ADVERTISEMENT
Saturday, January 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಡಾ.ಕೆ.ಸುಧಾಕರ್‌

ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಡಾ.ಕೆ.ಸುಧಾಕರ್‌

Saaksha Editor by Saaksha Editor
September 23, 2025
in Politics, State, ರಾಜಕೀಯ, ರಾಜ್ಯ
GST reform implemented with the attention of all states said Chikkaballapur MP K Sudhakar

ಕೆ ಸುಧಾಕರ್‌

Share on FacebookShare on TwitterShare on WhatsappShare on Telegram

ಚಿಕ್ಕಬಳ್ಳಾಪುರ, ಸೆಪ್ಟೆಂಬರ್‌ 23: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ (GST) ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ (K Sudhakar) ಹೇಳಿದರು.

Related posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

January 30, 2026
Do you have a 'time table': The scientific world of 'time' in Jayanagar!

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

January 28, 2026

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು, ಸೇವೆಗಳಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ನಾನು ಆರ್ಥಿಕ ಸ್ಥಾಯಿ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದಿರಲಿಲ್ಲ. ಮಧ್ಯಮವರ್ಗ ಹಾಗೂ ಬಡಜನರ ಪರವಾಗಿ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ರೈತರು ಬಳಕೆ ಮಾಡುವ ಟ್ರ್ಯಾಕ್ಟರ್‌, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳ ತೆರಿಗೆಯನ್ನು ಶೇ.5 ರ ವ್ಯಾಪ್ತಿಗೆ ತರಲಾಗಿದೆ. ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು. ಮೋದಿ ಸರ್ಕಾರ ಮೊದಲಿಗೆ ನಾಲ್ಕು ಹಂತಗಳಲ್ಲಿ ತೆರಿಗೆ ತಂದು ಈಗ ಎರಡು ಹಂತಗಳನ್ನು ಉಳಿಸಿಕೊಂಡಿದೆ. ಈ ಸುಧಾರಣೆಯಿಂದ ಎರಡೂವರೆ ಲಕ್ಷ ಕೋಟಿ ರೂ. ಜನರ ಕೈಗೆ ಸಿಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದ ಖರೀದಿ ಸಾಮರ್ಥ್ಯ ಹೆಚ್ಚಲಿದೆ. ಒಂದು ಕಾರು ಖರೀದಿಸುವವರಿಗೆ ಎರಡು ಲಕ್ಷ ರೂ. ನಷ್ಟು ಉಳಿತಾಯವಾಗಲಿದೆ. ಆರೋಗ್ಯ ವಿಮೆ ಹಾಗೂ ಜೀವ ವಿಮೆ ಮಾಡಿಸಲು ಯಾವುದೇ ತೆರಿಗೆ ಇಲ್ಲ. ಬಹಳಷ್ಟು ಔಷಧಿಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಫಿಟ್‌ನೆಸ್‌ ಉಪಕರಣಗಳಿಗೆ ತೆರಿಗೆ ತೆಗೆದುಹಾಕಲಾಗಿದೆ ಎಂದರು.

ಇದನ್ನೂ ಓದಿ: ರಾಜ್ಯದ ಜನತೆಗೆ ಗುಡ್‌ ನ್ಯೂಸ್‌: ಕೆಎಂಎಫ್‌ ನಂದಿನಿ ಉತ್ಪನ್ನಗಳ ಬೆಲೆಯಲ್ಲಿ ಭಾರಿ ಇಳಿಕೆ

ಕೇಂದ್ರ ಸರ್ಕಾರ 144 ವಂದೇ ಭಾರತ್‌ ರೈಲುಗಳ ಕಾರ್ಯಾಚರಣೆ ನಡೆಸುತ್ತಿದೆ. ಯುಪಿಎ ಕಾಲದಲ್ಲಿದ್ದ ವಿಮಾನ ನಿಲ್ದಾಣಗಳು ಈಗ ದುಪ್ಪಟ್ಟಾಗಿದೆ. ರಾಷ್ಟ್ರೀಯ ಹೆದ್ದಾರಿಗಳ ಉದ್ದ ಶೇ.60 ರಷ್ಟು ಹೆಚ್ಚಿದೆ. ಡಿಬಿಟಿ ವ್ಯವಸ್ಥೆಯಡಿ ಶೇ.90 ರಷ್ಟು ಹಣ ನೇರವಾಗಿ ಜನರ ಖಾತೆಗೆ ಹೋಗುತ್ತಿದೆ. ಆಪರೇಶನ್‌ ಸಿಂದೂರದಲ್ಲಿ ಭಾರತೀಯ ಯೋಧರು ಉಗ್ರರ ತಾಣಗಳನ್ನು ಧ್ವಂಸ ಮಾಡಿದ್ದಾರೆ. ಯುಪಿಎಗೆ ಹೋಲಿಸಿದರೆ ಎನ್‌ಡಿಎ ಸರ್ಕಾರ ರಕ್ಷಣಾ ವಲಯಕ್ಕೆ 34 ಪಟ್ಟು ಅಧಿಕ ಅನುದಾನ ನೀಡಿದೆ. ಹೀಗೆ ತೆರಿಗೆ ಹಣವನ್ನು ಕೇಂದ್ರ ಸರ್ಕಾರ ಸದ್ಬಳಕೆ ಮಾಡುತ್ತಿದೆ ಎಂದರು.

ಯುಪಿಎ ಅವಧಿಯಲ್ಲಿ ಹಾಲಿನ ಉತ್ಪನ್ನಗಳಿಗೆ 18% ತೆರಿಗೆ ಇತ್ತು. ಐಷಾರಾಮಿ ಕಾರ್‌ಗಳಿಗೂ ಅಷ್ಟೇ ಇತ್ತು. ಎನ್‌ಡಿಎ ಸರ್ಕಾರ ಹಾಲಿಗೆ ತೆರಿಗೆ ತೆಗೆದುಹಾಕಿದೆ. ಯುಪಿಎ ಅವಧಿಯಲ್ಲಿ ಸಿಮೆಂಟ್‌, ಪೇಯಿಂಟ್‌, ಟಿವಿ, ಫ್ರಿಡ್ಜ್‌ಗೆ 30% ಇದ್ದು, ಈಗ ಅದು 18% ಗೆ ಇಳಿದಿದೆ. ಮಹಿಳೆಯರ ಸ್ಯಾನಿಟರಿ ಪ್ಯಾಡ್‌ಗೆ 13% ತೆರಿಗೆ ಇತ್ತು. ʼಸ್ವಸ್ಥ ನಾರಿ, ಸಶಕ್ತ ಪರಿವಾರʼ ಎಂಬ ಘೋಷಣೆ ನೀಡಿರುವ ಪ್ರಧಾನಿ ಮೋದಿ ಸ್ಯಾನಿಟರಿ ಪ್ಯಾಡ್‌ ಮೇಲಿನ ತೆರಿಗೆ ರದ್ದು ಮಾಡಿದ್ದಾರೆ. ಮಿನರಲ್‌ ನೀರಿನ ಬಾಟಲ್‌ಗೆ ಇದ್ದ ಶೇ.28 ರ ತೆರಿಗೆ ಶೇ.5 ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಸುಲಿಗೆ ಟ್ಯಾಕ್ಸ್‌

ಕಾಂಗ್ರೆಸ್‌ ಸರ್ಕಾರಕ್ಕೆ ಜಿಎಸ್‌ಟಿ ಎಂದರೆ ಗ್ಯಾರಂಟಿ ಸುಲಿಗೆ ಟ್ಯಾಕ್ಸ್‌. 38 ರೂ. ಇದ್ದ ಹಾಲಿಗೆ 47 ರೂ. ಆಗಿದೆ. ಬಸ್‌ ದರ 100 ಕಿ.ಮೀ. 100 ಇದ್ದಿದ್ದು, 115 ರೂ. ಆಗಿದೆ. ಪೆಟ್ರೋಲ್‌ಗೆ 99 ರೂ. ಇದ್ದಿದ್ದು, 103 ರೂ. ಆಗಿದೆ. ಡೀಸೆಲ್‌ಗೆ 8% ದರ ಹೆಚ್ಚಿದೆ. ನೀರಿನ ಶುಲ್ಕ 55% ಹೆಚ್ಚಾಗಿದೆ. ವಿದ್ಯುತ್‌ ದರ 120 ರೂ. ನಿಂದ 145 ರೂ.ಗೆ ಏರಿದೆ. ಸ್ಟಾಂಪ್‌ ಡ್ಯೂಟಿ 150% ಹೆಚ್ಚಿದೆ. ಅಫಿಡವಿಟ್‌ಗೆ 20 ರೂ. ನಿಂದ 100 ರೂ.ಗೆ ಏರಿಸಲಾಗಿದೆ. ಬಿಬಿಎಂಪಿಯಲ್ಲಿ ಕಸಕ್ಕೆ ಹೊಸದಾಗಿ 400 ರೂ. ಶುಲ್ಕ ವಿಧಿಸಲಾಗಿದೆ. ಹೊಸ ವಾಹನಗಳ ನೋಂದಣಿಗೆ 500 ರೂ. ನಿಂದ 1,000 ರೂ. ಹೆಚ್ಚಿದೆ. ಸರ್ಕಾರಿ ಆಸ್ಪತ್ರೆಗಳ ಸೇವಾ ಶುಲ್ಕವನ್ನು 100 ರಿಂದ 500 ರೂ. ಗೆ ಏರಿಸಲಾಗಿದೆ ಎಂದು ದೂರಿದರು.

ದಲಿತರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಸಲಾಗಿದೆ. ಪ್ರಸಕ್ತ ಸಾಲಿನ 2025-26 ನೇ ಬಜೆಟ್ ನಲ್ಲಿ SCSP/TSP ಅಡಿ 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತಾಡುವ ಕಾಂಗ್ರೆಸ್‌ ನಾಯಕರು, ದಲಿತರ ನಿಗಮಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅನುದಾನದಲ್ಲಿ 90 ಕೋಟಿ ರೂ. ಅನುದಾನ ಕಡಿತ, ವಿಶ್ವಕರ್ಮ ನಿಗಮಕ್ಕೆ 12 ಕೋಟಿ ರೂ. ಅನುದಾನ ಕಡಿತ, ಉಪ್ಪಾರ ನಿಗಮಕ್ಕೆ 7 ಕೋಟಿ ರೂ. ಅನುದಾನ ಕಡಿತ ಮಾಡಿದ್ದಾರೆ ಎಂದರು.

ಶಾಲೆಗಳಿಗೆ ಅನುದಾನ ಕೊಡದೆ ಕೊಠಡಿಗಳ ದುರಸ್ತಿಗೆ ಹಣವಿಲ್ಲ. ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರೇ ಭ್ರಷ್ಟಾಚಾರದಲ್ಲಿ ನಂ.1 ರಾಜ್ಯ ಎಂದಿರುವುದರ ಜೊತೆಗೆ ಗ್ಯಾರಂಟಿಯಿಂದಾಗಿ ಹಣವಿಲ್ಲ ಎಂದಿದ್ದಾರೆ. ಮಲ್ಲಿಕಾರ್ಜನ ಖರ್ಗೆಯವರೇ ಮಂಕರಿ ಮಣ್ಣು ಹಾಕಲು ಅನುದಾನವಿಲ್ಲ ಎಂದಿದ್ದಾರೆ ಎಂದರು.

ರಾಜ್ಯದ ಸಚಿವರಿಂದ ಸಹಿ

ತೆರಿಗೆ ಇಳಿಕೆ ಮಾಡಿರುವುದರಿಂದ ರಾಜ್ಯಕ್ಕೆ ನಷ್ಟವಾಗಿದೆ ಎಂದು ಈಗ ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿರುವ 33 ಸದಸ್ಯರು ಕೂಡ ಇದಕ್ಕೆ ಒಪ್ಪಬೇಕಾಗುತ್ತದೆ. ರಾಜ್ಯ ಸರ್ಕಾರದ ಪರವಾಗಿ ಸಚಿವ ಕೃಷ್ಣ ಭೈರೇಗೌಡರು ಇದಕ್ಕೆ ಸಹಿ ಹಾಕಿದ್ದಾರೆ. ಸರಿ ಇಲ್ಲ ಎಂದಮೇಲೆ ಸಹಿ ಹಾಕಿದ್ದು ಏಕೆ? ಈ ಸುಧಾರಣೆ ಬಗ್ಗೆ ಒಂದು ವರ್ಷದಿಂದಲೇ ಸಿದ್ಧತೆ ನಡೆದಿದೆ. ಕೇಂದ್ರ ಸರ್ಕಾರಕ್ಕೆ ಆದಾಯ ಕಡಿಮೆಯಾದರೂ ಜನರ ಹಿತದೃಷ್ಟಿಯಿಂದ ಈ ಕ್ರಮ ತರಲಾಗಿದೆ. ಈಗ ಹಣದುಬ್ಬರ 2.7% ಹಾಗೂ ಆರ್ಥಿಕ ಬೆಳವಣಿಗೆ ದರ 7.9% ಇದೆ. ಹೀಗೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಆರ್ಥಿಕ ಚೈತನ್ಯ ನೀಡಿದ್ದಾರೆ ಎಂದರು.

ಉದ್ಯಮಗಳು ಹಾಗೂ ವ್ಯಾಪಾರಿಗಳು ಹೊಸ ಜಿಎಸ್‌ಟಿ ಜಾರಿ ಮಾಡುತ್ತಿದ್ದಾರೆ. ಯಾರಾದರೂ ಜಾರಿ ಮಾಡದೇ ಇದ್ದರೆ ಅದನ್ನು ಪ್ರಶ್ನೆ ಮಾಡಬೇಕಾಗುತ್ತದೆ. ಈಗಾಗಲೇ ಜನರಿಗೆ ಜಿಎಸ್‌ಟಿಯ ಲಾಭ ದೊರೆತಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: #ಕರ್ನಾಟಕBJPChikkaballapur MP K SudhakarGSTGST ReformGST Reform 2025India GST reformK Sudhakar WifeK.SudhakarkarnatakaMP K SudhakarNarendra modiNDAಕೆ ಸುಧಾಕರ್‌ಕೇಂದ್ರ ಸರ್ಕಾರಜಿಎಸ್‌ಟಿನರೇಂದ್ರ ಮೋದಿಸಂಸದ ಕೆ ಸುಧಾಕರ್‌
ShareTweetSendShare
Join us on:

Related Posts

Reliance Jio empowers schools in Karnataka with future AI training

ಕರ್ನಾಟಕದ ಶಾಲೆಗಳಿಗೆ ರಿಲಯನ್ಸ್ ಜಿಯೋದಿಂದ ಭವಿಷ್ಯದ ಎಐ ತರಬೇತಿ ಸಬಲೀಕರಣ

by admin
January 30, 2026
0

 ಸುಧಾರಿತ ಕೃತಕ ಬುದ್ಧಿಮತ್ತೆಯನ್ನು (ಎಐ- ಆರ್ಟಿಫಿಷಿಯಲ್ ಇಂಟೆಲೆಜೆನ್ಸ್) ಎಲ್ಲರಿಗೂ ಲಭ್ಯ ಆಗುವಂತೆ ಮಾಡುವ ತನ್ನ ಬದ್ಧತೆಯನ್ನು ರಿಲಯನ್ಸ್ ಜಿಯೋ ಮತ್ತಷ್ಟು ಬಲಪಡಿಸುತ್ತಿದೆ. ಈ ಉದ್ದೇಶದ್ದೇ ಭಾಗವಾಗಿ, ಜಿಯೋ ಕರ್ನಾಟಕದಾದ್ಯಂತ ಸಮಗ್ರ ಎಐ ಶಿಕ್ಷಣ ಅಭಿಯಾನ ಪ್ರಾರಂಭಿಸಿದೆ. ಡಿಜಿಟಲ್ ಒಳಗೊಳ್ಳುವಿಕೆ ಬಲಪಡಿಸುವ ಹಾಗೂ ರಾಜ್ಯದ ಶಾಲೆ ಮತ್ತು ಕಾಲೇಜುಗಳ ಜೊತೆಗೆ ಸಂಪರ್ಕವನ್ನು ಸಾಧಿಸಿ, 'ಜಿಯೋ ಎಐ ಕ್ಲಾಸ್‌ರೂಮ್' (Jio AI Classroom) ಉಪಕ್ರಮದ ಮೂಲಕ ಪ್ರಾಯೋಗಿಕ ಎಐ ತರಬೇತಿಯನ್ನು ನೀಡುವ ಗುರಿಯನ್ನು ಈ ಅಭಿಯಾನ ಹೊಂದಿದೆ.  ಭಾರತದಾದ್ಯಂತ ಇರುವ ಶಾಲೆಗಳು ಎಐ ತಂತ್ರಜ್ಞಾನವನ್ನು ತರಗತಿಯ ಕಲಿಕೆಯಲ್ಲಿ ವೇಗವಾಗಿ ಅಳವಡಿಸಿಕೊಳ್ಳುತ್ತಾ ಇವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭವಿಷ್ಯಕ್ಕಾಗಿ ಸಿದ್ಧರಾಗುವ ರೀತಿಯಲ್ಲಿ ಶಿಕ್ಷಣದ ಸ್ವರೂಪದಲ್ಲಿ ಗಮನಾರ್ಹ ಬದಲಾವಣೆಗೆ ಸಾಕ್ಷಿ ಆಗುತ್ತಿದೆ. ಜಿಯೋ ಎಐ ಕ್ಲಾಸ್‌ರೂಮ್ ಮೂಲಕ ಶಿಕ್ಷಣ ಸಂಸ್ಥೆಗಳು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯವಾದ ಎಐ ಕೌಶಲಗಳನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳಿಗಾಗಿ ನಿಜವಾದ 'ಎಐ-ರೆಡಿ' (AI-Ready) ಶಾಲೆಗಳನ್ನು ಸಜ್ಜುಗೊಳಿಸುತ್ತಿದೆ.  ಈ ಅಭಿಯಾನವು ಆರಂಭಿಕ ಹಂತದಲ್ಲೇ ಭರ್ಜರಿ ಯಶಸ್ಸನ್ನು ಕಂಡಿದ್ದು, ಕರ್ನಾಟಕದಾದ್ಯಂತ 1000ಕ್ಕೂ ಹೆಚ್ಚು ಶಾಲೆಗಳನ್ನು ತಲುಪಿದೆ. ಜಿಯೋದ ಹಿರಿಯ ಕಾರ್ಯನಿರ್ವಾಹಕರು ನಡೆಸಿಕೊಡುತ್ತಿರುವ ಈ ವಿಶೇಷ ತರಬೇತಿ ಅವಧಿಗಳಿಗಾಗಿ 10,000ಕ್ಕೂ ಹೆಚ್ಚು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಯುವಜನತೆಯ ಕೌಶಲ ಅಭಿವೃದ್ಧಿಗೆ ಪೂರಕವಾಗಿ, ಕಂಪನಿಯು ನಾಲ್ಕು ವಾರಗಳ ಉಚಿತ ಆನ್‌ಲೈನ್ ಸರ್ಟಿಫಿಕೇಷನ್ ಕಾರ್ಯಕ್ರಮವಾದ 'ಜಿಯೋ ಎಐ ಕ್ಲಾಸ್‌ರೂಮ್' ಅನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು ವಿಡಿಯೋ ಉಪನ್ಯಾಸಗಳು, ಪಿಡಿಎಫ್ ಅಧ್ಯಯನ ಸಾಮಗ್ರಿಗಳು, ರೆಫರೆನ್ಸ್ ವಿಡಿಯೊಗಳು ಮತ್ತು ಪ್ರತಿ ಮಾಡ್ಯೂಲ್‌ನ ನಂತರ ಸಂವಾದಾತ್ಮಕ ರಸಪ್ರಶ್ನೆಗಳು ಹಾಗೂ ಅಸೈನ್‌ಮೆಂಟ್‌ಗಳನ್ನು ಒಳಗೊಂಡಿರುವ ನಾಲ್ಕು ಹಂತದ ಸಮಗ್ರ ಪಠ್ಯಕ್ರಮವನ್ನು ನೀಡುತ್ತದೆ.  ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಭಾಗವಹಿಸುವವರಿಗೆ 'ಕಂಪ್ಲೀಷನ್ ಬ್ಯಾಡ್ಜ್' ನೀಡಲಾಗುತ್ತದೆ. ಜಿಯೋ ಪಿಸಿ (JioPC) ಮೂಲಕ ಈ ಕಾರ್ಯಕ್ರಮವನ್ನು ಪಡೆಯುವ ಕಲಿಯುವವರು ಜಿಯೋ ಇನ್‌ಸ್ಟಿಟ್ಯೂಟ್ ಪ್ರಮಾಣಪತ್ರವನ್ನು ಸಹ ಪಡೆಯಲಿದ್ದಾರೆ. ಇದು ಅವರ ಎಐ ಪರಿಕಲ್ಪನೆಯ ತಿಳಿವಳಿಕೆ ಮತ್ತು ಅಸೈನ್‌ಮೆಂಟ್‌ಗಳ ಮೂಲಕ ಪಡೆದ ಪ್ರಾಯೋಗಿಕ ಜ್ಞಾನವನ್ನು ದೃಢೀಕರಿಸುತ್ತದೆ. ಈ ವ್ಯವಸ್ಥಿತ ಕೋರ್ಸ್ ಅನ್ನು ಡೆಸ್ಕ್‌ಟಾಪ್ ಅಥವಾ ಲ್ಯಾಪ್‌ಟಾಪ್ ಮೂಲಕ ಕಲಿಯುವವರಿಗೆ ತಮ್ಮದೇ ಆದ ವೇಗದಲ್ಲಿ ಕಲಿಯಲು ಮತ್ತು ಎಐ ತಂತ್ರಜ್ಞಾನಗಳ ಪ್ರಾಯೋಗಿಕ ಅನುಭವ ಪಡೆಯಲು ವಿನ್ಯಾಸ ಮಾಡಲಾಗಿದೆ.   ಈ ಡಿಜಿಟಲ್ ಸಬಲೀಕರಣ ಅಭಿವೃದ್ಧಿಯ ಮುಖ್ಯವಾದ ಅಂಶ ಏನೆಂದರೆ, ಯಾವುದೇ ವೆಚ್ಚವಿಲ್ಲದೆ ಬಳಕೆದಾರರಿಗೆ ಪ್ರೀಮಿಯಂ ತಂತ್ರಜ್ಞಾನವನ್ನು ಒದಗಿಸುವುದು. ಜಿಯೋ ತನ್ನ ಅನ್‌ಲಿಮಿಟೆಡ್ 5ಜಿ ಚಂದಾದಾರರಿಗೆ ₹35,100 ಮೌಲ್ಯದ 18 ತಿಂಗಳ 'ಗೂಗಲ್ ಜೆಮಿನಿ ಪ್ರೊ' (Google Gemini Pro) ಪ್ಲಾನ್ ಅನ್ನು ಉಚಿತವಾಗಿ ನೀಡುತ್ತಿದೆ. ಬಳಕೆದಾರರು ಇದನ್ನು ನೇರವಾಗಿ ಮೈಜಿಯೋ (MyJio) ಆಪ್ ಮೂಲಕ ಸಕ್ರಿಯಗೊಳಿಸಬಹುದು. ಇದು ಅತ್ಯಾಧುನಿಕ ಜೆಮಿನಿ 3 ಪ್ರೊ ಮಾಡೆಲ್ ಮತ್ತು ಉನ್ನತ ಮಟ್ಟದ ಸೃಜನಶೀಲ ಸಾಧನಗಳಿಗೆ ಸಂಪರ್ಕವನ್ನು ನೀಡುತ್ತದೆ. ಇದರಲ್ಲಿ ಎಐ-ಚಾಲಿತ ಚಿತ್ರ ರಚನೆಗಾಗಿ 'ನ್ಯಾನೋ ಬನಾನಾ ಪ್ರೊ' (Nano Banana Pro) ಮತ್ತು ಸುಧಾರಿತ ವಿಡಿಯೋ ನಿರ್ಮಾಣಕ್ಕಾಗಿ 'ವಿಯೋ 3.1' (Veo 3.1) ಸೇರಿವೆ. ಈ ಪ್ಲಾನ್ ಶೈಕ್ಷಣಿಕ ಸಂಶೋಧನಾ ಸಾಧನವಾದ 'ನೋಟ್‌ಬುಕ್ ಎಲ್‌ಎಂ'...

Do you have a 'time table': The scientific world of 'time' in Jayanagar!

ನಿಮಗಿದೋ ‘ಟೈಂ ಟೇಬಲ್‌’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!

by admin
January 28, 2026
0

- ಜಯನಗರದ ಪಾರ್ಸೆಕ್‌ನಲ್ಲಿ 'ಕಾಲ'ದ ಕೌತುಕ - ಪರಮ್ ಫೌಂಡೇಶನ್‌ನಿಂದ ವಿನೂತನ ಕಾರ್ಯಾಗಾರ - ವಾರಾಂತ್ಯದಲ್ಲಿ ನಡೆಯುವ ವಿಶಿಷ್ಟ ಟೈಮ್‌ ಲ್ಯಾಬ್‌ - ಮಕ್ಕಳಿಗಾಗಿ ಸ್ಟಾಪ್‌ವಾಚ್ ತಯಾರಿಸುವ...

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

ಕೇಸರಿ ಧ್ವಜ ವಿವಾದಕ್ಕೆ ಇತಿಶ್ರೀ ಹಾಡಿದ ಸಚಿವೆ: ಉಡುಪಿ ಡಿಸಿ ಬೆಂಬಲಕ್ಕೆ ನಿಂತು ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಖಡಕ್ ಸಂದೇಶವೇನು

by Shwetha
January 27, 2026
0

ಉಡುಪಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣಮಠದ ಶೀರೂರು ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರು ಕೇಸರಿ ಧ್ವಜವನ್ನು ಪ್ರದರ್ಶಿಸುವ ಮೂಲಕ ಮೆರವಣಿಗೆಗೆ ಚಾಲನೆ...

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

ಪಕ್ಷವನ್ನು ಮನೆಯಾಸ್ತಿ ಮಾಡಿಕೊಂಡಿದ್ದಕ್ಕೆ ಹೊರಬಂದೆ :ದಳಪತಿಗಳ ಟೀಕೆಗೆ ಶಿವಲಿಂಗೇಗೌಡ ಖಡಕ್ ತಿರುಗೇಟು

by Shwetha
January 27, 2026
0

ಹಾಸನ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಬಳಿಕ ಇದೇ ಮೊದಲ ಬಾರಿಗೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ತಮ್ಮ ಪಕ್ಷಾಂತರದ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಮಂತ್ರಿಯಾಗುವ...

ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ  ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

ವಿಷ ಬೇಕಾದರೂ ಕುಡಿಯುವರು, ಅಲ್ಪಸಂಖ್ಯಾತರನ್ನು ಬೆಂಬಲಿಸಲ್ಲ: ಬಿಜೆಪಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ರೋಶ

by Shwetha
January 27, 2026
0

ದಾವಣಗೆರೆ: ಬಿಜೆಪಿಯವರು ಯಾವುದೇ ಕಾರಣಕ್ಕೂ ಅಲ್ಪಸಂಖ್ಯಾತರ ಪರ ನಿಲ್ಲುವುದಿಲ್ಲ. ಅವರು ಬೇಕಾದರೆ ವಿಷ ಕುಡಿಯಲು ಸಿದ್ಧರಾಗುತ್ತಾರೆಯೇ ಹೊರತು, ಅಲ್ಪಸಂಖ್ಯಾತರನ್ನು ಬೆಂಬಲಿಸುವುದಿಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram