ಇಂದು ಸ್ಯಾಂಡಲ್ ವುಡ್ ನ ಬಾದ್ ಷಾ, ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ಜನ್ಮದಿನ. 46ನೇ ವಸಂತಕ್ಕೆ ಕಾಲಿಟ್ಟ ಮಾಣಿಕ್ಯನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ರನ್ನನ ಅಭಿಮಾನಿಗಳು ಕಾಮನ್ ಡಿಪಿ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ನೆಚ್ಚಿನ ನಟ ಹುಟ್ಟುಹಬ್ಬವನ್ನು ಸಂಭ್ರಮಿಸುತ್ತಿದ್ದಾರೆ.
ಚಂದನವನದಲ್ಲಿ ‘ಕಿಚ್ಚ’ ಎಂದೇ ಖ್ಯಾತಿ ಪಡೆದಿರುವ ಸುದೀಪ್ ಬಹು ಮುಖ ಹಾಗೂ ಬಹು ಭಾಷಾ ಪ್ರತಿಭೆ. ಸಂಜೀವ್ ಮಂಜಪ್ಪ ಮತ್ತು ಸರೋಜಾ ದಂಪತಿಗಳ ಮಗನಾಗಿ 2 ಸೆಪ್ಟೆಂಬರ್ 1973 ರಲ್ಲಿ ಜನಿಸಿದ ನಮ್ಮೆಲ್ಲರ ‘ದೀಪು’. ದಯಾನಂದ ಸಾಗರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದರು.
ಕ್ರಿಕೆಟ್ ಮೇಲೆ ಆಸಕ್ತಿ ಬೆಳೆಸಿಕೊಂಡಿದ್ದ ಸುದೀಪ್ ಅಂಡರ್ 17 ಹಾಗೂ ಅಂಡರ್ 19 ಕ್ರಿಕೆಟ್ ನಲ್ಲಿ ತಮ್ಮ ಕಾಲೇಜನ್ನು ಪ್ರತಿನಿಧಿಸಿದ್ದಾರೆ. ಸುದೀಪ್ ಗೆ ನಟನೆ ಅಂದ್ರೆ ಅಚ್ಚುಮೆಚ್ಚು. ಹೀಗಾಗಿ ಮುಂಬೈನ ರೋಶನ್ ತನೇಜಾ ಸ್ಕೂಲ್ ಆಫ್ ಆಕ್ಟಿಂಗ್ ಗೆ ಸೇರಿಕೊಂಡು ತರಬೇತಿ ಪಡೆದರು.
ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಸುಧಾಕರ್ ಭಂಡಾರಿ ನಿರ್ದೇಶನದ ‘ಪ್ರೇಮದ ಕಾದಂಬರಿ’ ಮೂಲಕ ಕಿರುತೆರೆಗೆ ಸುದೀಪ್ ಪದಾರ್ಪಣೆ ಮಾಡಿದರು. ‘ತಾಯವ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಸುದೀಪ್ ಎಂಟ್ರಿಕೊಟ್ಟರು. ತದನಂತರ ಸುನಿಲ್ ಕುಮಾರ್ ದೇಸಾಯಿ ಅವರ ನಿರ್ದೇಶನದಲ್ಲಿ ಮೂಡಿ ಬಂದ ಸ್ಪರ್ಶ ಚಿತ್ರಕ್ಕಾಗಿ ಬಣ್ಣ ಹಚ್ಚಿ ಭರವಸೆ ನಟ ಎನಿಸಿಕೊಂಡರು. ಆದ್ರೆ 2001 ರಲ್ಲಿ ತೆರೆಗೆ ಬಂದ ‘ಹುಚ್ಚ’ ಸಿನಿಮಾ ಸುದೀಪ್ ಗೆ ಬಿಗ್ ಬ್ರೇಕ್ ನೀಡಿತು. ಈ ಸಿನಿಮಾ ಸುದೀಪ್ ಅವರನ್ನು ಸ್ಟಾರ್ ಪಟ್ಟದಲ್ಲಿ ಕೂರಿಸಿತು. ಹಾಗೇ ಆಂಗ್ರಿ ಯಂಗ್ ಮ್ಯಾನ್ ಆಗಿ ಸುದೀಪ್ ಎಲ್ಲರ ಮನ ಗೆದ್ದು ಕರುನಾಡ ಮನೆಮಗನಾದರು.
ಅಂದಹಾಗೆ ಸುದೀಪ್ ಕೇವಲ ನಟ ಮಾತ್ರ ಅಲ್ಲ. ಪ್ರತಿಭಾವಂತ ನಿರ್ದೇಶಕ ಕೂಡ. ಇವರು ನಿರ್ದೇಶಿಸಿದ ‘ಮೈ ಆಟೋಗ್ರಾಫ್’, ‘ವೀರ ಮದಕರಿ’, ‘ಕೆಂಪೇಗೌಡ’, ‘ಮಾಣಿಕ್ಯ’ ಚಿತ್ರಗಳು ಭರ್ಜರಿ ಪ್ರದರ್ಶನಗೊಂಡಿವೆ.
ಸುದೀಪ್ ಕೇವಲ ಕನ್ನಡ ಚಿತ್ರರಂಗ ಮಾತ್ರವಲ್ಲದೆ ಪರಭಾಷಾ ಚಿತ್ರಗಳಲ್ಲಿಯೂ ಮಿಂಚಿದ್ದಾರೆ. ಹಿಂದಿಯಲ್ಲಿ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ‘ಫೂಂಕ್’, ತೆಲುಗಿನ ‘ಈಗ’, ‘ಬಾಹುಬಲಿ’ ಸೈರಾ ನರಸಿಂಹ ರೆಡ್ಡಿ ಹಾಗೂ ತಮಿಳಿನ ‘ಪುಲಿ’ ಚಿತ್ರಗಳಲ್ಲಿ ನಟಿಸಿ ಸದ್ಯ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಸುದೀಪ್ ಕನ್ನಡದ ಪತಾಕೆ ಹಾರಿಸುತ್ತಿದ್ದಾರೆ.
ಇನ್ನು ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುವ ‘ಬಿಗ್ ಬಾಸ್’ ಕಾರ್ಯಕ್ರಮದ ನಿರೂಪಕರಾಗಿಯೂ ಸುದೀಪ್ ಸಕ್ರಿಯರಾಗಿದ್ದಾರೆ. 2001 ರಲ್ಲಿ ಪ್ರಿಯಾ ಅವರನ್ನ ಸುದೀಪ್ ಕೈಹಿಡಿದರು. ಈ ದಂಪತಿಗೆ ಓರ್ವ ಪುತ್ರಿ ಇದ್ದಾಳೆ.
ಬರೋಬ್ಬರಿ 25 ವರ್ಷಗಳಿಂದ ಕಲಾಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸುದೀಪ್ ಸೋಲು ಗೆಲುವುಗಳು ಕಂಡಿದ್ದಾರೆ. ಯಶಸ್ಸಿನ ಶಿಖರವನ್ನೇರಿದರೂ ಹಿರಿಯರಿಗೆ ತಲೆಬಾಗಿ ಕಿರಿಯರಿಗೆ ಮಾರ್ಗದರ್ಶಕನಾಗಿ ತಮ್ಮದೇ ಆದ ದಾರಿಯಲ್ಲಿ ಸಾಗುತ್ತಿದ್ದಾರೆ. ಇದು ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿರುವ ಮಾಣಿಕ್ಯ, ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ಮೂಲಕ ಅನೇಕರ ಜೀನವಕ್ಕೆ ದೀಪವಾಗಿದ್ದಾರೆ.
ಅಭಿಮಾನಿಗಳ ಅಭಿಮಾನಿ ಕಿಚ್ಚ ಹೀಗೆ ನಗುನಗುತ್ತಾ ಮುಂದೆ ಸಾಗಲಿ.. ಕೇವಲ ನಟನೆಯ ಮೂಲಕ ದೇಶ ವಿದೇಶಗಳಲ್ಲೂ ಕನ್ನಡದ ಪತಾಕೆ ಹಾರಿಸುತ್ತಿರುವ ನಮ್ಮ ಕಿಚ್ಚ ಸುದೀಪ್ ಗೆ ನಮ್ಮ ಕಡೆಯಿಂದ ಜನ್ಮದಿನದ ಶುಭಾಶಯಗಳು.. ಹ್ಯಾಪಿ ಬರ್ತ್ ಡೇ ಸುದೀಪ್..
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








