Haveri – ಕಾಲುವೆಗೆ ನುಗ್ಗಿದ ಟ್ರ್ಯಾಕ್ಟರ್.. ಉಸಿರುಗಟ್ಟಿ ಚಾಲಕ ಸಾವು
ಹಾವೇರಿ : ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ವೊಂದು ರಸ್ತೆ ಪಕ್ಕದ ಕಾಲುವೆಗೆ ನುಗ್ಗಿದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಹಾವೇರಿ ಜಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ಬಳಿ ನಡೆದಿದೆ.
ಮೃತನನ್ನು ಶರಣಪ್ಪ ಎಂದು ಗುರುತಿಸಲಾಗಿದೆ.
ಶರಣಪ್ಪ ಮೆಕ್ಕೆಜೋಳದ ತೆನೆಗಳನ್ನು ತುಂಬಿಕೊಂಡು ಬರಲು ಜಮೀನಿಗೆ ಹೊರಟ್ಟಿದ್ದ.
![Haveri](http://saakshatv.com/wp-content/uploads/2022/11/tractor.jpg)
ಈ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಾಲುವೆ ನೀರಿಗೆ ನುಗ್ಗಿದೆ.
ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿದ ಪರಿಣಾಮ ಶರಣಪ್ಪ ಉಸಿರುಗಟ್ಟಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ರಟ್ಟೀಹಾಳ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಹೊರ ತೆಗೆದಿದ್ದಾರೆ.