ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

H D Kumaraswamy | ಬಹಿರಂಗ ಚರ್ಚೆ ಮಾಡೋಣ ಬನ್ನಿ : ಹೆಚ್ಡಿಕೆ ಸವಾಲು

Mahesh M Dhandu by Mahesh M Dhandu
October 2, 2022
in Newsbeat, Politics, ರಾಜಕೀಯ
hd-kumaraswamy-slams-ashwath-narayan on twitter

hd-kumaraswamy-slams-ashwath-narayan on twitter

Share on FacebookShare on TwitterShare on WhatsappShare on Telegram

H D Kumaraswamy | ಬಹಿರಂಗ ಚರ್ಚೆ ಮಾಡೋಣ ಬನ್ನಿ : ಹೆಚ್ಡಿಕೆ ಸವಾಲು

ಬೆಂಗಳೂರು : ಬಿಜೆಪಿ ಸರಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ ಎಂದು ಸಚಿವ ಅಶ್ವಥ್ ನಾರಾಯಣ್ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಅಭಿವೃದ್ಧಿ ಕೆಲಸ ಎಂದರೇನು ಸಚಿವ ಡಾ.ಅಶ್ವಥ್ ನಾರಾಯಣ್ ? ವಾಮಮಾರ್ಗ ಎಂದರೆ ಯಾವುದು? ಇವೆರಡರಲ್ಲೂ ತಮಗೆ ಒಳ್ಳೇ ಅನುಭವವೇ ಇದೆ. ಅಧಿಕಾರಿಗಳನ್ನು ಬುಟ್ಟಿಗೆ ಹಾಕಿಕೊಂಡು ʼಕಳ್ಳಮಾರ್ಗʼದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲು ಹೊರಟಿದ್ದು, ಕ್ಷೇತ್ರದ ಶಾಸಕರನ್ನೇ ಕತ್ತಲೆಯಲ್ಲಿ ಇಟ್ಟಿದ್ದನ್ನು ಏನೆಂದು ಕರೆಯಬೇಕು? ಇದೇನಾ ನೀವು ಹೇಳುವ ʼರಾಜಮಾರ್ಗʼ ಎಂದು ಪ್ರಶ್ನಿಸಿದ್ದಾರೆ.

hd-kumaraswamy-slams-ashwath-narayan on twitter
hd-kumaraswamy-slams-ashwath-narayan on twitter

ʼಅಧಿಕಾರವೂ ತಪ್ಪಬಾರದು, ಅಭಿವೃದ್ಧಿಯೂ ಆಗಬಾರದು’ ಎಂದು ನಾನು ಭಾವಿಸಿದ್ದಿದ್ದರೆ ನೀವು ಮಲ್ಲೇಶ್ವರದಲ್ಲಿ ಶಾಸಕರೇ ಆಗುತ್ತಿರಲಿಲ್ಲ. ಆ ದಿನಗಳನ್ನು ಒಮ್ಮೆ ನೆನಪು ಮಾಡಿಕೊಳ್ಳಿ. ಇನ್ನು; ಅಭಿವೃದ್ಧಿ ಬಗ್ಗೆ ಉಪದೇಶ ಮಾಡಿದ್ದೀರಿ, ನಿಮ್ಮ ಮಾದರಿಯಲ್ಲಿ ಅಭಿವೃದ್ಧಿ ಮಾಡಿಕೊಳ್ಳುವುದು ನನಗೆ ಗೊತ್ತಿಲ್ಲ, ನನ್ನಿಂದ ಆಗುವುದೂ ಇಲ್ಲ.

https://twitter.com/hd_kumaraswamy/status/1576414027806167040?s=20&t=FQpDx45od4pkToXvQ2UBrw

ಸಚಿವ ಡಾ.ಅಶ್ವಥ್ ನಾರಾಯಣ್ ಅವರೇ, ಅಧಿಕಾರ ಬರುತ್ತದೆ, ಹೋಗುತ್ತದೆ ಎಂದು ವೇದಾಂತ ಹೇಳಿದ್ದೀರಿ. ಹೌದು; ಇಂಥ ಉದಾತ್ತ, ಆದರ್ಶ ಚಿಂತನೆಯ, ವಿಶಾಲ ಹೃದಯ ವೈಶಾಲ್ಯವುಳ್ಳ  ನಿಮ್ಮಂಥ ಪ್ರಾಜ್ಞರೇ ಆಪರೇಶನ್ ಕಮಲ ಎಂಬ ಪಾಪ ಎಸಗಿದ್ದೇಕೆ? ನಮ್ಮ ಶಾಸಕರ ಮನೆಯಲ್ಲಿ ಹಣ ಇಟ್ಟು ಬಂದ್ದಿದ್ದು ಯಾಕೆ?

ಅಧಿಕಾರ ಬೇಕಿದ್ದರೆ ನೀವು ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವವರೆಗೂ ಕಾಯಬಹುದಿತ್ತಲ್ಲವೇ? ಆದರೆ, ಹಪಾಹಪಿಯಿಂದ ʼಅಡ್ಡಮಾರ್ಗʼ ಹಿಡಿದಿದ್ದು ಏಕೆ? ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಅಪಹರಿಸಿ ಆಪರೇಷನ್‌ ಕಮಲದ ಸರಕಾರ ಮಾಡಿದ್ದು ಯಾಕೆ? ಇದು ವಾಮಮಾರ್ಗವೋ? ಸನ್ಮಾರ್ಗವೋ? ಸ್ಪಲ್ಪ ಹೇಳಿ ಸಚಿವ ಡಾ.ಅಶ್ವಥ್ ನಾರಾಯಣ್  ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಿಜೆಪಿ ಸರಕಾರ ಬಂದ ಮೇಲೆ ರಾಮನಗರ ಜಿಲ್ಲೆಯಲ್ಲಿ ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಬಹಿರಂಗ ಚರ್ಚೆ ಮಾಡೋಣ ಬನ್ನಿ. ಆಗ ಯಾರ ಆತ್ಮಸಾಕ್ಷಿ ಏನು ಎಂಬುದು ಜನರಿಗೂ ತಿಳಿಯುತ್ತದೆ. ʼಎಂಎಲ್‌ಸಿ ಕೋರಿಕೆ ಮೇರೆಗೆ..ʼ ಎಂದು ಬಿಡುಗಡೆ ಮಾಡಿದ 50 ಕೋಟಿ ರೂ. ಒಳಗುಟ್ಟಿನ ಬಗ್ಗೆಯೂ ಚರ್ಚಿಸೋಣ ಬನ್ನಿ. ನಾನು ತಯಾರಿದ್ದೇನೆ ಎಂದು ಸಚಿವರಿಗೆ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

Tags: #Saaksha TVashwath narayanBJPH D KUMARASWAMYJDS
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram