ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗೆಳೆತನದ ಸುವಿಶಾಲ ಆಲದಡಿ ಪಸರಿಸಿಹ ತಣ್ಣೆಳಲ ತಂಪಿನಲಿ ತಂಗಿರುವೆನು

Shwetha by Shwetha
August 1, 2021
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Happy Friendship day
Share on FacebookShare on TwitterShare on WhatsappShare on Telegram

ಗೆಳೆತನದ ಸುವಿಶಾಲ ಆಲದಡಿ ಪಸರಿಸಿಹ ತಣ್ಣೆಳಲ ತಂಪಿನಲಿ ತಂಗಿರುವೆನು

ಗೆಳೆತನದ ಸುವಿಶಾಲ ಆಲದಡಿ ಪಸರಿಸಿಹ

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ತಣ್ಣೆಳಲ ತಂಪಿನಲಿ ತಂಗಿರುವೆನು..

ಉಪ್ಪಿಗಿಂತಲು ರುಚಿಯು ತಾಯಿಗಿಂತಲು ಬಂಧು

ಇಲ್ಲೆಂಬ ಗಾದೆ ನುಡಿ ಕೇಳಿರುವೆನು…

ಗೆಳೆತನದ ಶುಚಿ ರುಚಿಯು ಇದಕೂ ಮಿಗಿಲಾಗಿಹುದು

ಕಂಡ ಕಂಡವರೇನು ಬಲ್ಲರಿದನು…

ಉಂಡವನು ಕಂಡಿಹನು ಇದರ ಹದನು..

ಚಿಕ್ಕದಿರುವಾಗ ಕೇಳಿದ ಈ ಕವಿವಾಣಿಯನ್ನು ಇಂದು ಓದಿದರೆ ಅದರ ಅರ್ಥ ವೇದ್ಯವಾಗುತ್ತದೆ. ಗೆಳೆತನವೆಂಬ ಸುವಿಶಾಲ ವೃಕ್ಷ ತನ್ನಡಿಯಲ್ಲಿ ದಣಿದು ಬಂದ ಮನಕ್ಕೆ ಅದರ ಪ್ರೀತಿಯ ತಂಪಾದ ನೆರಳು ಮುದ ನೀಡುವ ಅನುಭವ ಬಣ್ಣಿಸಲು ಅಸಾಧ್ಯ.
ಸ್ನೇಹ ಎಂಬುವುದು ಮಧುರ ಅನುಭೂತಿಯ ಅನುಬಂಧವಾಗಿದ್ದು ಎಲ್ಲಾ ಕಟ್ಟುಪಾಡುಗಳನ್ನು ಮೀರಿದ ಪವಿತ್ರವಾದ ಸಂಬಂಧವಾಗಿದೆ. ಬಲ್ಲವನೇ ಬಲ್ಲ ಬೆಲ್ಲದ ಸವಿಯನ್ನು ಎಂಬಂತೆ ಸ್ನೇಹದ ಸವಿ ಅದನ್ನು ಅನುಭವಿಸಿದವರಿಗಷ್ಟೇ ಗೊತ್ತಿರಲು ಸಾಧ್ಯ. ಇಂದಿಗೂ ಎಷ್ಟೋ ಮಂದಿ ಬಾಲ್ಯದ ಸ್ನೇಹಿತರು ಆತ್ಮೀಯರಾಗಿದ್ದಾರೆ ಎಂದರೆ ಅದಕ್ಕೆ ಕಾರಣ ಅವರಲ್ಲಿನ ನಿಷ್ಕಲ್ಮಶವಾದ ಪ್ರೀತಿ..
Happy Friendship day

ಇಂದು ಸ್ನೇಹಿತರ ದಿನ. ಸ್ನೇಹಿತರ ದಿನದ ಆಚರಣೆ ಪಾಶ್ಚಿಮಾತ್ಯ ರಾಷ್ಟ್ರಗಳ ಕೊಡುಗೆಯಾದರೂ ಇಡೀ ವಿಶ್ವವೇ ನನ್ನ ಕುಟುಂಬ ಎಂದು ಸಂದೇಶ ಸಾರಿದ ಭಾರತೀಯ ಸಂಸ್ಕೃತಿ ನಮ್ಮದು. ಅಷ್ಟೇ ಅಲ್ಲ ನಮ್ಮ ಪುರಾಣದಲ್ಲಿ ಕೂಡ ಸ್ನೇಹ ಎನ್ನುವುದು ಹೇಗಿರಬೇಕು ಎಂದು ಹೇಳುವ ಅನೇಕ ಕತೆಗಳಿವೆ. ಗೆಳೆತನ ಎನ್ನುವುದು ಆಸ್ತಿ ಅಂತಸ್ತನ್ನು ಮೀರಿದ್ದು ‌ಎನ್ನುವುದನ್ನು ಕೃಷ್ಣ ಕುಚೇಲರ ಕತೆ ನಮಗೆ ತಿಳಿಸಿದರೆ, ಸ್ನೇಹಿತನ ಮೇಲಿನ ನಂಬಿಕೆಯನ್ನು ದುರ್ಯೋಧನ- ಕರ್ಣನ ಕತೆ ಸಾರುತ್ತದೆ. ಅಷ್ಟೇ ಅಲ್ಲ ಆಪ್ತವೆನ್ನುವ ಗೆಳೆತನ ಹಗೆತನ, ರೋಷಗಳಿಗೆ ಕಾರಣವಾಗಿರುವುದನ್ನು ಸಹ ನಮ್ಮ ಪುರಾಣದ ಕತೆಗಳಲ್ಲಿ ಕಾಣಬಹುದು. ಬಾಲ್ಯದಲ್ಲಿ ಉತ್ತಮ ಗೆಳೆಯರಾಗಿದ್ದ ದ್ರುಪದ ದ್ರೋಣರ ವೈರತ್ವದ ಪರಿಣಾಮ ಏನೇನಾಯಿತು ಎಂದು ಮಹಾಭಾರತ ತಿಳಿಸುತ್ತದೆ. ಆತ್ಮೀಯವಾಗಿದ್ದ ಸಂಬಂಧ ಸಡಿಲಗೊಂಡಾಗ ಆಗುವ ನೋವು, ಜಿಗುಪ್ಸೆಗಳನ್ನು ಅರ್ಥಮಾಡಿಕೊಳ್ಳುವುದು, ವಿವರಿಸುವುದು ಸುಲಭದ ವಿಷಯವಲ್ಲ. ನಿಜವಾದ ಸ್ನೇಹದಲ್ಲಿ ಎಂತಹ ಸಂದರ್ಭ ಎದುರಾದರೂ ಅವರ ನಡುವಿನ ಬಾಂಧವ್ಯ ಕೊನೆಯಾಗುವುದಿಲ್ಲವಾದರೂ ಇಂದು ನೈಜ ಗೆಳೆತನ ಕಡಿಮೆಯಾಗಿ ಉದ್ದೇಶಿತ ಗೆಳೆತನ ಹೆಚ್ಚಾಗುತ್ತಿದೆ.
Happy Friendship day
ಬಿಗುಮಾನದ ಶುಷ್ಕವಿಲ್ಲದ, ಕೇವಲವಾಗುವ ಆತಂಕವಿಲ್ಲದ, ಕಷ್ಟ ಸುಖ ಎಲ್ಲದರಲ್ಲೂ ಜೊತೆಯಾಗುವ ಭಾವನೆಗಳ ಜೊತೆಗಿನ ಪಯಣದ ಈ ಸ್ನೇಹವನ್ನು ಜೀವನದುದ್ದಕ್ಕೂ ನಿಭಾಯಿಸಬೇಕಾದದ್ದು ನಮ್ಮ ಜವಾಬ್ದಾರಿ. ಹಾಗಾಗಿ ಈ ಸುಂದರವಾದ ಸಂಬಂಧವನ್ನು ಗೌರವಿಸುವುದಕ್ಕಾಗಿಯೇ ಏಷ್ಯಾದಾದ್ಯಂತ ಹೆಚ್ಚಿನ ದೇಶಗಳಲ್ಲಿ ಪ್ರತಿವರ್ಷ ಅಗಸ್ಟ್ ಮೊದಲನೇ ವಾರದ ಭಾನುವಾರದಂದು ಸ್ನೇಹಿತರ ದಿನವನ್ನು ಆಚರಿಸಲಾಗುತ್ತದೆ.

ಗೆದ್ದಾಗ ನಮ್ಮೊಡನೆ ಸಂತೋಷ ಹಂಚಿಕೊಂಡು, ಬಿದ್ದಾಗ ನಿನ್ನೊಡನೆ ನಾನಿದ್ದೇನೆ ಎಂದು ಧೈರ್ಯ ತುಂಬಿ ನಮ್ಮ ಕಷ್ಟ ಸುಖಗಳಲ್ಲಿ ಭಾಗಿಯಾಗುವ ಸ್ನೇಹಿತರಿಗಾಗಿ ಇಂದು ಒಂದಿಷ್ಟು ಸಮಯ ಮೀಸಲಿಡೋಣ.

ಸಾಕ್ಷಟಿವಿ.ಕಾಮ್ ವತಿಯಿಂದ ಎಲ್ಲ ಓದುಗರಿಗೂ ಗೆಳೆಯರ ದಿನದ ಶುಭಾಶಯಗಳು..

– ಶ್ವೇತ

wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

ಫೆನ್ನೆಲ್/ಸೋಂಪು ನೀರು ಕುಡಿಯುವುದರ ಆರೋಗ್ಯ ಪ್ರಯೋಜನಗಳು#Saakshatv #healthtips #fennelwater https://t.co/Iv8FK1THqJ

— Saaksha TV (@SaakshaTv) July 29, 2021

ನುಚ್ಚಿನ ಉಂಡೆ#Saakshatv #cookingrecipe #nuchhinaunde https://t.co/C8VvRVlBdE

— Saaksha TV (@SaakshaTv) July 27, 2021

5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಲು ನೀವು ಬಯಸಿದ್ದರೆ ಈ ಮಾಹಿತಿ ನಿಮಗಾಗಿ
aadhar card for children https://t.co/3ThVZZh0du

— Saaksha TV (@SaakshaTv) July 28, 2021

ಸಬ್ಬಕ್ಕಿ ನಿಪ್ಪಟ್ಟು#Saakshatv #cookingrecipe #sabbakki #nippattu https://t.co/0WaJcDwarF

— Saaksha TV (@SaakshaTv) July 28, 2021

#HappyFriendshipday

Tags: Happy friendship day
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram