ಸಾಲ ಕೊಡದಿದ್ದಕ್ಕೆ ಪಾನ್ ಶಾಪ್ ಮಾಲೀಕನ ಹತ್ಯೆ belagavi saaksha tv
ಬೆಳಗಾವಿ : ನಿನ್ನೆ ರಾತ್ರಿ ಕುಂದಾನಗರಿ ಬೆಳಗಾವಿ ಪಾನ್ ಶಾಪ್ ಮಾಲೀಕನ ಕೊಲೆಯಿಂದಾಗಿ ಅಕ್ಷಶಃ ಬೆಚ್ಚಿಬಿದ್ದಿದೆ.
ಮಂಗಳವಾರ ರಾತ್ರಿ ಬೆಳಗಾವಿಯ ವಡಗಾವಿ ಪ್ರದೇಶದ ಲಕ್ಷ್ಮೀ ನಗರದಲ್ಲಿ ಗುಟ್ಕಾ ಸಾಲ ಕೊಡಲಿಲ್ಲ ಎಂಬ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬಾಳಕೃಷ್ಣ ಶೆಟ್ಟಿ ಕೊಲೆಯಾದವರಾಗಿದ್ದು, ದತ್ತಾತ್ರೇಯ ಶಿವಾನಂದ ಜತ್ತಿನಮಠ ಕೊಲೆ ಆರೋಪಿಯಾಗಿದ್ದಾರೆ.
ಮಂಗಳವಾರ ರಾತ್ರಿ ಬಾಳಕೃಷ್ಣ ಶೆಟ್ಟಿ ಪಾನ್ ಅಂಗಡಿಗೆ ಬಂದು ಗುಟ್ಕಾ ಸಾಲ ಕೊಡು ಎಂದಿದ್ದಾರೆ.
ಇದಕ್ಕೆ ಬಾಳಕೃಷ್ಣ, ಉದ್ರಿ ಕೊಡುವುದಿಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನು ದತ್ತಾತ್ರೇಯ ಶಿವಾನಂದ ಜತ್ತಿನಮಠ ಹತ್ಯೆ ಮಾಡಿದ್ದಾನೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಹಪುರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ದತ್ತಾತ್ರೇಯ ಶಿವಾನಂದ ಜತ್ತಿನಮಠನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.