ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ : ರೇವಣ್ಣ ಕಿಡಿ
ಹಾಸನ : ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ. ಪ್ರತೀ ಯೂನಿಟ್ ಗೆ 40 ಪೈಸೆ ಅಂದರೆ ಎಷ್ಟು ಹಣವಾಗುತ್ತೆ ಹೇಳಿ ಎಂದು ಕೆಇಬಿ ಬಿಲ್ ಹೆಚ್ಚು ಮಾಡಿರುವ ಬಗ್ಗೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ ಎಂದು ಕಿಡಿಕಾರಿದರು.
ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ ಎಂದು ಗುಡುಗಿದ ರೇವಣ್ಣ, ಪ್ರತೀ ಯೂನಿಟ್ ಗೆ 40 ಪೈಸೆ ಅಂದರೆ ಎಷ್ಟು ಹಣವಾಗುತ್ತೆ ಹೇಳಿ ಎಂದು ಪ್ರಶ್ನಿಸಿ, ರಾಜ್ಯದಲ್ಲಿ ರಾಜಕೀಯ ದ್ವೇಷ ಹೆಚ್ಚಾಗಿದೆ.
ರಾಜಕೀಯ ದುರುದ್ದೇಶ ಹೆಚ್ಚಾಗಿದೆ. ಇದು ಬಿಜೆಪಿಗೇ ತಿರುಗುಬಾಣವಾಗಲಿದೆ. ವಿಪಕ್ಷಗಳನ್ನ ಹತ್ತಿಕ್ಕಲು ದುರುದ್ದೇಶದಿಂದ ನಾಲ್ಕು ವರ್ಷದ ಹಿಂದಿನ ಕೇಸ್ ನ್ನು ಮತ್ತೆ ರೀಓಪನ್ ಮಾಡಿದ್ದಾರೆ.
ತನಿಖಾ ಸಂಸ್ಥೆಗಳನ್ನ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿನಯ್ ಕುಲಕರ್ಣಿ ಬಂಧನದ ಬಗ್ಗೆ ಪ್ರತಿಕ್ರಿಯಿಸಿದರು.
ಖಾಸಗಿ ಶಾಲೆ ಮುಖ್ಯಸ್ಥರು ಸೇರಿ ಇಡೀ ದಿನ ಸರಣಿ ಸಭೆ: ಶಾಲೆ ಆರಂಭಕ್ಕೆ ಸಿಗಲಿದ್ಯಾ ಗ್ರಿನ್ಸಿಗ್ನಲ್…?
ಇನ್ನು ಜೆಇಬಿ ಬಿಲ್ ಹೆಚ್ಚು ಮಾಡಿರುವುದನ್ನ ವಿರೋಧಿಸಿ ನೀರಾವರಿ ಕಚೇರಿ ಮುಂದೆ ಪ್ರತಿಭಟನೆ ಮಾಡ್ಬೇಕಾಗುತ್ತದೆ. ನನ್ನನ್ನ ಜೈಲಿಗೆ ಹಾಕಲಿ ನಾನು ಹೋರಾಟ ಮಾಡುತ್ತೇನೆ ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ.
ರಾಜ್ಯದ ಐದು ಕೆಇಬಿ ಕಂಪನಿಗಳಿಂದ 7996 ಕೋಟಿ ನಷ್ಟವಿದೆ ಎಂದು ಕೆಆರ್ ಸಿ ಕಂಪನಿಗಳು ಅರ್ಜಿ ಹಾಕಿದ್ದಾರೆ. ಈ ಕಂಪನಿಗಳು ಈ ಹಣ ಭರಿಸುವಂತೆ ಸರ್ಕಾರಕ್ಕೆ ಅರ್ಜಿ ಹಾಕಿದ್ದಾರೆ.
ಈ ನಷ್ಟ ಸರಿದೂಗಿಸಲು ಸರ್ಕಾರ ನಮ್ಮ ರೈತರನ್ನ ಸಂಕಷ್ಟಕ್ಕೆ ತಂದೊಡ್ಡಿದೆ. ಪ್ರತೀ ಯೂನಿಟ್ ಗೆ 40 ಪೈಸೆ ಹೆಚ್ಚು ಮಾಡಿದ್ದಾರೆ. ರಾಜ್ಯದ ಇಂಧನ ಇಲಾಖೆಯಲ್ಲಿ ಇದೊಂದು ದುರದೃಷ್ಟಕರ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿದ್ದು ಎದ್ದು ಗೆದ್ದು ಬರುವೆನು : ವಿನಯ್ ಕುಲಕರ್ಣಿ
ಮುಂದುವರಿದು ಮಾತನಾಡಿದ ರೇವಣ್ಣ, ರಾಜ್ಯದಲ್ಲಿ 48 ಸಾವಿರ ಕುಟುಂಬಕ್ಕೆ ವೃದ್ಧಾಪ್ಯ ವೇತನ ಬಂದಿಲ್ಲ. ಈ ಸರ್ಕಾರ ಲೂಟಿಕೋರರ ಸರ್ಕಾರ. ಕೆಲ ಗುತ್ತಿಗೆದಾರರು ಅವರ ಹೆಂಡತಿಯ ತಾಳಿ ಮಾರಾಟ ಮಾಡ್ತಿದ್ದಾರೆ.
ಪ್ರಧಾನಿ ಮೋದಿಯವರೇ ನಮ್ಮದು 10 ಪಸೆರ್ಂಟ್ ಸರ್ಕಾರ ಅಂತ ಹೇಳ್ತಿದ್ರೀ. ಈಗ ರಾಜ್ಯದಲ್ಲಿರುವ ನಿಮ್ಮದು ಯಾವ ಸರ್ಕಾರ ಹೇಳಿ ಎಂದು ಪ್ರಧಾನಿ ವಿರುದ್ಧ ಟೀಕೆ ಮಾಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel