ಕೋವಿಡ್ – ಹಟ್ಟಿ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಗೆ ಬಳಕೆ
ರಾಯಚೂರು : ರಾಜ್ಯದಲ್ಲಿ ಕೋವಿಡ್ ಹಾವಳಿ ಹೆಚ್ಚಾಗ್ತಿದ್ದು, ಪ್ರತಿನಿತ್ಯ ಸಾವಿನ ಸಂಖ್ಯೆ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಬೆಡ್ ಕೊರತೆ ಹಾಗೂ ಆಕ್ಸಿಜನ್ ಕೊರತೆ ಇಂದಾಗಿ ಸೋಂಕಿತರು ಪರದಾಡುವಂತಾಗಿದೆ..
ಸರ್ಕಾರ ಅನೇಕ ಕ್ರಮಗಳನ್ನ ಕೈಗೊಳ್ಳುತ್ತಿದೆ. ರಾಯಚೂರು ಹಟ್ಟಿ ಚಿನ್ನದ ಗಣಿ ಆಸ್ಪತ್ರೆಯಲ್ಲಿ 40 ಆಮ್ಲಜನಕಯುಕ್ತ ಹಾಸಿಗೆಗಳು ಮೇಲ್ದರ್ಜೆಗೆ ವ್ಯವಸ್ಥೆ ಮಾಡಲಾಗಿದೆ. ಹಟ್ಟಿ ಸಮುದಾಯ ಭವನ ಕೋವಿಡ್ ಕೇರ್ ಸೆಂಟರ್ ಗೆ ಬಳಕೆ ಮಾಡಲಾಗ್ತಿದೆ.,.
ಚಿನ್ನದ ಗಣಿ ಚಟುವಟಿಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಹಟ್ಟಿ ಚಿನ್ನದ ಗಣಿ ಪ್ರದೇಶದಲ್ಲಿರುವ ಸಮುದಾಯ ಭವನವನ್ನು ಕೋವಿಡ್ ಕೇರ್ ಸೆಂಟರ್ ಗೆ ಬಳಕೆಮಾಡಿಕೊಳ್ಳಲು ನಿರ್ಧಾರಿಸಲಾಗಿದೆ.
ಮುರುಗೇಶ್ ಆರ್ ನಿರಾಣಿ ಅವರು ನೀಡಿದ ಸಲಹೆ ಮೇರೆಗೆ ಹಟ್ಟಿಯಲ್ಲಿರುವ ಸಮುದಾಯ ಭವನವನ್ನು ಕೋವಿಡ್ ಕೇರ್ ಸೆಂಟರ್ ಗೆ ಬಳಕೆಮಾಡಿಕೊಳ್ಳಲು ಮುಂದಾಗಿದೆ. ಹಟ್ಟಿಯ ಕ್ಯಾಂಪಸ್ ನಲ್ಲಿರುವ ಒಟ್ಟು 120 ಹಾಸಿಗೆ ಸಾಮಾರ್ಥ್ಯದ ಈ ಆಸ್ಪತ್ರೆಯಲ್ಲಿ 40 ಹಾಸಿಗೆಗಳನ್ನು ಆಮ್ಲಜನಕಯುಕ್ತ ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ ಹಟ್ಟಿ ಚಿನ್ನದ ಗಣಿ ವ್ಯವಸ್ಥಾಪಕ ನಿದೇರ್ಶಕರು ಸೇರಿದಂತೆ ಮತ್ತಿತರರ ಜೊತೆ ಸಚಿವ ನಿರಾಣಿ ಮಾತುಕತೆ ನಡೆಸಿದ್ದಾರೆ.
ಗಣಿಯಲ್ಲಿ 4000 ಕಾರ್ಮಿಕರು ಕೆಲಸ ನಿರ್ವಾಹಿಸುತ್ತಿದ್ದಾರೆ. ಅಲ್ಲದೆ ಗ್ರಾಮದಲ್ಲೂ ಸಾವಿರಾರು ಸಂಖ್ಯೆಯ ಜನರಿದ್ದು, ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಸಮುದಾಯ ಭವನ ಬಳಕೆಮಾಡಿಕೊಳ್ಳುವುದು ಸರಿಯಾದ ಮಾರ್ಗವೆಂದು ಸಚಿವರು ಸಲಹೆ ಕೊಟ್ಟಿದ್ದರು.
ಚಿನ್ನದ ಗಣಿಯಲ್ಲಿ ಕೇಂದ್ರ ಸರಕಾರಿ ಒಡೆತನದ ಕೇಂದ್ರೀಯ ವಿದ್ಯಾಲಯವಿದ್ದು, ಇದನ್ನು ಸಹಾ ಕೋವಿಡ್ ಕೇರ್ ಸೆಂಟರ್ ಗೆ ಬಳಸಲು ಆಲೋಚಿಸಲಾಗಿದೆ. ಈ ಜಾಗವು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಒಡೆತನಕ್ಕೆ ಸೇರಿರುವ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ನಿರಾಣಿ ಅವರು ಮಾತುಕತೆಯ ನಡೆಸಿದ್ದಾರೆ.
ರಾಜ್ಯದಲ್ಲಿ ಈಗ ಚಿನ್ನ ಉತ್ಪಾದಿಸುವ ಏಕೈಕ ಗಣಿ ಇರುವ ರಾಯಚೂರು ಜಿಲ್ಲೆಯ ಚಿನ್ನದ ಗಣಿಯು ಕೊರೊನಾ 2ನೆಯ ಅಲೆಯ ಹಿನ್ನಲೆ ಈ ವರ್ಷವೂ ಬಂದ್ ಮಾಡಲಾಗಿದೆ. ರಾಜ್ಯ ಸರಕಾರವು 14 ದಿನ ಲಾಕ್ ಡೌನ್ ಘೋಷಣೆ ಮಾಡಿದ ಬೆನ್ನಲ್ಲಿಯೇ ಹಟ್ಟಿ ಚಿನ್ನದ ಗಣಿಯನ್ನು ಸಹ ಬಂದ್ ಮಾಡಲಾಗಿದೆ, ಮೇ 24 ರವರೆಗೂ ಗಣಿ ಚುಟುವಟಿಕೆ ಬಂದ್ ಮಾಡಿ ಹಟ್ಟಿ ಚಿನ್ನದ ಗಣಿ ಕಂಪನಿಯೂ ಆದೇಶ ಹೊರಡಿಸಿದೆ.
ಸಿಬ್ಬಂದಿ ಮನೆಯಲ್ಲಿ ಇರುವಂತೆ ಹಟ್ಟಿ ಕಂಪನಿ ಆಡಳಿತ ಮಂಡಳಿ ಆದೇಶ ಹೊರಡಿಸಿದ್ದು, ಗಣಿ ಆಸ್ಪತ್ರೆ, ಸೇರಿದಂತೆ ಅವಶ್ಯಕ ವಿಭಾಗ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದೆ, ಸಿಬ್ಬಂದಿ ಹಟ್ಟಿ ಕೇಂದ್ರ ಸ್ಥಾನ ಬಿಡುವಾಗ ಅನುಮತಿ ಪಡೆದು ಹೋಗಲು ಆದೇಶದಲ್ಲಿ ಸೂಚನೆ ನೀಡಲಾಗಿದೆ, ಸರ್ಕಾರದ ಮಾರ್ಗಸೂಚಿಯಂತೆ ಚಿನ್ನದ ಗಣಿ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








