ಹರಿದ್ವಾರ – ಆಕ್ಸಿಜನ್ ಕೊರತೆ – ಐವರು ಸೋಂಕಿತರ ಸಾವು
ಹರಿದ್ವಾರ: ದೇಶಾದ್ಯಂತ ಕೊರೊನಾ 2ನೇ ಅಲೆ ಅತಿ ಭಯನಾಕರೂಪ ಪಡೆದಿದ್ದು, ಸಾವು ನೋವುಗಳ ಸಂಖ್ಯೆ , ದಿನೇದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ. ಈ ನಡುವೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ಕೋವಿಡ್ ರೋಗಿಗಳು ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಮುಂದುವರೆದಿದೆ. ಇದೀಗ ಆಕ್ಸಿಜನ್ ಕೊರತೆಯಿಂದಾಗಿ ಐವರು ಕೋವಿಡ್-19 ರೋಗಿಗಳು ಸಾವಿಗೀಡಾಗಿರುವ ಘಟನೆ ಹರಿದ್ವಾರ ಜಿಲ್ಲೆಯ ರೂರ್ಕಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ.
ಒಬ್ಬ ರೋಗಿಗೆ ವೆಂಟಿಲೇಟರ್ ನೀಡಲಾಗಿತ್ತು. ಉಳಿದ ನಾಲ್ವರು ಆಮ್ಲಜನಕ ಸೌಲಭ್ಯ ಹೊಂದಿದ್ದ ಹಾಸಿಗೆಯಲ್ಲಿದ್ದರು ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ. ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಜತೆಗೆ, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯಗಳ ಕುರಿತು ಪರಿಶೀಲನೆ ಕೈಗೊಳ್ಳಲು ರೂರ್ಕಿಯ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷರ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.
ಒಂದು ವಾರದಲ್ಲಿ ಈ ತಂಡ ವರದಿ ನೀಡಲಿದೆ ಎಂದು ಹರಿದ್ವಾರ ಜಿಲ್ಲಾಧಿಕಾರಿ ಸಿ. ರವಿಶಂಕರ್ ತಿಳಿಸಿದ್ದಾರೆ. ಈ ಘಟನೆಗೆ ಹೊಣೆಯಾದವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಕರ್ನಾಟಕದ ಚಾಮರಾಜನಗರದಲ್ಲೂ ಇಂತಹದ್ದೇ ದುರಂತ ಸಂಭವಿಸಿತ್ತು. ಆಕ್ಸಿಜನ್ ಕೊರತೆಯಿಂದಾಗಿ 24 ಜನರು ಮೃತಪಟ್ಟಿದ್ದರು.
ದೇಶದಲ್ಲಿ ಕೊರೊನಾಗೆ ಲೆಕ್ಕವಿಲ್ಲದಷ್ಟು ಮಂದಿ ಬಲಿಯಾಗ್ತಿದ್ದಾರೆ. ಅದೆಷ್ಟೋ ಜನರು ತಮ್ಮವರನ್ನ ಕಳೆದುಕೊಂಡು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಸಿನಿ ತಾರಯರು ಸಹ ತಮ್ಮರನ್ನ ಕಳೆದುಕೊಂಡು ನೋವನ್ನ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ತಿದ್ದಾರೆ. ಸೋಂಕಿತರು ಬೆಡ್ ಸಿಗದೇ ಆಕ್ಸಿಜನ್ ಕೊರತೆಯಿಂದ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಗೆ ಬಂದು ದೇಶ ತಲುಪಿದೆ. ಅಂತಹದ್ರಲ್ಲಿ ತೀರಾ ಮನಕಲಲಕುಂತಹ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇದೆ..