ಬೆಂಗಳೂರು : ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೆ ಫಾಝಿಲ್ ಗೆ ಗಲ್ಲು ಶಿಕ್ಷೆ ಆಗಬೇಕು, ಅದೇ ರೀತಿ ನಾನು ಭಾಗಿಯಾಗಿದ್ದರೆ ನನಗೂ ಗಲ್ಲು ಶಿಕ್ಷೆ ಆಗಬೇಕು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ನಗರದಲ್ಲಿ ಡ್ರಗ್ ಮಾಫಿಯಾದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿರುವ ಬಗ್ಗೆ ಮಾತನಾಡಿದ ಜಮೀರ್, ನಾನು ಯಾವುದೇ ತಪ್ಪನ್ನೂ ಮಾಡಿಲ್ಲ. ಸಂಜನಾ ನನ್ನ ಜೊತೆ ಹೋಗಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಸಂಜನಾ ಏನಾದರೂ ದಾಖಲೆ ಕೊಟ್ಟಿದ್ದಾರ, ಈಗ ಸಂಜನಾ ಬಿಟ್ಟು ಫಾಝಿಲ್ ಇಟ್ಟುಕೊಂಡಿದ್ದೀರ, ನಾನು ಎಲ್ಲೂ ತಪ್ಪು ಮಾಡಿಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಂಜನಾ ಜೊತೆ ಜಮೀರ್ ಹೋಗಿದ್ದರೂ ಅಂತ ಸಂಬರಗಿ ಹೇಳಿದ್ದು, ಹೀಗಾಗಿ ಅವರನ್ನೇ ಕೇಳಿ. ಸಂಜನಾ ಜೊತೆ ನಾನು ಹೋಗಿರೋ ಒಂದು ಫೋಟೋ ತೋರಿಸಲಿ ಎಂದು ಸವಾಲ್ ಹಾಕಿದ್ದಾರೆ.
ಪೊಲೀಸ್ ಠಾಣೆಯಲ್ಲೂ ಸಂಬರಗಿ ವಿರುದ್ಧ ದೂರು ಕೊಟ್ಟಿದ್ದೇನೆ. ಕಾನೂನಿನ ಮೂಲಕ ಹೋರಾಟ ಮಾಡುತ್ತಿದ್ದೇನೆ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನಮ್ಮ ರಾಜ್ಯದ ಪೊಲೀಸರು ಯಾವ ರಾಜ್ಯದಲ್ಲೂ ಇಲ್ಲ. ನಂಬರ್ ಒನ್ ಪೊಲೀಸರು ಎಂದರೆ ಕರ್ನಾಟಕ ಪೊಲೀಸ್. ಅವರ ಬಗ್ಗೆ ವಿಶ್ವಾಸ ಇದೆ. ಎಲ್ಲೋ ಒಂದು ಕಡೆ ರಾಜಕೀಯ ಕೈವಾಡ ಇದೆ. ನಾನು ಬೆಳೆಯುತ್ತಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನನ್ನನ್ನು ಮುಗಿಸಬೇಕು ಎಂದು ತೀರ್ಮಾನ ಮಾಡುತ್ತಿದ್ದಾರೆ. ಆದರೆ ಜಮೀರ್ ಮುಗಿಸುವುದು ಅಷ್ಟು ಸುಲಭ ಅಲ್ಲ. ನಾನು ಯಾವುದೇ ತಪ್ಪು ಮಾಡಲು ಹೋಗುವುದಿಲ್ಲ ಎಂದು ಇದೇ ವೇಳೆ ಜಮೀರ್ ಪ್ರಮಾಣ ಮಾಡಿದರು.
ಇದೇ ವೇಳೆ ಫಾಝಿಲ್ ಬಗ್ಗೆ ಮಾತನಾಡಿದ ಜಮೀರ್, ನನಗೂ ಫಾಝಿಲ್ ಗೂ ಪರಿಚಯ ಇಲ್ಲ. ಕಳ್ಳ ನನ್ನ ಜೊತೆ ನಿಂತು ಫೋಟೋ ತೆಗೆಸಿಕೊಂಡರೆ ನಾನು ಕಳ್ಳ ಅನ್ನೋಕೆ ಆಗುತ್ತಾ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ನನ್ನ ಜೊತೆ ಯಾರೋ ಫೋಟೋ ತೆಗೆಸಿಕೊಳ್ಳುತ್ತಾರೆ. ಆದ್ದರಿಂದ ನಾನು ಭಾಗಿಯಾಗಿರುತ್ತೀನಾ ಎಂದು ಪ್ರಶ್ನೆ ಮಾಡಿದರು. ಡ್ರಗ್ಸ್ ದಂಧೆಯಲ್ಲಿ ಫಾಝಿಲ್ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ಫಾಝಿಲ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಮೂರು ವರ್ಷಗಳಿಂದ ಅವನು ನನಗೆ ಕಂಡೇ ಇಲ್ಲ ಎಂದು ಜಮೀರ್ ಹೇಳಿದರು.
ಕೊಲಂಬೋಗೆ ಹೋಗುವುದು ತಪ್ಪಾ. ನಾನು ನನ್ನ ಫ್ಯಾಮಿಲಿ ಜೊತೆ ಎರಡು ಭಾರಿ ಹೋಗಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಹೋಗಿದ್ದೇನೆ. ಜೆಡಿಎಸ್ ಶಾಸಕರ ಜೊತೆ ಕೊಲಂಬೋಗೆ ಹೋಗಿದ್ದೇವೆ. ಕೊಲಂಬೋಗೆ ಪ್ರವಾಸಕ್ಕೆ ಹೋಗಿದ್ದು, ಕೊಲಂಬೋಗೆ ಹೋದರೆ ಕ್ಯಾಸಿನೋಗೆ ಹೋದಂಗೆ ಅಂದುಕೊಳ್ಳೋದಾ. ನಾವು ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಹೋಗಿರುತ್ತೇವೆ ಎಂದು ಕುಮಾರಸ್ವಾಮಿ ಆರೋಪದ ವಿಚಾರವಾಗಿ ಜಮೀರ್ ಸ್ಪಷ್ಟಪಡಿಸಿದರು.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
https://youtu.be/nvEshrTmJgY