ನಟಿ ಹರ್ಷಿಕಾ ಪೂಣಚ್ಚ, ಭುವನ್ ಮೇಲಿನ ಹಲ್ಲೆ ಪ್ರಕರಣಕ್ಕೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ಸಿಲಿಕಾನ್ ಸಿಟಿಯ ಪುಲಕೇಶಿನಗರದಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿಯಲ್ಲಿ ಹಲ್ಲೆ ಮಾಡಿದ ಮೂವರು ಕಿಡಿಗೇಡಿಗಳನ್ನು ಪತ್ತೆ ಮಾಡಿದ್ದಾರೆ.
ಸಿಲಿಕಾನ್ ಸಿಟಿಯ ಫ್ರೇಜರ್ ಟೌನ್ ಪ್ರದೇಶದ ಹತ್ತಿರವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಎಂಬ ರೆಸ್ಟೊರೆಂಟ್ ಹತ್ತಿರ ನಟಿ ಹಾಗೂ ಭುವನ್ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ದೂರು ದಾಖಲಿಸಿದ್ದರು. ಸದ್ಯ ಸಿಸಿಟಿವಿ ಸಹಾಯದಿಂದ ಮೂವರು ದುಷ್ಕರ್ಮಿಗಳನ್ನು ಗುರುತಿಸಲಾಗಿದೆ ಎಂದ ಭುವನ್ ಹೇಳಿದ್ದಾರೆ.
ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ. ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ಮಾಡಿ ಕೆಲವು ವ್ಯಕ್ತಿಗಳನ್ನು ತೋರಿಸಿದ್ದಾರೆ. ಪೊಲೀಸರು ಇಷ್ಟು ಬೇಗ ತನಿಖೆ ಮಾಡಿದ್ದರ ಕುರಿತು ಸಂತಸವಾಗುತ್ತಿದೆ. ಇಷ್ಟು ವೇಗವಾಗಿ ತನಿಖೆ ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ನಮಗೆ ಆದ ರೀತಿ ಬೇರೆ ಯಾರಿಗೂ ಆಗಬಾರದು ಅನ್ನೋ ಉದ್ದೇಶಕ್ಕೆ ದೂರು ಕೊಟ್ಟಿದ್ದೇವೆ. ಈ ಕೇಸ್ ಎಲ್ಲರಿಗೂ ಮಾದರಿ ಆಗಬೇಕು. ಇನ್ಮುಂದೆ ಯಾರಿಗೂ ಈ ರೀತಿ ಆಗಬಾರದು ಎಂದು ಭುವನ್ ಹೇಳಿದ್ದಾರೆ.