ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಲ್ಕತ್ತಾದ ಮಹಾರಾಜ- ದಾದಾನಿಗೆ 48ನೇ ಹುಟ್ಟು ಹಬ್ಬದ ಸಂಭ್ರಮ…!

admin by admin
July 8, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಕೊಲ್ಕತ್ತಾದ ಮಹಾರಾಜ- ದಾದಾನಿಗೆ 48ನೇ ಹುಟ್ಟು ಹಬ್ಬದ ಸಂಭ್ರಮ…!

ಸೌರವ್ ಗಂಗೂಲಿ… ಟೀಮ್ ಇಂಡಿಯಾದ ಮಾಜಿ ಆಟಗಾರ.. ಟೀಮ್ ಇಂಡಿಯಾದ ಮಾಜಿ ನಾಯಕ.. ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ… ಮಾಜಿ ವೀಕ್ಷಕ ವಿವರಣೆಕಾರ… ಟೀಮ್ ಇಂಡಿಯಾದ ದಿಕ್ಕು ದೆಸೆಯನ್ನೇ ಬದಲಿಸಿದ ನಾಯಕ.. ಗಾಡ್ ಆಫ್,ಆಫ್ ಸೈಡ್.. ಕೊಲ್ಕತ್ತಾದ ಮಹಾರಾಜ, ಸೌರವ್ ಗಂಗೂಲಿ ಅನ್ನೋ ಹೆಸರಿನ ಮುಂದೆ ಅದೆಷ್ಟೋ ಪದಪುಂಜಗಳು ಸೇರಿಕೊಳ್ತವೆ.
ಹೌದು, ಗಂಗೂಲಿಯ ಸ್ವಭಾವವೇ ಹಾಗೇ… ಕೆಲವರು ಅವರನ್ನು ಅಹಂಕಾರಿ ಅಂತನೂ ಕರೆಯುತ್ತಾರೆ. ಆದ್ರೆ ತಾನು ಅಂದುಕೊಂಡಿರುವುದನ್ನು ಸಾಧಿಸುವಂತಹ ಛಲ ಹಾಗೂ ಹಠವನ್ನು ಅವರು ಮೈಗೂಡಿಸಿಕೊಂಡಿದ್ದಾರೆ. ಇಲ್ಲದೇ ಇದ್ರೆ 20 ವರ್ಷಗಳ ಹಿಂದೆ ಒಡಕಿನ ಮನೆಯಾಗಿದ್ದ ಭಾರತ ಕ್ರಿಕೆಟ್ ತಂಡ ಇದೀಗ ವಿಶ್ವದ ಬಲಿಷ್ಠ ಟೀಮ್ ಇಂಡಿಯಾವಾಗುತ್ತಿರಲಿಲ್ಲ. ಇವತ್ತು ಧೋನಿ, ವಿರಾಟ್ ಕೊಹ್ಲಿ ನಾಯಕನಾಗಿ ಯಶಸ್ವಿನ ಅಲೆಯಲ್ಲಿ ತೇಲಾಡುತ್ತಿದ್ರೆ ಅದಕ್ಕೆ ಗಂಗೂಲಿಯೇ ಕಾರಣ. ಗಂಗೂಲಿ ಹಾಕಿಕೊಟ್ಟ ಭದ್ರ ಅಡಿಪಾಯದಿಂದಲೇ ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್ ನಲ್ಲಿ ರಾರಾಜಿಸಲು ಕಾರಣವಾಗಿದೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು.
ಅದೆಷ್ಟೋ ನಿಜವೋ ಗೊತ್ತಿಲ್ಲ. 1992ರಲ್ಲಿ ಅಂತ ಕಾಣುತ್ತೆ. ಸೌರವ್ ಗಂಗೂಲಿ ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದರು. ಆ ಪಂದ್ಯದಲ್ಲಿ ಗಂಗೂಲಿ 12ನೇ ಆಟಗಾರ. ಆದ್ರೆ ನೀರಿನ ಬಾಟಲ್ ತೆಗೆದುಕೊಂಡು ಹೋಗಲು ಒಪ್ಪದ ಕಾರಣ ಗಂಗೂಲಿ ಆ ನಂತರ ತಂಡದಿಂದಲೇ ಹೊರಗುಳಿಯಬೇಕಾಯ್ತು ಎಂಬ ಮಾತು ಇದೆ. ಬಳಿಕ 1996ರಲ್ಲಿ ಮತ್ತೆ ಭಾರತ ತಂಡಕ್ಕೆ ಎಂಟ್ರಿಕೊಟ್ಟ ಗಂಗೂಲಿ ಆ ನಂತರ ಹಿಂತಿರುಗಿ ನೋಡಲೇಇಲ್ಲ.
ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿದ್ದ ಗಂಗೂಲಿಗೆ ಕೋಚ್ ಮದನ್ ಲಾಲ್ ಇನಿಂಗ್ಸ್ ಆರಂಭಿಸುವಂತೆ ಸಲಹೆ ನೀಡಿದ್ದರು. ಬಳಿಕ ಸಚಿನ್ ಜೊತೆ ಸೇರಿ ಭಾರತ ಕ್ರಿಕೆಟ್ ತಂಡದ ರನ್ ಗತಿಯನ್ನು ಏರಿಸುವಲ್ಲಿ ಗಂಗೂಲಿ ಮತ್ತು ಸಚಿನ್ ಪಾತ್ರವೂ ಬಹಳಷ್ಟಿದೆ. ವಿಶ್ವದ ಅಪಾಯಕಾರಿ ಆರಂಭಿಕ ಜೋಡಿ ಅಂತನೇ ಫೇಮಸ್ ಆಗಿರುವ ಸಚಿನ್ ಮತ್ತು ಗಂಗೂಲಿ ಮಾಡಿರುವ ಸಾಧನೆಗಳು ಅಷ್ಟಿಷ್ಟಲ್ಲ.
ಅದು 2000ನೇ ವರ್ಷ. ಸಚಿನ್ ತೆಂಡುಲ್ಕರ್ ನಾಯಕತ್ವ ತನಗೆ ಬೇಡ. ತಂಡದ ಆಟಗಾರನಾಗಿರುತ್ತೇನೆ. ನಾಯಕತ್ವದ ಒತ್ತಡ ತನ್ನ ಆಟದ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ ಅನ್ನೋ ಕಾರಣ ನೀಡಿ ನಾಯಕತ್ವವನ್ನು ತ್ಯಜಿಸುತ್ತಾರೆ. ಮತ್ತೊಂದೆಡೆ ಅಜರುದ್ದೀನ್, ಪ್ರಭಾಕರ್, ಅಜೇಯ್ ಜಡೇಜಾ ಕೆಲವು ಆಟಗಾರರು ಮ್ಯಾಚ್ ಫಿಕ್ಸಿಂಗ್ ಆರೋಪವನ್ನು ಎದುರಿಸಿದ್ದರು. ಆಗ ಭಾರತ ತಂಡ ಮನೆಯೊಂದು ಮೂರು ಬಾಗಿಲು ಎಂಬಂತಾಗಿತ್ತು. ಆಗ ತಂಡದ ನಾಯಕತ್ವ ವಹಿಸಿದ್ದು ಇದೇ ಸೌರವ್ ಗಂಗೂಲಿ.
ಸಂಕಷ್ಟದ ಸಮಯದಲ್ಲಿ ತಂಡದ ಸಾರಥ್ಯ ವಹಿಸಿದ್ದ ಗಂಗೂಲಿ ತನ್ನ ದಿಟ್ಟ ನಿರ್ಧಾರದಿಂದಲೇ ಹೊಸ ತಂಡವನ್ನು ಕಟ್ಟಲು ಸಿದ್ಧರಾದ್ರು. ಅಲ್ಲಿಯವರೆಗೆ ಭಾರತ ಕ್ರಿಕೆಟ್ ತಂಡವಾಗಿತ್ತು. ಗಂಗೂಲಿ ಟೀಮ್ ಇಂಡಿಯಾ ಅನ್ನೋ ಹೊಸ ಪರಿಕಲ್ಪನೆಯೊಂದಿಗೆ ಹಿರಿಯ ಹಾಗೂ ಯುವ ಆಟಗಾರರ ಪಡೆಯನ್ನು ಕಟ್ಟಿದ್ದರು. ಯುವರಾಜ್ ಸಿಂಗ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಆಶೀಷ್ ನೆಹ್ರಾ, ಮಹಮ್ಮದ್ ಕೈಫ್, ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್ ನಂತಹ ಆಟಗಾರರು ಬೇಕೇ ಬೇಕು ಅಂತ ಆಯ್ಕೆಗಾರರ ಬಳಿ ಪಟ್ಟು ಹಿಡಿದಿದ್ದರು. ಆಟಗಾರರ ವಿಶ್ವಾಸಕ್ಕೆ ದಕ್ಕೆಯಾಗದಂತೆ ಅವರ ಪ್ರತಿಭೆಗೆ ಬೆಲೆ ಕೊಟ್ಟ ಗಂಗೂಲಿ, ಸಾಕಷ್ಟು ಅವಕಾಶಗಳನ್ನು ನೀಡಿದ್ದರು. ಪರಿಣಾಮವಾಗಿಯೇ ಟೀಮ್ ಇಂಡಿಯಾ ಗೆಲುವಿನ ಸಂಭ್ರಮವನ್ನು ಆಚರಿಸಲು ಶುರು ಮಾಡಿತ್ತು. ವಿದೇಶಿ ನೆಲದಲ್ಲಿ ಮರೀಚಿಕೆಯಾಗಿದ್ದ ಗೆಲುವನ್ನು ದಕ್ಕಿಸಿಕೊಂಡಿತ್ತು.
ಇನ್ನು 2003ರ ವಿಶ್ವಕಪ್.. ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಪ್ರತಿಷ್ಠಿತ ಟೂರ್ನಿಗೆ ವೇಗಿ ಶ್ರೀನಾಥ್ ಬೇಕೇಬೇಕು ಅಂತ ಹಠ ತೊಟ್ಟಿದ್ದರು. ಶ್ರೀನಾಥ್ ಆಗಲ್ಲ ಅಂದಾಗ ಅವರ ಮನವೋಲಿಸಿ ತಂಡಕ್ಕೆ ಸೇರಿಸಿಕೊಂಡ್ರು. ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಕೊರತೆಯಾದಾಗ ರಾಹುಲ್ ದ್ರಾವಿಡ್‍ಗೆ ಆ ಜವಾಬ್ದಾರಿಯನ್ನು ನೀಡಿದ್ದರು. ತಂಡದ ಹಿತಕ್ಕಾಗಿ ಆರಂಭಿಕ ಸ್ಥಾನವನ್ನು ತ್ಯಜಿಸಿದ್ದರು. ತನ್ನ ಬದಲಿಗೆ ವೀರೇಂದ್ರ ಸೆಹ್ವಾಗ್‍ಗೆ ಆ ಸ್ಥಾನವನ್ನು ನೀಡಿದ್ದರು. ಪರಿಣಾಮೇ ಟೀಮ್ ಇಂಡಿಯಾ ಫೈನಲ್‍ಗೆ ಎಂಟ್ರಿಕೊಟ್ಟಿತ್ತು. ದುರಾದೃಷ್ಟ ಅಂದ್ರೆ ಆಸ್ಟ್ರೇಲಿಯನ್ನರ ಅಟ್ಟಹಾಸಕ್ಕೆ ಗಂಗೂಲಿ ಪಡೆ ಸೋತು ಹೋಯ್ತು.
ಆ ನಂತರವೂ ಗಂಗೂಲಿಯ ನಾಯಕತ್ವದಲ್ಲಿ ಟೀಮ್ ಇಂಡಿಯಾ ಹಲವು ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಗೆದ್ದುಕೊಂಡಿತ್ತು. ಅದ್ರಲ್ಲೂ ನ್ಯಾಟ್‍ವೆಸ್ಟ್ ಸರಣಿಯ ಫೈನಲ್ ನಲ್ಲಿ ಲಾಡ್ರ್ಸ್ ಮೈದಾನದ ಬಾಲ್ಕನಿಯಲ್ಲಿ ಟೀ ಶರ್ಟ್ ಬಿಚ್ಚಿ ಗೆಲುವಿನ ಸಂಭ್ರಮ ಆಚರಿಸಿದ್ದ ರೀತಿ ಇದೆಯಲ್ಲಾ ಇಂದಿಗೂ ಕಣ್ಣಿಗೆ ಕಟ್ಟುತ್ತಿದೆ. ಆದ್ರೆ ಗ್ರೆಗ್ ಚಾಪೆಲ್ ಟೀಮ್ ಇಂಡಿಯಾದ ಕೋಚ್ ಆದ ನಂತರ ಗಂಗೂಲಿಯ ಹವಾ ಕಮ್ಮಿಯಾಯ್ತು. ಕಳಪೆ ಪ್ರದರ್ಶನದಿಂದ ತಂಡದಿಂದಲೂ ಹೊರಗುಳಿದ್ರು. ಆದ್ರೆ ಛಲ ಬಿಡದ ದಾದಾ ಮತ್ತೆ ತಂಡವನ್ನು ಸೇರಿಕೊಂಡ್ರು. ರಾಹುಲ್ ನಾಯಕತ್ವದಲ್ಲೂ ಆಡಿದ್ದ ಗಂಗೂಲಿಗೆ 2007ರ ಕೆರೆಬಿಯನ್ ವಿಶ್ವಕಪ್ ಮಾತ್ರ ಕಹಿ ನೆನಪು. 2008ರಲ್ಲಿ ಗಂಗೂಲಿ ತನ್ನ ವರ್ಣ ರಂಜಿತ ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದರು.
ಗಂಗೂಲಿ ಅಂದಾಗ ತಕ್ಷಣ ನೆನಪಾಗೋದು ಅವರ ಬ್ಯಾಟಿಂಗ್ ಶೈಲಿ. ಅದ್ರಲ್ಲೂ ಆಫ್ ಸೈಡ್ ನಲ್ಲಿ ಹೊಡೆಯುವ ಅವಕ ಆಕರ್ಷಕ ಹೊಡೆತಗಳು. ಎದುರಾಳಿ ತಂಡ ಆಫ್ ಸೈಡ್ ನಲ್ಲಿ 9 ಮಂದಿ ಫೀಲ್ಡರ್‍ಗಳಿದ್ದರೂ ಚೆಂಡನ್ನು ಸರಾಗವಾಗಿ ಬೌಂಡರಿ ಗೆರೆ ದಾಟಿಸುವ ಕಲೆಯನ್ನು ಗಂಗೂಲಿ ಮೈಗೂಡಿಸಿಕೊಂಡಿದ್ದರು. ಅದು 150 ಕಿಲೋ ಮೀಟರ್ ವೇಗದಲ್ಲಿ ಶೋಯಿಬ್ ಅಖ್ತರ್ ಬೌಲಿಂಗ್ ಮಾಡಲಿ, ಅಥವಾ ಮುತ್ತಯ್ಯ ಮುರಳೀಧರನ್ ಮ್ಯಾಜಿಕ್ ಎಸೆತವೇ ಆಗಿರಲಿ.. ಗಂಗೂಲಿ ಲಯ ಕಂಡುಕೊಂಡ್ರೆ ಮಾತ್ರ ಅವರ ಬ್ಯಾಟಿಂಗ್ ವೈಖರಿಯನ್ನೇ ನೋಡುವುದೇ ಕಣ್ಣಿಗೆ ಹಬ್ಬ. ಅಷ್ಟೇ ಅಲ್ಲ, ಸಿಕ್ಸರ್ ಸಿಡಿಸುವುದರಲ್ಲೂ ಗಂಗೂಲಿ ನಿಸ್ಸೀಮ. ಕಣ್ಣು ಮಿಟುಕಿಸುತ್ತ ಎದುರಾಳಿ ತಂಡವನ್ನು ಧ್ವಂಸ ಮಾಡುವ ಗಂಗೂಲಿಯ ಬ್ಯಾಟಿಂಗ್ ತಾಕತ್ತಿಗೆ ರಾಹುಲ್ ದ್ರಾವಿಡ್ ಅವರು ನೀಡಿದ್ದ ಬಿರುದು ಏನು ಅಂದ್ರೆ ಗಾಡ್ ಆಫ್ ಆಫ್ ಸೈಡ್ ಅಂತ.
ಇದೀಗ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿದ್ದಾರೆ. ಕ್ರಿಕೆಟಿಗ, ನಾಯಕನಾಗಿ ಯಶ ಸಾಧಿಸಿರುವ ಗಂಗೂಲಿ ಈಗ ಆಡಳಿತಗಾರನಾಗಿಯೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂದು ಗಂಗೂಲಿ ತನ್ನ 48ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊಲ್ಕತ್ತಾದ ಮಹಾರಾಜ, ಕ್ರಿಕೆಟಿಗರ ನೆಚ್ಚಿನ ದಾದಾಗೆ ಹ್ಯಾಪಿ ಹುಟ್ಟು ಹಬ್ಬ…!

Related posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

May 31, 2026
40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

May 31, 2026
Tags: DHONIhappy birthday dadaharbhajan singhirfan patanjaheer khanSachin TendulkarSourav Gangulyteam indiaveerendra sewhaghyuvarj singh
ShareTweetSendShare
Join us on:

Related Posts

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

ಡಿಕೆಶಿ ಮನೆಗೆ ಸತೀಶ್ ಜಾರಕಿಹೊಳಿ ಎಂಟ್ರಿ! ಸಾಹುಕಾರ್ ಎಸೆದ ಡಬಲ್ ಕಾರ್ಡ್ ಹಿಂದೆ ಅಡಗಿದೆಯಾ ಬಿಗ್ ಪ್ಲಾನ್?

by Shwetha
May 31, 2026
0

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ಸಂಪುಟ ಕಸರತ್ತಿನ ಸುನಾಮಿ ಎದ್ದಿದೆ. ದೆಹಲಿಯಿಂದ ಸಚಿವರ ಪಟ್ಟಿಯನ್ನ ಹೊತ್ತು ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿಗೆ ಕಾಲಿಡುತ್ತಿದ್ದಂತೆ, ಅವರ ಸದಾಶಿವನಗರದ ನಿವಾಸ...

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

40 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್

by Shwetha
May 31, 2026
0

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, 40,067 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ...

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

ಕರ್ನಾಟಕಕ್ಕೆ ಹೊಸ ಸಾರಥಿ : ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದು ಡಿಕೆಶಿ ಜೋಡಿ

by Shwetha
May 31, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸರ್ಕಾರ ರಚನೆಯ ಪ್ರಕ್ರಿಯೆಗಳು ಅಧಿಕೃತವಾಗಿ ಚುರುಕುಗೊಂಡಿವೆ. ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್...

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

ನೀಟ್ ಪರೀಕ್ಷಾ ವಿಧಾನದಲ್ಲಿ ಭಾರಿ ಬದಲಾವಣೆ.. NTA ಮಹತ್ವದ ಘೋಷಣೆ

by Shwetha
May 31, 2026
0

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ನಡುವೆಯೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹತ್ವದ ಘೋಷಣೆ ಮಾಡಿದೆ. ಮುಂದಿನ ವರ್ಷದಿಂದ NEET ಪರೀಕ್ಷೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್...

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram