ರಾಜ್ಯದಲ್ಲಿ ನಾನೂ ಸೇರಿ ನಾಲ್ವರು ಸಿಎಂ ಆಗಬಹುದು : HDK
ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಕಾವು ಹೆಚ್ಚಾದಂತೆಲ್ಲಾ ಸಿಎಂ ಸ್ಥಾನದಿಂದ ಬಸವರಾಜ್ ಬೊಮ್ಮಾಯಿ ಅವರ ಬದಲಾವಣೆ ವಿಚಾರ ಭಾರೀ ಚರ್ಚೆಯಾಗ್ತಿದೆ.. ಇದೀಗ ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೂವರಲ್ಲ ನಾನು ಸೇರಿದಂತೆ ರಾಜ್ಯದಲ್ಲಿ ನಾಲ್ವರು ಸಿಎಂ ಆಗಬಹುದು ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಜಾಗತಿಕ ಮಟ್ಟದಲ್ಲೂ ಭಾರತದ ಮೇಲೆ ಕೂಡ ವಿಶ್ವಾಸ ಕಡಿಮೆಯಾಗಿದೆ ಎಂದರು. ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮೂವರು ಸಿಎಂ ಆಗಬಹುದು ಎಂಬ ಮಾತು ಕೇಳಿಬರುತ್ತಿದೆ. ರಾಜ್ಯದಲ್ಲಿ ಮೂವರಲ್ಲ, ನನ್ನನ್ನೂ ಸೇರಿಸಿ ನಾಲ್ವರು ಮುಖ್ಯಮಂತ್ರಿಗಳು ಆಗಬಹುದು ಎಂದು ಹೇಳಿದ್ದಾರೆ.
ಇದೇ ವೇಳೆ ಬಿಟ್ ಕಾಯಿನ್ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದ್ದಾದರೂ ಹೇಗೆ, ಆತನಿಗೆ ಜಾಮೀನು ನೀಡಿದ್ದು ಯಾರು, ಹಲವರ ಹೆಸರು ಪ್ರಕರಣದಲ್ಲಿ ಕೇಳಿ ಬರುತ್ತಿದೆ. ದೊಡ್ಡ ಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ. ಅಷ್ಟು ಸುಲಭವಾಗಿ ಬಿಟ್ ಕಾಯಿನ್ ಆರೋಪಿಗೆ ಜಾಮೀನು ಸಿಕ್ಕಿದೆ ಅಂದರೆ ಸರ್ಕಾರಿ ಅಭಿಯೋಜಕರು ಯಾವ ರೀತಿ ವಾದ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.