ಹೆಚ್ ಡಿಡಿ ಮತ್ತು ಬಿಎಸ್ ವೈ ಸೇರಿ ಪ್ರಾದೇಶಿಕ ಪಕ್ಷ ಕಟ್ಟಲಿ
ಹಾಸನ : ಜೆಡಿಎಸ್ ವರಿಷ್ಠ ದೇವೇಗೌಡರು ಮತ್ತು ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು ಎಂದು ಬೇಲೂರು ಕ್ಷೇತ್ರದ ಜೆಡಿಎಸ್ ಶಾಸಕ ಲಿಂಗೇಶ್ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿದ ಜೆಡಿಎಸ್ ಶಾಸಕ ಲಿಂಗೇಶ್, ಸದ್ಯದ ರಾಜಕೀಯ ಬೆಳವಣಿಗೆಗಳು ಬೇಸರ ತರುವಂತಹದ್ದು.
ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಾಯಕತ್ವ ಬದಲಾವಣೆ ತಂದು ರಾಜಕೀಯ ದೊಂಬರಾಟ ಸೃಷ್ಟಿಸಿದ್ದಾರೆ. ಸೈದ್ಧಾಂತಿಕವಾಗಿ ನಾವು ಬಿಜೆಪಿಯನ್ನು ವಿರೋಧಿಸುತ್ತೇವೆ.
ಆದರೆ ವೈಯುಕ್ತಿಕವಾಗಿ ಅಧಿಕಾರ ಮುಗಿಯುವವರೆಗೂ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಒತ್ತಾಯಿಸಿದರು.
ಇನ್ನು ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ದೇವೇಗೌಡರು ಹಾಗೂ ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು.
ಪಕ್ಷಗಳಿಂದ ಹೊರಬರುವ ಎಲ್ಲ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಬಳಿಕ ಪಕ್ಷವನ್ನು ಅಧಿಕಾರಕ್ಕೆ ತಂದು ಉತ್ತಮ ಆಡಳಿತ ನೀಡಬೇಕು ಎಂದು ಅಭಿಪ್ರಾಯಪಟ್ಟರು.