳಿಸುತ್ತೇನೆ. ಇಂದು ರಾಜ್ಯದ 263 ಕೇಂದ್ರಗಳಲ್ಲಿ ಡ್ರೈ ರನ್ ಮಾಡ್ತಿದ್ದೇವೆ. ಖಾಸಗಿ ಆಸ್ಪತ್ರೆಯಲ್ಲಿ ವ್ಯವಸ್ಥೆ ಹೇಗಿದೆ ಎಂದು ನೋಡಿ ಬಳಿಕ ಡ್ರೈ ರನ್ ಮಾಡ್ತಿದ್ದೇವೆ. ವೈಜ್ಞಾನಿಕವಾಗಿ ತುಂಬಾ ಚೆನ್ನಾಗಿ, ಅಚ್ಚುಕಟ್ಟಾಗಿ ಮಾಡಿದ್ದಾರೆ. ಚಿಕ್ಕಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲೂ ಪರಿಶೀಲನೆ ನಡೆಸುತ್ತೇನೆ ಎಂದರು.
ಯಾವುದೇ ಲಸಿಕೆಗೂ ಮಾಧ್ಯಮ ಕ್ಷೇತ್ರದಿಂದ ಇಷ್ಟೊಂದು ಒತ್ತಡ ಇರಲಿಲ್ಲ. ಕ್ಲಿನಿಕಲ್ ಟ್ರಯಲ್ ಸೇರಿದಂತೆ ಲಸಿಕೆಗೆ ಮೂರು ಹಂತದ ಪರಿಶೀಲನೆ ನಡೆಸಬೇಕಾಗುತ್ತದೆ. ವಿಜ್ಞಾನಿಗಳು, ಸಂಶೋಧಕರ ಮೇಲೆ ನಂಬಿಕೆ ಇಡೋಣ. ಆದಷ್ಟು ಬೇಗ ಲಸಿಕೆ ಎಲ್ಲರಿಗೂ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಕ್ಕಿಜ್ವರ ಕುರಿತಾಗಿ ಗಡಿ ಜಿಲ್ಲೆಗಳಲ್ಲಿ ಮಾರ್ಗಸೂಚಿ ಕೊಟ್ಟಿದ್ದೇವೆ. ಕಟ್ಟೆಚ್ಚರ ವಹಿಸಲು ಮುನ್ಸೂಚನೆ ಕೊಟ್ಟಿದ್ದೇವೆ. ಯಾವುದೇ ಪಕ್ಷಿ ಸತ್ತರೆ ಕೈಯಿಂದ ಮುಟ್ಟಬಾರದು. ಗ್ಲೌಸ್, ಪಿಪಿಇ ಕಿಟ್ ಹಾಕಿ ಮುಟ್ಟಬೇಕು. ಕೋಳಿ ಫಾರ್ಮ್ ನಲ್ಲಿ ಸ್ಯಾನಿಟೈಸರ್ ಮಾಡಬೇಕು ಎಂದು ಸುಧಾಕರ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel