ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕ ಸಭೆಗಳು, ಸಮಾರಂಭಗಳನ್ನು ರದ್ದು ಮಾಡಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಿಗೆ ಮನವಿ ಮಾಡಲಾಗಿದೆ. ಅದರಂತೆ ಈ ಬಾರಿ ಬೆಂಗಳೂರು ಕರಗ ನಡೆಸುವುದು ಬೇಡ ಎಂದಿದ್ದ ರಾಜ್ಯ ಸರ್ಕಾರ, ಈಗ ತನ್ನ ನಿರ್ಧಾರವನ್ನ ಬದಲಿಸಿದೆ. ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದ ಬಳಿಕ ಏಪ್ರಿಲ್ 8 ರಂದು ಬೆಂಗಳೂರು ಕರಗ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಇಂದಿನ ಸಭೆಯಲ್ಲಿ ಕರಗ ನಡೆಸಲು, ಬೆಂಗಳೂರಿನ ಶಾಸಕರು ಹಾಗೂ ಸಂಸದರು ಮನವಿ ಮಾಡಿದ್ರು. ಇದಕ್ಕೆ ಓಕೆ ಎಂದ ಸಿಎಂ, ಬಹಳ ಎಚ್ಚರಿಕೆಯಿಂದ ಕರಗ ನಡೆಸಿ ಎಂದು ಸೂಚಿಸಿದ್ರು. ಸರಳವಾಗಿ ಕರಗ ನಡೆಯಬೇಕು. ಇಂದು ನಂಜನಗೂಡಿನಲ್ಲಿ ರಥೋತ್ಸವ ಹೇಗೆ ನಡೆಯಿತೋ, ಹಾಗೇ ಕರಗ ಮಹೋತ್ಸವ ನಡೆಯಬೇಕೆಂದು ಸೂಚಿಸಿದ್ದಾರೆ.
ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!
ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...








