ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಹೆಚ್.ಡಿ.ಕೆ ಶಪಥ
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆ ಬಹುತ ನೀಡಿದರೆ ಐದು ವರ್ಷದಲ್ಲಿ ನೀರಾವರಿ ಯೋಜನೆಯನ್ನು ಜಾರಿಗೆ ತರುತ್ತೇನೆ. ಇಲ್ಲದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚಾಮುಂಡಿ ತಾಯಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಭಾರಿ ಅಧಿಕಾರ ನೀಡಿ, ಐದು ವರ್ಷಗಳಲ್ಲಿ ನಿರಾವರಿ ಯೋಜನೆ ಅನುಷ್ಠನಕ್ಕೆ ತರದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ ಎಂದು ತಾಯಿ ಚಾಮುಂಡೇಶ್ವರಿ ಮುಂದೆ ಶಪಥ ಮಾಡಿದ್ದೇನೆ ಎಂದು ಹೇಳಿದರು.
ಅಲ್ಲದೇ ಬಾರಿ 30-40 ಸ್ಥಾನಕ್ಕಾಗಿ ಹೋರಾಟ ಮಾಡುವುದಿಲ್ಲ, ಪೂರ್ಣ ಪ್ರಣಾಮದ ಯಾರ ಹಂಗು ಇಲ್ಲದೇ ಸರಕಾರ ರಚಿಸಲು ಹೋರಾಟ ಮಾಡುತ್ತಿದ್ದೇನೆ. ಧರ್ಮ-ಧರ್ಮಗಳ ನಡುವೆ ಬೆಂಕಿ ಹಚ್ಚುಲು ಮತ ಕೇಳುತ್ತಲ್ಲ, ರಾಜ್ಯದ ಅಭಿವೃದ್ಧಿಗೆ ನನ್ನ ಹೋರಾಟ ಎಂದರು.