ಜೋಡಿ ಕೊಲೆಗೆ ಬೆಚ್ಚಿಬಿದ್ದ ಹಾವೇರಿ Haveri
ಹಾವೇರಿ : ಹಳೆ ವೈಷಮ್ಯದ ಹಿನ್ನೆಲೆ ಇಬ್ಬರನ್ನ ಕೊಲೆ ಮಾಡಿರುವ ಘಟನೆ ಹಾವೇರಿ ಸಮೀಪದ ಯತ್ತಿನಹಳ್ಳಿಯಲ್ಲಿ ನಡೆದಿದೆ.
ನಿಂಗಪ್ಪ ಶಿರಗುಪ್ಪಿ 30,ಗಣೇಶ ಕುಂದಾಪುರ 16,ಕೊಲೆಯಾದ ದುರ್ದೈವಿಗಳಾಗಿದ್ದಾರೆ.
ಮೃತದೇಹಗಳನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಹಾವೇರಿ ಶಹರಠಾಣೆಯ ಪೊಲೀಸ್ ಅಧಿಕಾರಿ ಗಳು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಹಳೆ ದ್ವೇಷದ ಶಂಕೆ ಎನ್ನಲಾಗಿದೆ.
ಈ ಸಂಬಂಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.