Siddaramaiah | ಅನೈತಿಕ ರಾಜಕಾರಣದ ಅಸಲಿ ಅಪ್ಪ : ಸಿದ್ದು ವಿರುದ್ಧ ಹೆಚ್ ಡಿಕೆ ಕಿಡಿ
ಬೆಂಗಳೂರು : ನೀವು ರಾಜ್ಯ ಕಂಡ ಗ್ರೇಟ್ ಹಣಕಾಸು ಮಂತ್ರಿ, ಪ್ಲಸ್ಸೂ ಮೈನಸ್ಸಿನ ಪ್ರವೀಣ, ಪರ್ಸಂಟೇಜ್ ಪಿತಾಮಹನಷ್ಟೇ ಅಲ್ಲ.. ಅನೈತಿಕ ರಾಜಕಾರಣದ ಅಸಲಿ ಅಪ್ಪ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಹೆಚ್ ಡಿ ಕುಮಾರಸ್ವಾಮಿ, ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ ಎಂದು ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ. 2/11
— H D Kumaraswamy (@hd_kumaraswamy) April 19, 2022
ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ; ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ.
ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ 5 ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ ಎಂದು ಕಿಡಿಕಾರಿದೆ.
ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹಲುಬುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ.
ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ. 4/11— H D Kumaraswamy (@hd_kumaraswamy) April 19, 2022
ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹಲುಬುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ. ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ.
ಆಪರೇಷನ್ ಕಮಲದಿಂದ ನಿಮ್ಮ ಜೇಬು ಸೇರಿದ ಆಕರ್ಷಕ ಅಂಕಿಯ ಹಣದ ಅಸಲೀಯೆತ್ತು ನನಗೂ ಗೊತ್ತು! ನೀವು ರಾಜ್ಯ ಕಂಡ ಗ್ರೇಟ್ ಹಣಕಾಸು ಮಂತ್ರಿ, ಪ್ಲಸ್ಸೂ ಮೈನಸ್ಸಿನ ಪ್ರವೀಣ, ಪರ್ಸಂಟೇಜ್ ಪಿತಾಮಹನಷ್ಟೇ ಅಲ್ಲ.. ಅನೈತಿಕ ರಾಜಕಾರಣದ ಅಸಲಿ ಅಪ್ಪ. ಈಗ ಹೇಳಿ? ಉಂಡ ಮನೆಗೆ ಮೂರು ಬಗೆದ ನೈಜ ಕಳ್ಳ ಯಾರು ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. H D Kumaraswam slams siddaramaiah- JDS tweet