ಹಾವೇರಿ: 2019-20ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ನಿನ್ನೆಯಷ್ಟೇ ಹೊರಬಿದ್ದಿದ್ದು, ಹಲವರ ಮನೆಯಲ್ಲಿ ಸಂಭ್ರಮಾಚರಣೆ ಮನೆ ಮಾಡಿದ್ದರೆ , ಇನ್ನೂ ಕೆಲವು ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ಬೇಸರಗೊಂಡಿದ್ದಾರೆ. ಆದ್ರೆ ಇವರಲ್ಲಿ ಕೆಲವರು ಮುಂದಿನ ಸಲ ಪರೀಕ್ಷೆ ಪಾಸ್ ಮಾಡಿಕೊಂಡರೆ ಆಯಿತು ಬಿಡು ಎಂಬ ಹುಮ್ಮಸ್ಸು ಹೊಂದಿದ್ದರೆ , ಇನ್ನೂ ಕೆಲ ವಿದ್ಯಾರ್ಥಿಗಳು ದುಡುಕಿ ಕೆಟ್ಟ ನಿರ್ಧಾರಗಳನ್ನ ತೆಗೆದುಕೊಳ್ಳುವುದು ಉಂಟು . ಯಾಕೆಂದರೆ ಪ್ರತಿ ಬಾರಿ ವಿದ್ಯಾರ್ಥಿಗಳು ಫೇಲ್ ಆದಂತಹ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದೆ. ಅದರಂತೆ ಈ ಬಾರಿಯೂ ಕೆಲವರ ಮನೆಯಲ್ಲಿ ಸಂಭ್ರಮವಿದ್ರೆ ಇನ್ನೂ ಕೆಲವರ ಮನೆಯಲ್ಲಿ ಸೂತಕದ ಛಾಯೆ ಆವರಿಸಿಬಿಟ್ಟಿದೆ.
ಹೌದು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಹಾವೇರಿ ನಗರದ ದ್ಯಾಮವ್ವನಗುಡಿ ಓಣಿಯಲ್ಲಿ ನಡೆದಿದೆ. ವೈಷ್ಣವಿ ರಿತ್ತಿ 16 ವರ್ಷ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಗಣಿತ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ ಮೃತದೇಹ ಜಿಲ್ಲಾಸ್ಪತ್ರೆಯ ಶವಾರಕ್ಕೆ ರವಾನೆ ಮಾಡಲಾಗಿದೆ. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪರಿಷತ್ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಹೊರಟ್ಟಿ ರಾಜೀನಾಮೆ ಪಡೆದ ಸರ್ಕಾರದ ವಿರುದ್ಧ ಬೊಮ್ಮಾಯಿ ಕೆಂಡ
ಬೆಂಗಳೂರು: ದೇಶದ ಅತ್ಯಂತ ಹಿರಿಯ ವಿಧಾನ ಪರಿಷತ್ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಸರ್ಕಾರ ಅನುಸರಿಸಿದ ಹಾದಿ...








