ಕೋವಿಡ್ ಸಂಕಷ್ಟ : ಫ್ರೀ ಆಟೋ, ಆಕ್ಸಿಜನ್ ವ್ಯವಸ್ಥೆ ಮಾಡಿದ ಭುವನ್, ಹರ್ಷಿಕಾ ಪೂಣಚ್ಚ
ಬೆಂಗಳೂರು : ದೇಶ ಹಾಗೂ ರಾಜ್ಯ ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಈ ನಡುವೆ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರ ಸಹಾಯಕ್ಕೆ ನಿಂತಿರುವ ನಟ ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಮತ್ತೊಂದು ಮಹತ್ವ ಕೆಲಸಕ್ಕೆ ಚಾಲನೆ ನೀಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ, ಆರ್ಥಿಕ ಸಂಕಷ್ಟದಿಂದ ರೇಷನ್ ಇಲ್ಲದೇ ಒದ್ದಾಡುತ್ತಿರುವವರಿಗಾಗಿ ಭುವನ್ ಪೊನ್ನಣ್ಣ ಫೌಂಡೇಶನ್ ಮೂಲಕ ಉಚಿತ ಆಕ್ಸಿಜನ್ ಮತ್ತು ಆಟೋ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ರೇಷನ್, ಔಷಧಿಗಳನ್ನು ಸಹ ಒದಗಿಸಲಾಗುತ್ತದೆ.
ತುರ್ತು ಪರಿಸ್ಥಿತಿಯಲ್ಲಿ ಸಾರಿಗೆ ಅಥವಾ ಆಂಬುಲೆನ್ಸ್ ಸಿಗದೇ ಕಷ್ಟಪಡುತ್ತಿರುವ ಜನರಿಗೆ ನೆರವಾಗಲು 4-5 ಆಟೋಗಳು ನಗರದಲ್ಲಿ ಕೆಲಸ ಮಾಡಲಿದೆ. ಇದರ ಜೊತೆಗೆ ಆಕ್ಸಿಜನ್ ಸಿಗದೆ ಸಾವು-ಬದುಕಿಗಾಗಿ ಕಷ್ಟಪಡುವವರಿಗಾಗಿ ಆಕ್ಸಿಜನ್ ಬಸ್ ವ್ಯವಸ್ಥೆ ಮಾಡಲಾಗಿದೆ.
ಇದಕ್ಕೂ ಮುಂಚೆ ಭುವನ್ ಪೊನ್ನಣ್ಣ ಹೆಲ್ಫ್ಲೈನ್ ಆರಂಭಿಸಿದ್ದರು. ಸಹಾಯ ಬೇಕು ಅಂದ್ರೆ ಕಾಲ್ ಮಾಡಿ ಎಂದು ಖಾಸಗಿ ನಂಬರ್ ಕೊಟ್ಟಿದ್ದರು. ಇದರಿಂದ ದಿನಕ್ಕೆ 3-4 ಸಾವಿರ ಕಾಲ್ ಬರಲು ಶುರುವಾಯ್ತು. ನಂತರ, ಅದಕ್ಕಾಗಿ ತಂಡವೊಂದನ್ನು ರಚಿಸಿ ಅನೇಕರಿಗೆ ಸಹಾಯ ಮಾಡಿದ್ದಾರೆ. ಇದೀಗ, ಉಚಿತ ಆಟೋ, ಆಕ್ಸಿಜನ್ ಬಸ್ ವ್ಯವಸ್ಥೆ ಮಾಡಿ ಜನರಿಗೆ ಮತ್ತಷ್ಟು ಅನುಕೂಲ ಮಾಡಿದ್ದಾರೆ ಭುವನ್ ಪೊನ್ನಣ್ಣ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.