ಕುಮಾರಸ್ವಾಮಿಗೆ ಅಣ್ಣನ ಸ್ಥಾನ ಕೊಟ್ಟಿದ್ದೇನೆ : ಮಧುಬಂಗಾರಪ್ಪ
ಬೆಂಗಳೂರು : ನಾನು ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಅಣ್ಣ ಸ್ಥಾನ ಕೊಟ್ಟಿದ್ದೇನೆ ಎಂದು ಕಾಂಗ್ರೆಸ್ ಪರ ಕೆಲಸ ಆರಂಭಿಸಿದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಸಮಾಲೋಚನೆ ನಡೆಸಿ ಸುದ್ದಿಗೋಷ್ಠಿ ನಡೆಸಿದ ಮಧುಬಂಗಾರಪ್ಪ ಬೆನ್ನಿಗೆ ಚೂರಿ ಹಾಕುವುದು ಹೊಸದಲ್ಲ ಎನ್ನುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಅವರಿಗೆ ಅಣ್ಣನ ಸ್ಥಾನ ಕೊಟ್ಟಿದ್ದೇನೆ. ಅದನ್ನು ಅಷ್ಟಕ್ಕೇ ಮಾತ್ರ ಸೀಮಿತಗೊಳಿಸುತ್ತೇನೆ. ಕುಮಾರಸ್ವಾಮಿ ಏನೇ ಅಂದ್ರು, ಅವರ ಬಗ್ಗೆ ಗೌರವಿದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದರು.
ಇನ್ನ ನಾನು ಅವರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಪ್ರತಿಕ್ರಿಯೆ ಕೊಡಲು ಮನಸ್ಸು ಒಪ್ಪುತ್ತಿಲ್ಲ. ಕಳೆದ 10 ವರ್ಷಗಳಲ್ಲಿ ಏನೇನು ಆಗಿದೆ.
ಈ ಬಗ್ಗೆ ನೀವೇ ವಿಶ್ಲೇಷಣೆ ಮಾಡಬಹುದು. ಜೆಡಿಎಸ್ ಬಿಟ್ಟ ಬಗ್ಗೆ ಕೂಡ ಮಾತನಾಡಲ್ಲ ಎಂದು ಮಧುಬಂಗಾರಪ್ಪ ಹೇಳಿದರು.
ಇದೇ ವೇಳೆ ಗೀತಾ ಶಿವರಾಜ್ ಕುಮಾರ್ ಅವರ ಕೂಡ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.