Ukraine | ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ತ್ವರಿತಗೊಳಿಸಿ : ಮೋದಿಗೆ ಹೆಚ್.ಡಿ.ದೇವೇಗೌಡ ಪತ್ರ
ಪ್ರಧಾನಿ ಮೋದಿಗೆ ಹೆಚ್.ಡಿ.ದೇವೇಗೌಡ ಪತ್ರ
ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ತ್ವರಿತಗೊಳಿಸಿ
ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳು
ಉಕ್ರೇನ್ ಮೇಲೆ ರಷ್ಯಾ ಸೇನೆ ದಾಳಿ ಹಿನ್ನೆಲೆ
ವಿದ್ಯಾರ್ಥಿಗಳ ಸ್ಥಳಾಂತರ ಇನ್ನಷ್ಟು ಚುರುಕುಗೊಳಿಸಿ
ಬೆಂಗಳೂರು : ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ತ್ವರಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮನವಿ ಮಾಡಿದ್ದಾರೆ.
ಐದನೇ ದಿನವೂ ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸಿದೆ. ಹೀಗಾಗಿ ಉಕ್ರೇನ್ ನಲ್ಲಿರುವ ಭಾರತೀಯರ ಸ್ಥಿತಿ ಅಯೋಮಯವಾಗಿದೆ.
ಭಾರತದ ವಿದ್ಯಾರ್ಥಿಗಳು ಹಾಸ್ಟೆಲ್ ಬಂಕರ್, ಮೆಟ್ರೋ ಸುರಂಗಗಳಲ್ಲಿ ಆಶ್ರಯ ಪಡೆದು ಜೀವ ಉಳಿಸಿಕೊಳ್ಳುತಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಹೆಚ್ ಡಿ ದೇವೇಗೌಡರು ಪತ್ರ ಬರೆದು, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಕಾರ್ಯ ತ್ವರಿತಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ದೇವೇಗೌಡರು ಬರೆದಿರುವ ಪತ್ರದಲ್ಲಿ, ಉಕ್ರೇನ್ ನಲ್ಲಿ 400ಕ್ಕೂ ಹೆಚ್ಚು ಕರ್ನಾಟಕದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಸದ್ಯ 42 ಮಂದಿ ವಿದ್ಯಾರ್ಥಿಗಳನ್ನು ಮಾತ್ರ ಸ್ಥಳಾಂತರ ಮಾಡಲಾಗಿದೆ.
ಇನ್ನುಳಿದ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಚಾರಣೆಯನ್ನು ಚುರುಕುಗೊಳಿಸಿ ಎಂದು ಮನವಿ ಮಾಡಿದ್ದಾರೆ.
HD Deve Gowda Writes letter to pm Narendra modi









