ಹುಬ್ಬಳ್ಳಿ : ಹೆಚ್ ಡಿ ಕುಮಾರಸ್ವಾಮಿ ಕೊಲಂಬೋದ ಕ್ಯಾಸಿನೋಗೆ ಹೋಗಿದ್ದರು ಎಂಬ ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ” ಕ್ಯಾಸಿನೊದಲ್ಲಿ ರಾಜಕೀಯ ಚರ್ಚೆ ಮಾಡಬಾರದು ಅಂತಾ ರೂಲ್ಸ್ ಇದೆಯೇ? ಎಂದು ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲಂಬೋದ ಕ್ಯಾಸಿನೋಗೆ ಯಾರು ಹೋಗಿದ್ದಾರೋ ಅವರಿಗೇ ಗೊತ್ತು. ನಾನು ಹೋಗಿರಲಿಲ್ಲ. ಅಲ್ಲದೆ ಈ ಕುರಿತು ಸ್ವತಃ ಕುಮಾರಸ್ವಾಮಿಯವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಲ್ಲ ವಿಚಾರವನ್ನು ಅವರು ತಿಳಿಸುತ್ತಾರೆ. ಜೆಡಿಎಸ್ ಶಾಸಕರು, ಮಾಜಿ ಶಾಸಕರು ಕೊಲಂಬೋದ ಪ್ರವಾಸಕ್ಕೆ ಹೋಗಿದ್ದು ನಿಜ. ಈ ವೇಳೆ ಕ್ಯಾಸಿನೋಗೂ ಹೋಗಿರಬಹುದು. ಆದರೆ ಯಾರು ಹೋಗಿದ್ದಾರೆ ಅವರಿಗೇ ಗೊತ್ತು. ನಾನು ಹೋಗಿರಲಿಲ್ಲ. ಆ ಸಂದರ್ಭದಲ್ಲಿ ನನ್ನ ಚುನಾವಣೆ ಇತ್ತು. ಹೀಗಾಗಿ ನಾನು ಹೋಗಿರಲಿಲ್ಲ. ಈಗ ಕೊಲಂಬೋ ಪ್ರವಾಸದ ವಿಚಾರ ಹೊರಗೆ ಬಂದಿದೆ. ಬಹಳ ಜನರು ಹೋಗಿ ಬಂದಿದ್ದಾರೆ. ಕುಮಾರಸ್ವಾಮಿ ತಪ್ಪು ಸರಿನೋ ನೇರವಾಗಿ ಹೇಳುತ್ತಾರೆ ಎಂದು ತಿಳಿಸಿದರು.
ಕುಮಾರಸ್ವಾಮಿ ಅವರು ಹೇಳುವ ಧೈರ್ಯ ಮಾಡಿದ್ದಾರೆ, ಅದನ್ನ ಮೆಚ್ಚಲೇಬೇಕು ಎಂದ ಹೊರಟ್ಟಿ, ಗಾಂಜಾ ಡ್ರಗ್ಸ್ ವಿಚಾರದಲ್ಲಿ ಒಮ್ಮೆ ಎಲ್ಲರ ಹೆಸರು ಬಯಲಿಗೆ ಬಂದು ಬಿಡಲಿ. ಆಗ ಎಲ್ಲವೂ ಸರಿ ಆಗುತ್ತದೆ. ನಮ್ಮನ್ನು ಸಹ ಕೊಲಂಬೋ ಪ್ರವಾಸಕ್ಕೆ ಕರೆದಿದ್ದರು. ಆದರೆ ನಾನು ಹೋಗಿರಲಿಲ್ಲ. ರಾಜಕೀಯ ಚರ್ಚೆ ಮಾಡಲು ಹೋಗಿದ್ದರು. ಕ್ಯಾಸಿನೊದಲ್ಲಿ ರಾಜಕೀಯ ಚರ್ಚೆ ಮಾಡಬಾರದು ಅಂತಾ ರೂಲ್ಸ್ ಇದೆಯೇ? ರಾಜಕೀಯ ಉದ್ದೇಶವಾಗಿ ಹೋಗಿದ್ದಾರೆ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಹೇಳಿದ್ದಾರೆ.
https://www.youtube.com/watch?v=eUEuO-_AiJA