ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆಯೂ ರಾಜ್ಯದಲ್ಲಿ ಎಪಿಎಂಸಿ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದೆ. ನೂತನ ತಿದ್ದುಪಡಿ ಕಾಯ್ದೆಗೆ ರಾಜ್ಯಪಾಲ ವಜುಬಾಯ್ ವಾಲಾ ಡಿಸೆಂಬರ್ 30ರಂದೇ ಸಹಿ ಹಾಕಿದ್ದು, ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಿದ್ದವು. ಎಪಿಎಂಸಿ ಮಾರುಕಟ್ಟೆಗಳನ್ನು ಬಂದ್ ಮಾಡಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಲಾಗಿತ್ತು. ಎಪಿಎಂಸಿ ಕಾಯ್ದೆ ವಾಪಸ್ ಪಡೆಯುವಂತೆ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವು ರೈತ ಸಂಘಟನೆಗಳು ನಿರಂತರ ಹೋರಾಟ ಮಾಡಿ ಆಗ್ರಹಿಸಿದ್ದವು. ಆದರೆ, ಸರ್ಕಾರ ಮಾತ್ರ ವಿರೋಧಕ್ಕೆ ತಲೆಕೆಡಿಸಿಕೊಳ್ಳದೆ ಕಾಯ್ದೆಯನ್ನು ಜಾರಿಗೆ ತಂದಿದೆ.
ಎಪಿಎಂಸಿ ಕಾಯ್ದೆಯನ್ನು ಎರಡು ಬಾರಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿತ್ತು. ವಿಧಾನಸಭೆಯಲ್ಲಿ ಒಪ್ಪಿಗೆ ಸಿಕ್ಕರೂ ವಿಧಾನಪರಿಷತ್ನಲ್ಲಿ ಮಸೂದೆಗೆ ಅನುಮತಿ ಸಿಕ್ಕಿರದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರಲಾಗಿತ್ತು. ಕಳೆದ ತಿಂಗಳು ನಡೆದ ಅಧಿವೇಶನದಲ್ಲಿ ಪರಿಷತ್ನಲ್ಲಿ ಕಾಯ್ದೆಗೆ ಒಪ್ಪಿಗೆ ಸಿಕ್ಕ ಹಿನ್ನೆಲೆಯಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳಿಸಲಾಗಿತ್ತು.
ರಾಜ್ಯಪಾಲರು ಎಂಪಿಎಂಸಿ ತಿದ್ದುಪಡಿ ಕಾಯ್ದೆಗೆ ಅಂಕಿ ಹಾಕುತ್ತಿದ್ದಂತೆ 2020ರ ಮೇ.16ರಿಂದಲೇ ಪೂರ್ವಾನ್ವಯವಾಗವಂತೆ ಕಾಯ್ದೆ ಜಾರಿಗೆ ಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮೊದಲ ಕಾಯ್ದೆ ಪ್ರಕಾರ ವರ್ತಕರು ಹಾಗೂ ದಲ್ಲಾಳಿಗಳು ಕೃಷಿ ಉತ್ಪನ್ನಗಳನ್ನು ಎಪಿಎಂಸಿ ಪ್ರಾಂಗಣದಲ್ಲೇ ರೈತರಿಂದ ಖರೀದಿಸಬೇಕಿತ್ತು. ಎಪಿಎಂಸಿ ಮಾರುಕಟ್ಟೆ ಹೊರಗೆ ನಡೆಯುತ್ತಿದ್ದ ಖರೀದಿಗೂ ಸೆಸ್ ವಿಧಿಸಲಾಗುತ್ತಿತ್ತು. ಒಂದು ವೇಳೆ ವರ್ತರು ರೈತ ಬಳಿ ನೇರವಾಗಿ ಉತ್ಪನ್ನ ಖರೀದಿಸಿದ್ದರೆ ಅಪರಾಧವಾಗಿತ್ತು. ಅಂತಹವ ವಿರುದ್ಧ ದಂಡ ಹಾಗೂ ಶಿಕ್ಷೆ ವಿಧಿಸಲು ಮೊದಲು ಅವಕಾಶ ಇತ್ತು.
ದಲ್ಲಾಳಿಗಳ ಹಿಡಿತದಿಂದ ರೈತರನ್ನು ತಪ್ಪಿಸಲು, ವರ್ತಕರು ನೇರವಾಗಿ ರೈತರಿಂದ ಕೃಷಿ ಉತ್ಪನ್ನ ಖರೀದಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ. ಇನ್ನು ಮುಂದೆ ರೈತರು ಉತ್ತಮ ಬೆಲೆಗಾಗಿ ಮಾರುಕಟ್ಟೆಗಳಿಗೆ ಅಲೆಯಬೇಕಿಲ್ಲ. ವರ್ತಕರೇ ರೈತರ ಬಳಿ ಬಂದು ತರಕಾರಿ, ಹೂವು, ಹಣ್ಣು, ಭತ್ತ, ರಾಗಿ, ಜೋಳ ಸೇರಿದಂತೆ ಹಲವು ಉತ್ಪನ್ನಗಳನ್ನು ಖರೀದಿಸಬಹುದು. ಜತೆಗೆ ಒಪ್ಪಂದ ಮೂಲಕ ಕೃಷಿ ಚಟುವಟಿಕೆ ನಡೆಸಲೂ ಕಾಯ್ದೆಯಲ್ಲಿ ಒಪ್ಪಿಗೆ ನೀಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel