Karnataka | ದೇವನೂರು ಮಹಾದೇವ ಸೇರಿದಂತೆ 7 ಲೇಖಕರ ಪಠ್ಯ ಕೈಬಿಟ್ಟ ಸರ್ಕಾರ
ಬೆಂಗಳೂರು : ರಾಜ್ಯ ಶಿಕ್ಷಣ ಇಲಾಖೆ ಲೇಖಕ ದೇವನೂರು ಮಹಾದೇವ ಹಾಗೂ ಜಿ.ರಾಮಕೃಷ್ಣ ಸೇರಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಶಿಕ್ಷಣ ಇಲಾಖೆ ವಿಶೇಷ ಸುತ್ತೋಲೆ ಹೊರಡಿಸಿದ್ದು, ಈ ಲೇಖಕರು ಅನುಮತಿ ಹಿಂಪಡೆದಿರುವ ಹಿನ್ನೆಲೆಯಲ್ಲಿ ಪಠ್ಯದಲ್ಲಿದ್ದ ಈ ಸಾಹಿತಿಗಳ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ತಿಳಿಸಿದೆ.

10 ನೇ ತರಗತಿಯ ಪಠ್ಯದಲ್ಲಿ ದೇವನೂರು ಮಹಾದೇವ ಅವರ ‘ಎದೆಗೆ ಬಿದ್ದ ಅಕ್ಷರ’ ಗದ್ಯ. ಜಿ.ರಾಮಕೃಷ್ಣ ಅವರ ‘ಭಗತ್ ಸಿಂಗ್’ ಪೂರಕ ಗದ್ಯ, 9 ನೇ ತರಗತಿ ಪಠ್ಯದಲ್ಲಿನ ರೂಪ ಹಾಸನ ಅವರ ‘ಅಮ್ಮನಾಗುವುದೆಂದರೆ’ ಪೂರಕ ಪದ್ಯ 10 ನೇ ತರಗತಿ ಪಠ್ಯದಲ್ಲಿನ ಈರಪ್ಪ ಎಂ.ಕಂಬಳಿ ಅವರ ‘ಹೀಗೊಂದು ಬಸ್ ಪ್ರಯಾಣ’ ಪೂರಕ ಗದ್ಯ, ಸತೀಶ್ ಕುಲಕರ್ಣಿ ಅವರ ‘ಕಟ್ಟುತ್ತೇವ ನಾವು’ ಪದ್ಯ, 10 ನೇ ತರಗತಿಯಲ್ಲಿದ್ದ ಸುಕನ್ಯ ಮಾರುತಿ ಅವರ ‘ಏಣಿ’ ಪದ್ಯ, ಆರನೇ ತರಗತಿ ಪಠ್ಯದಲ್ಲಿನ ದೊಡ್ಡಹುಲ್ಲೂರು ರುಕ್ಕೋಜಿರಾವ್ ಅವರ ‘ಡಾ.ರಾಜ್ ಕುಮಾರ್’ ಗದ್ಯಗಳನ್ನು ಪರಿಗಣಿಸದಂತೆ ಇಲಾಖೆ ತಿಳಿಸಿದೆ.







