Hardik Pandya | ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್ ಗೆ ಹಾರ್ದಿಕ್ ಗುಡ್ ಬೈ
ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಆಸಕ್ತಿದಾಯಕ ಕಮೆಂಟ್ ಗಳನ್ನು ಮಾಡಿದ್ದಾರೆ. ಮುಂದಿನ ವರ್ಷದ ನಡೆಯಲಿರುವ ಏಕದಿನ ವಿಶ್ವಕಪ್ ಬಳಿಕ ಹಾರ್ದಿಕ್ ಪಾಂಡ್ಯ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳುವ ಸಾಧ್ಯತೆಗಳಿವೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಭವಿಷ್ಯತ್ತಿನಲ್ಲಿ ಆಟಗಾರು ಏಕದಿನ ಮಾದರಿಗಿಂತ ಟಿ 20 ಮಾದರಿಗೆ ಹೆಚ್ಚಾಗಿ ಪ್ರಧಾನ್ಯತೆ ಕೊಡಲಿದ್ದಾರೆ ಎಂದು ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಇಂಗ್ಲೆಂಡ್ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಏಕಾಏಕಿ ಏಕದಿನ ಕ್ರಿಕೆಟ್ ನಿಂದ ತಪ್ಪಿಕೊಂಡಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಮೂರು ಮಾದರಿ ಕ್ರಿಕೆಟ್ ಆಡೋದಕ್ಕೆ ತಮಗೆ ತುಂಬಾ ಕಷ್ಟವಾಗುತ್ತಿದೆ ಎಂದು ಹೇಳಿ ಬೆಸ್ ಸ್ಟೋಕ್ಸ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ರು.
ಈ ಹಿನ್ನೆಲೆಯಲ್ಲಿ ರವಿಶಾಸ್ತ್ರಿ ಮಾತನಾಡುತ್ತಾ, ಏಕದಿನ, ಟಿ 20 ಕ್ರಿಕೆಟ್ ಗಿಂತ ಟೆಸ್ಟ್ ಕ್ರಿಕೆಟ್ ತುಂಬಾ ಪ್ರತ್ಯೇಕವಾದದ್ದು. ಆದ್ರೆ ಟೆಸ್ಟ್ ಕ್ರಿಕೆಟ್ ದಿನದಿಂದ ದಿನಕ್ಕೆ ತನ್ನ ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ಈಗಾಗಲೇ ಆಟಗಾರರು ತಾವು ಯಾವ ಮಾದರಿಯಲ್ಲಿ ಕ್ರಿಕೆಟ್ ಆಡಬೇಕು ಎಂದು ನಿರ್ಧಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ವಿಷಯಕ್ಕೆ ಬಂದರೇ ಆತ ಹೆಚ್ಚಾಗಿ ಟಿ 20 ಕ್ರಿಕೆಟ್ ಆಡಲು ಇಷ್ಟಪಡುತ್ತಾರೆ. ಹಾರ್ದಿಕ್ ಈ ವಿಚಾರವನ್ನು ಸಾಕಷ್ಟು ಬಾರಿ ಸ್ಪಷ್ಟಪಡಿಸಿದ್ದಾರೆ.
ಮುಂದಿನ ವರ್ಷ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಆ ನಂತರ ಹಾರ್ದಿಕ್ ಪಾಂಡ್ಯ ಕ್ರಿಕೆಟ್ ಗೆ ಗುಡ್ ಬೈ ಹೇಳಬಹುದು. ತಂಡದಲ್ಲಿ ಇನ್ನೂ ಹಲವು ಕ್ರಿಕೆಟಿಗರು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆಟಗಾರರು ಟಿ 20 ಕ್ರಿಕೆಟ್ ಮೇಲೆ ಹೆಚ್ಚಾಗಿ ದೃಷ್ಠಿ ಸಾಗಿಸುತ್ತಿದ್ದಾರೆ.

ಪ್ರಪಂಚದಾದ್ಯಂತ ಫ್ರಾಂಚೈಸಿ ಕ್ರಿಕೆಟ್ ಗೆ ಮಹತ್ವ ಹೆಚ್ಚಾಗುತ್ತಿದೆ. ಫ್ರಾಂಚೈಸಿ ಕ್ರಿಕೆಟ್ ಮೇಲೆ ಆಟಗಾರರು ಹೆಚ್ಚಾಗಿ ಗಮನ ಹರಿಸುತ್ತಿದ್ದಾರೆ. ಅವರನ್ನ ಫ್ರಾಂಚೈಸಿ ಕ್ರಿಕೆಟ್ ಆಡದಂತೆ ನಾವು ತಡೆಯುವುದು ಅಸಾಧ್ಯವಾಗಿದೆ. ಆದ್ದರಿಂದ ದ್ವಿಪಕ್ಷೀಯ ಸರಣಿಗಳು ಕಡಿಮೆಯಾಗಿ ಆಟಗಾರರ ಮೇಲೆ ಒತ್ತಡ ಕಡಿಮೆಯಾಗುವಂತೆ ನಾವು ಮಾಡಬೇಕು ಎಂದು ರವಿಶಾಸ್ತ್ರಿ ವಾದಿಸಿದ್ದಾರೆ.
ಇನ್ನು ಕಳೆದ ಟಿ 20 ವಿಶ್ವಕಪ್ ಬಳಿಕ ಹಾರ್ದಿಕ್ ಪಾಂಡ್ಯ ಯಾರೂ ಊಹಿಸದ ರೀತಿಯಲ್ಲಿ ಕಂ ಬ್ಯಾಕ್ ಮಾಡಿದ್ದಾರೆ. ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಗುಜರಾತ್ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದು ಮಾತ್ರವಲ್ಲದೇ ಚೊಚ್ಚಲ ಬಾರಿಗೆ ತಂಡದವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ರು. ಅಲ್ಲದೇ ಟೀಂ ಇಂಡಿಯಾಗೆ ಗ್ರೇಟ್ ಕಂ ಬ್ಯಾಕ್ ಮಾಡಿ ಬ್ಯಾಟಿಂಗ್, ಬೌಲಿಂಗ್ ನಲ್ಲಿ ಅಬ್ಬರಿಸುತ್ತಿದ್ದಾರೆ.








