ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಯತ್ನಾಳ್ ಹುಟ್ಟಿದ್ದರೋ ಇಲ್ಲವೋ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚಿತ್ರದುರ್ಗದಲ್ಲಿ ತಿರುಗೇಟು ನೀಡಿದ್ದಾರೆ. ದೊರೆಸ್ವಾಮಿ ಅವರ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕುಮಾರಸ್ವಾಮಿ ಹುಟ್ಟಿದ್ರಾ? ಅಷ್ಟೇ ಅಲ್ಲದೆ ಊಟಕ್ಕೆ ಗತಿ ಇಲ್ಲದವರು ಸೇನೆಗೆ ಸೇರ್ತಾರೆ ಎಂದು ಹೇಳಿದ್ದ ಹೆಚ್ ಡಿಕೆಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದ್ದಾರೆ. ಹಾಗಾದರೆ ನೀವು ಯಾಕೆ ರಾಜಕಾರಣಕ್ಕೆ ಸೇರಿದ್ರಿ? ನಿಮ್ಮದೇನಿತ್ತು ಮೂಲ? ನಿಮ್ಮ ತಂದೆಯವರು ವರ್ಕ್ ಇನ್ಸ್ಪೆಕ್ಟರ್ ಇದ್ರಾ? ನಿಮಗೆ ಸಾವಿರಾರು ಕೋಟಿ ಹೇಗೆ ಬಂತು? ನನ್ನ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಎಲ್ಲಿದೆ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.
ಇದಲ್ಲದೆ ನಿಮ್ಮ ತಂದೆ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವಗೌಡ ಅವರೇನದಾರು ಸ್ವಾತಂತ್ರ್ಯ ಸೈನಿಕರೇ? ರಾಜಕಾರಣಿಗಳಲ್ಲಿ ಹೊಂದಾಣಿಕೆ ಇರಬಹುದು. ಆದ್ರೆ ಯತ್ನಾಳ್ ಜೊತೆ ಯಾರಿಗೂ ಹೊಂದಾಣಿಕೆ ಆಗಲು ಸಾಧ್ಯವಿಲ್ಲ ಎಂದು ಹೆಚ್ ಡಿಕೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.