ಬಿಜೆಪಿಯಿಂದ ನಿಂತು ಸೋತಿದ್ದೆ, ಆ ತಪ್ಪು ಮತ್ತೆ ಮಾಡಲ್ಲ : ಜಿ.ಟಿ.ದೇವೇಗೌಡ
ಮೈಸೂರು : ಹಿಂದೆ ಹುಣಸೂರು ಜನರ ಮಾತು ಕೇಳದೆ ಬಿಜೆಪಿಯಿಂದ ಚುನಾವಣೆಗೆ ನಿಂತು ಸೋತಿದ್ದೆ. ಅಂತಹ ತಪ್ಪನ್ನು ಮತ್ತೆ ಮಾಡುವುದಿಲ್ಲ ಎಂದು ಜೆಡಿಎಸ್ ಪಕ್ಷ ತೊರೆಯುವ ಬಗ್ಗೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಜಿ ಟಿ ದೇವೆಗೌಡ ಅವರು ಸದ್ಯದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ವಿಚಾರವಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್ನ ಲ್ಲೇ ಇರಬೇಕಾ, ಕಾಂಗ್ರೆಸ್ ಸೇರಬೇಕಾ ಅಥವಾ ಬಿಜೆಪಿಗೆ ಹೋದರೆ ಒಳ್ಳೆಯದಾ ಎಂಬ ಬಗ್ಗೆ ಕೊರೊನಾ ಕಡಿಮೆಯಾದ ನಂತರ ಕ್ಷೇತ್ರದ ಪ್ರವಾಸ ಮಾಡಿ ಮತದಾರರ ಅಭಿಪ್ರಾಯದಂತೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಹಿಂದೆ ಹುಣಸೂರು ಜನರ ಮಾತು ಕೇಳದೆ ಬಿಜೆಪಿಯಿಂದ ಚುನಾವಣೆಗೆ ನಿಂತು ಸೋತಿದ್ದೆ. ಅಂತಹ ತಪ್ಪನ್ನು ಮತ್ತೆ ಮಾಡುವುದಿಲ್ಲ ಎಂದು ಹೇಳಿದರು.
ಈ ವೇಳೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವೆ ನಡೆಯುತ್ತಿರುವ ಜಟಾಪಟಿ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣೆಗೆ ಇನ್ನೂ 23 ತಿಂಗಳು ಬಾಕಿಯಿದೆ. ಈಗಲೇ ಅಧಿಕಾರದ ಬಗ್ಗೆ ಮಾತನಾಡಬಾರದು. ಯಾರಿಗೆ ಅಧಿಕಾರ ನೀಡಬೇಕು ಎಂಬುದನ್ನು ಮತದಾರರು ತೀರ್ಮಾನ ಮಾಡುತ್ತಾರೆ. ಅಲ್ಲಿಯವರೆಗೆ ಕಾಯಬೇಕು ಎಂದರು.