ರಸ್ತೆಯೇ ಕಳಪೆ.. ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ?
ಬೆಂಗಳೂರು : ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಟುಕಿದ್ದಾರೆ.
ಕಳಪೆ ರಸ್ತೆ ಕಾಮಗಾರಿ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಐತಿಹಾಸಿಕ ವಾರ್ಡುಗಳ ಹೆಸರುಗಳನ್ನು ಬದಲಿಸಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಚರಿತ್ರೆಯ ಕುರುಹುಗಳನ್ನು ಅಳಿಸಿ ಹಾಕಿ ಪಠ್ಯಕ್ಕೆ ಅಪಚಾರ ಎಸಗಿದಂತೆ ನಾಡಪ್ರಭುಗಳು ಮತ್ತು ಮೈಸೂರು ಒಡೆಯರರ ಘನ ಕೀರ್ತಿಗೆ ಚ್ಯುತಿ ತರುವ ಹುನ್ನಾರ ಇದಷ್ಟೇ.

“ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು” ಎಂದು ಹೈಕೋರ್ಟ್ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು.
"ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಬೇಕು ಎಂದರೆ ರಾಷ್ಟ್ರಪತಿಗಳು ಮತ್ತು ಪ್ರಧಾನಿ ಆಗಾಗ್ಗೆ ನಗರಕ್ಕೆ ಭೇಟಿ ನೀಡುತ್ತಿರಬೇಕು" ಎಂದು ಹೈಕೋರ್ಟ್ ಛೀಮಾರಿ ಹಾಕಿದೆ. ನಗರದ ಜನರ ಬವಣೆಗೆ ಹಿಡಿದ ಕನ್ನಡಿ ಇದು.6/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 25, 2022
“ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು” ಎಂದು ಕೋರ್ಟ್ ಚಾಟಿ ಬೀಸಿದೆ.
"ಮೊನ್ನೆಯಷ್ಟೇ ಪ್ರಧಾನಿ ಬಂದು ಹೋಗಿದ್ದಾರೆ. ಅದಕ್ಕಾಗಿ 23 ಕೋಟಿ ಖರ್ಚು ಮಾಡಿ ನಗರದ ರಸ್ತೆ ಗುಂಡಿ ಮುಚ್ಚಲಾಗಿದೆ. ಇದನ್ನು ಗಮನಿಸಿದರೆ ಪ್ರಧಾನಿ ನಗರದ ಬೇರೆ ಬೇರೆ ಮಾರ್ಗಗಳಲ್ಲಿ ಆಗಾಗ್ಗೆ ಸಂಚರಿಸಬೇಕು. ಆಗ ಅವರನ್ನು ಮೆಚ್ಚಿಸುವ ಸಲುವಾಗಿಯಾದರೂ ಅಧಿಕಾರಿಗಳು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬಹುದು" ಎಂದು ಕೋರ್ಟ್ ಚಾಟಿ ಬೀಸಿದೆ.7/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 25, 2022
ಇನ್ನು, ಪ್ರಧಾನಿಗಳಿಗಾಗಿ ಸಿದ್ಧಪಡಿಸಿದ ರಸ್ತೆಯೇ ಕುಸಿದುಬಿದ್ದಿದೆ. 40% ಕಮಿಷನ್ & ಕಳಪೆ ಕಾಮಗಾರಿಯ ಫಲಶ್ರುತಿ ಇದು. ದೇಶದ ಪ್ರಧಾನಿಯೇ ಸಂಚರಿಸಿದ ರಸ್ತೆಯೇ ಕಳಪೆ!! ಬಿಜೆಪಿ ಅಭಿವೃದ್ಧಿ ಮಾದರಿ ಎಂದರೆ ಇದೇನಾ? ಐಟಿ ಸಿಟಿಯ ಸ್ಥಿತಿ ಅಯ್ಯೋ ಎನ್ನುವಂತಿದೆ ಎಂದು ಕಿಡಿಕಾರಿದ್ದಾರೆ.






