ಜನತಾ ಪರಿವಾರದವರೇ ಹೆಚ್ಚು ಮುಖ್ಯಮಂತ್ರಿಯಾಗಿದ್ದಾರೆ : ಹೆಚ್.ಡಿ.ರೇವಣ್ಣ
ಹಾಸನ : ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಯಾಗಿದ್ದಾರೆ ಎಂದು ನೂತನ ಮುಖ್ಯಮಂತ್ರಿ ಬಗ್ಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ಉದಯಪುರದಲ್ಲಿ ಮುಖ್ಯಮಂತ್ರಿ ಬಗ್ಗೆ ಮಾತನಾಡಿದ ಅವರು, ಯುವ ಮುಖಂಡ ಮುಖ್ಯಮಂತ್ರಿ ಆಗಿರುವುದು ಸಂತೋಷ.
ಅವರು ಭ್ರಷ್ಟಾಚಾರ ತೆಗೆಯೋದು ನಮ್ಮಗುರಿ ಅಂದಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡಲಿ. ಹಿಂದಿನ ಎರಡು ವರ್ಷ ಸುಲಿಗೆ ನಡೆಯುತ್ತಿತ್ತು.
ಈಗಿನ ಮುಖ್ಯಮಂತ್ರಿ ಒಳ್ಳೆ ಕೆಲಸ ಮಾಡಿ ಜನರ ವಿಶ್ವಾಸ ಗಳಿಸಲಿ ಎಂದು ಆಶಿಸಿದರು.
ಇನ್ನು ಹಾಸನ ಜಿಲ್ಲೆಯ ಕೆಲಸ ತಡೆ ಹಿಡಿದದ್ದಾಗಿ ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಹೊಸ ಮುಖ್ಯಮಂತ್ರಿ ಬಂದಿದ್ದಾರೆ.
ಅವರು ರೈತಪರ, ಒಳ್ಳೆಯ ಕೆಲಸ ಮಾಡಲಿ. ಜನತಾ ಪರಿವಾರದಿಂದ ಬಂದವರೇ ಹೆಚ್ಚು ಜನ ಮುಖ್ಯಮಂತ್ರಿಗಳಾಗಿರುವುದು.
ಆ ಭಗವಂತ ಅವರಿಗೆ ಒಳ್ಳೆಯದು ಮಾಡಲಿ ಎಂದು ಶುಭ ಹಾರೈಸಿದ್ದಾರೆ.