government
ನವದೆಹಲಿ: ದೇಶದಲ್ಲಿ ಈ ಬಾರಿ ಒಂದೆಡೆ ಕೊರೊನಾ ಆರ್ಭಟ ಮತ್ತೊಂದೆಡೆ ಪ್ರಕೃತಿ ವಿಕೋಪಕ್ಕೆ ಸಿಲುಕಿ ನಾನಾ ರಾಜ್ಯಗಳ ಜನರ ಬದುಕು ಮೂರಾಬಟ್ಟೆಯಾಗಿದೆ. ಪ್ರವಾಹಕ್ಕೆ ಸಿಲುಕಿದ ಪ್ರಮುಖ ರಾಜ್ಯಗಳಲ್ಲಿ ನಮ್ಮ ಕರ್ನಾಟಕವೂ ಒಂದು. ಇದೀಗ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಪ್ರಕೃತಿ ವಿಕೋಪ ಪರಿಹಾರ ಧನ ಬಿಡುಗಡೆ ಮಾಡಲು ನಿರ್ಧರಿಸಿದೆ. ಈ ವರ್ಷ ನೈಸರ್ಗಿಕ ವಿಕೋಪಗಳಾದ ಚಂಡಮಾರುತ, ಪ್ರವಾಹ ಮತ್ತು ಭೂಕುಸಿತಗಳಿಂದ ನಲುಗಿದ್ದ ರಾಜ್ಯಗಳಿಗೆ ಇವುಗಳನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಅನುಮೋದನೆ ನೀಡಿದೆ. ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ 4,382 ಕೋಟಿ ರೂ.ಗಳ ಹೆಚ್ಚುವರಿ ನೆರವು ನೀಡಲು ಕೇಂದ್ರ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಒಪ್ಪಿಗೆ ನೀಡಿದೆ.
ಅಂದ್ಹಾಗೆ ಈ ಬಾರಿ ಪ್ರಕೃತಿ ವಿಕೋಪಕ್ಕೆ ಹೆಎಚ್ಚು ನಲುಗಿದ ರಾಜ್ಯಗಳಲ್ಲಿ ನಮ್ಮ ಕರ್ನಾಟಕವೂ ಒಂದಾಗಿದೆ. ಇದನ್ನ ಹೊರತುಪಡಿಸಿದರೆ, ಮಧ್ಯಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಸಿಕ್ಕಿಂ ರಾಜ್ಯಗಳು ಈ ಬಾರಿ ಅತಿ ಹೆಚ್ಚು ಪ್ರಕೃತಿ ವಿಕೋಪಕ್ಕೆ ಒಳಗಾಗಿರುವ ರಾಜ್ಯಗಳಾಗಿವೆ.
ಶಿರಾ ಬಳಿಕ ಬಸವಕಲ್ಯಾಣ ಗೆಲ್ಲಲು ಬಿಜೆಪಿ ಟಾಸ್ಕ್; ಬಿ.ವೈ ವಿಜಯೇಂದ್ರ ಹೇಳಿದ್ದೇನು ಗೊತ್ತಾ..!
government
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








