HD Kumaraswamy | ಸಾವರ್ಕರ್ ಮೊಮ್ಮಗನನ್ನು ಕಟ್ಟಿಕೊಂಡು ನನಗೆ ಏನಾಗಬೇಕು
ಮಡಿಕೇರಿ : ಸಾವರ್ಕರ್ ಮೊಮ್ಮಗನನ್ನು ಕಟ್ಟಿಕೊಂಡು ನನಗೆ ಏನಾಗಬೇಕು. ನನ್ನ ಹೊಟ್ಟೆಗೆ ಹಿಟ್ಟಿಲ್ಲದೇ ಸಾಯುತ್ತಿದ್ದಾರೆ, ಅವರ ಉಪದೇಶ ಕಟ್ಟಿಕೊಂಡ ನನಗೆ ಏನೂ ಆಗಬೇಕಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಒಂದು ದೆಶ ಒಂದೇ ಭಾಷೆ ಹಿಂದಿ ಆಗಿರಬೇಕು. ಹಿಂದೂ ರಾಷ್ಟ್ರವಾಗಿರಬೇಕು ಎಂದು ಸಾತ್ಯಕಿ ಸಾವರ್ಕರ್ ಹೇಳಿಕೆ ನೀಡಿದ್ದು, ಇದಕ್ಕೆ ಮಡಿಕೇರಿಯಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸಾವರ್ಕರ್ ಮೊಮ್ಮಗ ಯಾರು, ಆ ಮನುಷ್ಯನಿಗೆ ಏನು ಗೊತ್ತಿದೆ ಎಂದು ಪ್ರಶ್ನಿಸಿದರು..
ಮೊದಲು ಜನರ ಬದುಕನ್ನು ಕಟ್ಟಲು ನೋಡಿ, ಆ ಮೇಲೆ ನಿಮ್ಮ ಹಿಂದಿ ಭಾಷೆ ಬಗ್ಗೆ ಚರ್ಚೆ ಮಾಡಿ, ಸಾವರ್ಕರ್ ಮಗನೋ, ಮೊಮ್ಮಗನೋ ಇಲ್ಲಿಗೆ ಒಂದು ನಮಗೆ ಬೋಧನೆ ಮಾಡುವುದು ಏನಿದೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ ನಿಧನಕ್ಕೆ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.