Haveri : ಕನ್ನಡ ಸಾಹಿತಯ ಸಮ್ಮೇಳಕ್ಕೆ ಆಗಮಿಸಿದ್ದ ಶಿಕ್ಷಕ ಸಾವು
ಹಾವೇರಿ : ಹಾವೇರಿಯಲ್ಲಿ ನಡೆಯುತ್ತಿರುವ 86 ನೇ ಸಾಹಿತ್ಯ ಸಮ್ಮೇಳಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ್ದಾರೆ.
ನಿನ್ನೆ ಉಸಿರಾಟ ಸಮಸ್ಯೆಯಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದ ವೇಳೆ ಘಟನೆ ನಡೆದಿದೆ..
ಸಂಗನಗೌಡರ 56 ವರ್ಷದ ಮೃತ ಶಿಕ್ಷಕರಾಗಿದ್ದಾರೆ.
ಇವರು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದ ಶಿಕ್ಷಕರಾಗಿದ್ದರು.
ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.
ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಶಿಕ್ಷಕ ಮೃತ ಪಟ್ಟಿದ್ದಾರೆ.
ರಾತ್ರೋರಾತ್ರಿ ಮೃತದೇಹದ ಊರಿಗೆ ರವಾನೆ ಮಾಡಲಾಗಿದೆ.
ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.