ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಳಪೆ, ಸುಳ್ಳಿನ ಕಂತೆ: ತಮ್ಮ ಸರ್ಕಾರದ ಸಾಧನೆ ರಾಜ್ಯಪಾಲರ ಭಾಷಣದಲ್ಲಿದೆ ಎಂದು ಸಿದ್ದು ವ್ಯಂಗ್ಯ..!

Kariyappa N by Kariyappa N
January 29, 2021
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು : ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣ ಸುಳ್ಳಿನ ಕಂತೆ. ರಾಜ್ಯದ ಇತಿಹಾಸದಲ್ಲಿಯೇ ಇಂತಹ ಕಳಪೆ ಭಾಷಣವನ್ನು ಕೇಳಿರಲಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.

siddaraiah
ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಹೀಗಾಗಿ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ಸಾಧನೆಗಳನ್ನು ಹೇಳಿಯೇ ಇಲ್ಲ. ಕೇವಲ ಸುಳ್ಳುಗಳ ಸರಮಾಲೆಯನ್ನು ಸರ್ಕಾರ ರಾಜ್ಯಪಾಲರ ಮೂಲಕ ಹೇಳಿಸಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರದ ನಿಲುವು, ಯೋಜನೆಗಳು, ಮುನ್ನೋಟದ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಆದರೆ, ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಆ ಯಾವುದೂ ಇಲ್ಲ. ಇದೊಂದು ಸುಳ್ಳಿನ ಕಂತೆ. ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ. ರಾಜ್ಯಪಾಲರು ಹೇಳಿದ ಸರ್ಕಾರದ ಸಾಧನೆಗಳೆಲ್ಲವೂ ನಮ್ಮ ಅವಧಿಯಲ್ಲಿ ಆಗಿರುವಂಥದ್ದು. ಈ ಸರ್ಕಾರದ ನಿರ್ಧಿಷ್ಟ ಸಾಧನೆಗಳು ಏನೂ ಇಲ್ಲ. ರಾಜ್ಯಪಾಲರ ಭಾಷಣದಲ್ಲಿ ಗೊತ್ತು, ಗುರಿ ಎಂಬುದೇ ಇಲ್ಲ.
ಯಾವುದೇ ಸರ್ಕಾರಕ್ಕೆ ಒಂದು ದೂರದೃಷ್ಟಿ ಇರಬೇಕು. ಈ ಸರ್ಕಾರದ ಅವಧಿ ಇನ್ನೂ ಎರಡೂವರೆ ವರ್ಷ ಇದೆ. ಈ ಅವಧಿಯಲ್ಲಿ ನಾವು ಏನು ಮಾಡಲಿದ್ದೇವೆ ಎಂಬುದನ್ನು ಹೇಳಬೇಕಿತ್ತು. ರಾಜ್ಯದ ಹಣಕಾಸು ಪರಿಸ್ಥಿತಿ, ನೀರಾವರಿ ಯೋಜನೆಗಳ ಕುರಿತು ಭಾಷಣದಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.
ರಾಜ್ಯ ಅಭಿವೃದ್ಧಿಯಲ್ಲಿ ಹತ್ತು ವರ್ಷ ಹಿಂದಕ್ಕೆ ಹೋಗಿದೆ. ಎಲ್ಲದಕ್ಕೂ ಸರ್ಕಾರ ಕೊರೊನಾ ನೆಪ ಹೇಳುತ್ತಿದೆ. ಹಣಕಾಸು ಪರಿಸ್ಥಿತಿ ಹದಗೆಡಲು, ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳಲು, ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ ಮಾಡದಿರಲು ಕೊರೊನಾ ಕಾರಣ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ.
ಬಿಜೆಪಿ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಗಿದೆ. ಈ ಅವಧಿಯಲ್ಲಿನ ಯೋಜನೆ, ಕಾರ್ಯಕ್ರಮಗಳು, ಮುನ್ನೋಟ, ದೂರದೃಷ್ಟಿ ಏನು ಎಂಬುದರ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಏನೂ ಹೇಳಿಲ್ಲ. ಕಾರಣ, ಸರ್ಕಾರದ ಸಾಧನೆ ಶೂನ್ಯ. ಇದು ಸತ್ಯಕ್ಕೆ ದೂರವಾದ ಭಾಷಣ ಎಂದು ಟೀಕಿಸಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಉತ್ತರ ಕರ್ನಾಟಕದ ಜನರಿಗೆ ದ್ರೋಹ
ಉತ್ತರ ಕರ್ನಾಟಕದ ಬಗ್ಗೆ ಬಿಜೆಪಿಯವರು ಬಹಳ ಮಾತನಾಡುತ್ತಾರೆ. ಉತ್ತರ ಕರ್ನಾಟಕಕ್ಕೆ ಬಹಳ ಅನ್ಯಾಯವಾಗಿದೆ ಎಂದು ಸಚಿವರಾದ ಉಮೇಶ್ ಕತ್ತಿಯವರೇ ಆಗಾಗ ಹೇಳುತ್ತಿದ್ದರು. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಬೆಳಗಾವಿಯಲ್ಲಿ ಸುವರ್ಣ ಸೌಧ ಕಟ್ಟಿಸಿದ್ದು ಏಕೆ ? ಈ ಸರ್ಕಾರ ಇದುವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ. ಜಂಟಿ ಅಧಿವೇಶನವನ್ನೇ ಬೆಳಗಾವಿಯಲ್ಲಿ ಕರೆಯಬೇಕಿತ್ತು. ಹೀಗಿರುವಾಗ ಉತ್ತರ ಕರ್ನಾಟಕದ ಜನತೆಗೆ ಯಾವ ರೀತಿ ಇವರು ಮುಖ ತೋರಿಸುತ್ತಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.


ನಮ್ಮ ಅವಧಿಯಲ್ಲಿ ಪ್ರತಿ ವರ್ಷವೂ ಅಲ್ಲಿ ಹತ್ತು ದಿನಗಳ ಕಾಲ ಅಧಿವೇಶನ ನಡೆಸಿದ್ದೇವೆ. ಸುವರ್ಣಸೌಧ ಕಟ್ಟಿಸಿದ ಉದ್ದೇಶವಾದರೂ ಏನು ? ಸರ್ಕಾರಿ ಕಚೇರಿಗಳನ್ನು ಅಲ್ಲಿಗೆ ಸ್ಥಳಾಂತರ ಮಾಡುತ್ತೇವೆ. ಉತ್ತರ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದವರು ಈಗ ಅಧಿವೇಶನ ನಡೆಸಲು ತಯಾರಿಲ್ಲ. ಇದು ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ದ್ರೋಹ. ಹೀಗಾಗಿ ರಾಜ್ಯಪಾಲರ ಭಾಷಣದ ಸಂದರ್ಭದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದೇವೆ. ವರ್ಷಕ್ಕೆ ಒಮ್ಮೆಯಾದರೂ ಬೆಳಗಾವಿಯಲ್ಲಿ ಅಧಿವೇಶನ ನಡೆಯಲೇಬೇಕು. ಇದು ನಮ್ಮ ಆಗ್ರಹ.

ಮಹಾ ಸಿಎಂ ಉದ್ಧಟತನ ಸಹಿಸುವುದಿಲ್ಲ
ಮಹಾರಾಷ್ಟ್ರ ಸಿಎಂ ಉದ್ಘಟತನ ಪ್ರದರ್ಶನ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಅವರು ಜವಾಬ್ದಾರಿಯಿಂದ ಮಾತನಾಡಬೇಕು. ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ನಮಗೆ ಬೆಳಗಾವಿ ಕರ್ನಾಟಕದ ಭಾಗ. ಆ ಕುರಿತು ಯಾವುದೇ ವಿವಾದವೇ ಇಲ್ಲ. ಬೆಳಗಾವಿ ನಮ್ಮದು ಎಂಬುದು ಈಗಾಗಲೇ ತೀರ್ಮಾನವಾಗಿದೆ. ಅವರ ಉಳಿವಿಗೆ, ರಾಜಕೀಯ ಕಾರಣಕ್ಕೆ ಪದೇ ಪದೇ ಮಹಾರಾಷ್ಟ್ರ ಸಿಎಂ ಈ ವಿಷಯ ಕೆಣಕುತ್ತಾರೆ. ಇದು ಖಂಡನೀಯ. ಮಹಾರಾಷ್ಟ್ರ ಸಿಎಂ ಅವರ ಉದ್ಧಟನತ ವರ್ತನೆಯನ್ನು ಕನ್ನಡಿಗರು ಸಹಿಸುವುದಿಲ್ಲ.
ವಿಶ್ವನಾಥ್ ಅವರು ಮಂತ್ರಿಯಾಗಲು ಅನರ್ಹ ಎಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ನ್ಯಾಯಾಲಯ ಕಾನೂನು, ಸಂವಿಧಾನದ ವಿಧಿ ವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: B S YADIYURAPPAGovernorJoint sessionSiddaramaiahvajubai wala
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram