ಬೆಂಗಳೂರು : ಕೊರೊನಾ ಭೀತಿ ಹಿನ್ನೆಲೆ ಈ ಬಾರಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದ್ದು, ಈ ಬಾರಿಯ ದಸರಾವನ್ನು ವೈಭವಯುತವಾಗಿ ಆಚರಿಸದೆ ಸಾಂಪ್ರದಾಯಿಕವಾಗಿ ಹಾಗೂ ಸರಳವಾಗಿ ಆಚರಣೆ ಮಾಡಲಿದ್ದೇವೆ. ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
ದಸರಾ ಹಬ್ಬವನ್ನು ಸರಳವಾಗಿ ಆಚರಣೆ ಮಾಡುವ ಸಂಬಂಧ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಉನ್ನತ ಮಟ್ಟದ ಅಕಾರಿಗಳ ಸಭೆ ನಡೆಯಲಿದೆ. ಅಲ್ಲಿ ದಸರಾ ಹಬ್ಬ ಆಚರಣೆ ಸಂಬಂಧ ಸರ್ಕಾರದಿಂದ ಅಕೃತವಾಗಿ ಪ್ರಕಟಿಸಲಿದ್ದೇವೆ ಎಂದು ಸಿ.ಟಿ ರವಿ ಅವರು ಮಾಹಿತಿ ನೀಡಿದ್ದಾರೆ.
ಸರಳ ಆಚರಣೆಯೆಂದರೆ ವೈಭವಯುತವಾಗಿ ಆಚರಿಸುವ ಬದಲು ಸಂಪ್ರದಾಯಂತೆ ಸರಳವಾಗಿ ಹಬ್ಬವನ್ನು ಆಚರಣೆ ಮಾಡುತ್ತೇವೆ. ಜಂಬೂ ಸವಾರಿ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಸಬೇಕೆ, ಬೇಡವೇ ಎಂಬುದು ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನವಾಗಲಿದೆ. ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನನ್ನ ವ್ಯಾಪ್ತಿಗೆ ಒಳಪಡುತ್ತವೆ. ಈ ಮೂರು ಇಲಾಖೆಗಳು ವೈಭವಯುತ ಆಚರಣೆಯ ಇಲಾಖೆಗಳಾಗಿವೆ. ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದಿಸಿದರು.