ADVERTISEMENT
Friday, July 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಕುಮಾರಸ್ವಾಮಿ ಆಪರೇಷನ್ ಕಮಲದ ಕೂಸು:ಡಿ ಕೆ ಶಿವಕುಮಾರ್ ಏಳಿಗೆ ಸಹಿಸದ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

Shwetha by Shwetha
July 17, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಕೇವಲ 28 ರಿಂದ 30 ಶಾಸಕರನ್ನು ಇಟ್ಟುಕೊಂಡು ಆಪರೇಷನ್ ಕಮಲದ ಮೂಲಕ ಅನಿರೀಕ್ಷಿತವಾಗಿ ಅಧಿಕಾರ ಹಿಡಿದ ಇತಿಹಾಸ ಕುಮಾರಸ್ವಾಮಿ ಅವರದ್ದು ಎಂದು ಸಚಿವ ಎನ್ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ. 136 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ರಾಜ್ಯದ 7 ಕೋಟಿ ಜನರ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಡಿ ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಲು ಸಾಧ್ಯವಿಲ್ಲ ಎನ್ನುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರ ಮಾತಿನ ಮೇಲೆ ನಿಗಾ ಇರಲಿ ಎಂದು ಎಚ್ಚರಿಸಿದ ಸಚಿವರು ಮಿಸ್ಟರ್ ಕುಮಾರಸ್ವಾಮಿ ಎಂದು ಕರೆಯುವುದು ನಮಗೂ ಗೊತ್ತು ಆದರೆ ಸೌಜನ್ಯಕ್ಕಾಗಿ ಸುಮ್ಮನಿದ್ದೇವೆ ಎಂದಿದ್ದಾರೆ. ಇದು ಅವರ ಮೂರ್ಖತನದ ಪರಮಾವಧಿ ಎಂದು ಟೀಕಿಸಿದ್ದಾರೆ. 2006ರಲ್ಲಿ ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ಅಧಿಕೃತ ನಾಯಕರಾಗದಿದ್ದರೂ ಅವರನ್ನು ಸಿಎಂ ಕುರ್ಚಿಯಲ್ಲಿ ಕೂರಿಸಿದ್ದು ನಾವು ಎಂಬುದನ್ನು ಅವರು ನೆನಪಿಸಿಕೊಳ್ಳಬೇಕು. ರಾಜ್ಯದಲ್ಲಿ ಅಸಂವಿಧಾನಿಕವಾಗಿ ಆಪರೇಷನ್ ಕಮಲಕ್ಕೆ ನಾಂದಿ ಹಾಡಿದ್ದೇ ಕುಮಾರಸ್ವಾಮಿ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

Related posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

July 17, 2026
ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

July 17, 2026

ಹಿಂದೆ ಎಸ್ ಎಂ ಕೃಷ್ಣ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದನ್ನು ಸಹಿಸದ ಕುಮಾರಸ್ವಾಮಿ ಅವರು ಈಗ ಮತ್ತೊಬ್ಬ ಒಕ್ಕಲಿಗ ನಾಯಕ ಡಿ ಕೆ ಶಿವಕುಮಾರ್ ಬೆಳೆಯುತ್ತಿರುವುದನ್ನು ಕಂಡು ಹೊಟ್ಟೆಕಿಚ್ಚು ಪಡುತ್ತಿದ್ದಾರೆ. ಡಿ ಕೆ ಶಿವಕುಮಾರ್ ಅವರು ಇಷ್ಟೆಲ್ಲಾ ಟೀಕೆಗಳ ನಡುವೆಯೂ ಕುಮಾರಸ್ವಾಮಿ ಅವರನ್ನು ಅಣ್ಣ ಎಂದು ಗೌರವದಿಂದ ಕರೆಯುವ ಸೌಜನ್ಯ ತೋರಿದ್ದಾರೆ ಅದನ್ನು ನೋಡಿಯಾದರೂ ಇವರು ಸಂಸ್ಕಾರ ಕಲಿಯಲಿ ಎಂದು ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಹಿಂದೆ ಆರ್‌ಎಸ್‌ಎಸ್ ಮತ್ತು ಪ್ರಧಾನಿ ಮೋದಿಯವರನ್ನು ತೀವ್ರವಾಗಿ ನಿಂದಿಸಿದ್ದ ಕುಮಾರಸ್ವಾಮಿ ಇಂದು ಕೇವಲ ಕೇಂದ್ರ ಸಂಪುಟ ಪುನಾರಚನೆಯಾದರೆ ತಮ್ಮ ಮಂತ್ರಿ ಸ್ಥಾನ ಎಲ್ಲಿ ಕೈತಪ್ಪಿ ಹೋಗುತ್ತದೋ ಎಂಬ ಭಯದಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್ ಗುಣಗಾನ ಮಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಕೊನೆಯಲ್ಲಿ ಕುಮಾರಸ್ವಾಮಿ ಅವರಿಗೆ ಮುಕ್ತ ಸವಾಲು ಹಾಕಿದ ಸಚಿವರು ನಿಮಗೆ ನಿಜವಾಗಿಯೂ ಸ್ವಾಭಿಮಾನವಿದ್ದರೆ ತಕ್ಷಣವೇ ಬಿಜೆಪಿ ಮೈತ್ರಿಯಿಂದ ಹೊರಬಂದು ನೇರವಾಗಿ ನಮ್ಮೊಂದಿಗೆ ಕಡೇ ಆಟ ಆಡಿ ನೋಡಿ ಎಂದು ತೊಡೆ ತಟ್ಟಿದ್ದಾರೆ. ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ನಿಶ್ಚಿತ ಎಂದು ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ShareTweetSendShare
Join us on:

Related Posts

ವಂದೇ ಮಾತರಂಗೆ ರಾಷ್ಟ್ರಗೀತೆಯ ಸರಿಸಮಾನ ಸ್ಥಾನ ನೀಡುವುದು ಸಂವಿಧಾನ ವಿರೋಧಿ ಮತ್ತು ಅಪಾಯಕಾರಿ ನಡೆ: ಕೇಂದ್ರದ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ರಾಜಕೀಯ ಸಂಚುಗಳು ಇನ್ನು ನಡೆಯಲ್ಲ,ಯಾರು ಈ ಗಾಯತ್ರಿ ಶಾಂತೇಗೌಡ ಬಿ ಕೆ ಹರಿಪ್ರಸಾದ್ ಅವರ ಸಂಭ್ರಮಕ್ಕೆ ಕಾರಣವಾದ ಆ ಸುಪ್ರೀಂ ತೀರ್ಪಿನ ಹಿನ್ನೆಲೆ ಏನು?

by Shwetha
July 17, 2026
0

ವಿಧಾನಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಪ್ರಜಾಪ್ರಭುತ್ವದ ಅತಿದೊಡ್ಡ ಗೆಲುವು ಎಂದು ಕಾಂಗ್ರೆಸ್ ನಾಯಕ ಬಿ ಕೆ...

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಪತ್ನಿಯಿಂದಲೇ ಅರವಳಿಕೆ ತಜ್ಞ ಡಾ. ಕಿರಣ್ ಕೊಲೆ: ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

by Shwetha
July 17, 2026
0

ಬೆಳಗಾವಿ ಜಿಲ್ಲೆಯ ಸಂಕೇಶ್ವರ ತಾಲೂಕಿನ ಹೆಬ್ಬಾಳ ಗ್ರಾಮದ ಅರವಳಿಕೆ ತಜ್ಞ ಡಾ. ಕಿರಣ್ ಹೊನ್ನಣ್ಣನವರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ...

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

ಜೈಲು ಹೇಳಿಕೆ ಕೇವಲ ಅನುಕಂಪ ಗಿಟ್ಟಿಸುವ ನಾಟಕ- ತಪ್ಪು ಮಾಡಿದರೆ ಜೈಲು ಶಿಕ್ಷೆ ಖಚಿತ:ಮಳೆ ಬಂದರೂ ಮೋದಿಯೇ ಕಾರಣ ಎನ್ನುವ ಕಾಂಗ್ರೆಸ್ ಧೋರಣೆ ನಿಲ್ಲಲಿ ಪ್ರಹ್ಲಾದ್ ಜೋಶಿ ವಾಗ್ದಾಳಿ

by Shwetha
July 17, 2026
0

ಬಿಡದಿಯ ವಿವಾದಿತ ಟೌನ್ ಶಿಪ್ ನಿರ್ಮಾಣ ವಿಚಾರವಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ್ದ ಜೈಲು ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಡಿ...

ಮೊಹಮ್ಮದ್ ಘಜ್ನಿ ನಂತರ ರಾಮಮಂದಿರ ಲೂಟಿ ಮಾಡಿದ್ದು ಬಿಜೆಪಿ ಮತ್ತು ಆರ್ ಎಸ್ ಎಸ್: ಹರಿಪ್ರಸಾದ್ ಸ್ಫೋಟಕ ಆರೋಪ

ನಾನು ಯಾರ ಪರವೂ ಲಾಬಿ ಮಾಡುವುದಿಲ್ಲ: ಬಿ.ಕೆ. ಹರಿಪ್ರಸಾದ್

by Shwetha
July 17, 2026
0

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ದಿನ ಭವಿಷ್ಯ (07-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 17, 2026
0

ದಿನ ಭವಿಷ್ಯ 17-07-2026 1. ಮೇಷ ರಾಶಿ ಉದ್ಯೋಗ ಮತ್ತು ಹಣಕಾಸು: ಕಾರ್ಯಕ್ಷೇತ್ರದಲ್ಲಿ ಇಂದು ನಿಮ್ಮ ನಾಯಕತ್ವದ ಗುಣಗಳು ಪ್ರಶಂಸೆಗೆ ಒಳಗಾಗುತ್ತವೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram