ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಿಜವಾದ ಟ್ರಬಲ್ ಶೂಟರ್ ಯಾರು ? ಡಿಕೆ ಬ್ರದರ್ಸ್ ವಿರುದ್ಧ ಬ್ರದರ್ ಎಚ್‍ಡಿಕೆ ವಾಗ್ದಾಳಿ

admin by admin
July 30, 2020
in Newsbeat, Politics, ರಾಜಕೀಯ
DK Shivakumar
Share on FacebookShare on TwitterShare on WhatsappShare on Telegram

ನಿಜವಾದ ಟ್ರಬಲ್ ಶೂಟರ್ ಯಾರು ? ಡಿಕೆ ಬ್ರದರ್ಸ್ ವಿರುದ್ಧ ಬ್ರದರ್ ಎಚ್‍ಡಿಕೆ ವಾಗ್ದಾಳಿ

ರಾಜಕಾರಣದಲ್ಲಿ ಯಾರು ಶತ್ರುಗಳಲ್ಲ… ಯಾರು ಮಿತ್ರರೂ ಅಲ್ಲ. ಯಾವಾಗ ಶತ್ರುಗಳಾಗ್ತಾರೋ… ಯಾವಾಗ ಮಿತ್ರರಾಗ್ತಾರೋ ಎಂಬುದು ಗೊತ್ತೇ ಆಗಲ್ಲ. ಪಾಪ ರಾಜಕಾರಣಿಗಳನ್ನು ನಂಬಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುವ ಕಾರ್ಯಕರ್ತರ ಪಾಡನ್ನಂತೂ ಹೇಳುವುದೇ ಬೇಡ.
ನೆನಪಿರಬಹುದು.. ಕಳೆದ ವಿಧಾನ ಸಭೆಯ ಚುನಾವಣೆಯ ಫಲಿತಾಂಶದ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಾಟಕಗಳನ್ನು ವಿಧಾನ ಸೌಧದಲ್ಲಿ ನೋಡಿದ್ದೀರಿ. ಚುನಾವಣೆಗೆ ಮುನ್ನ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಒಬ್ಬರನ್ನೊಬ್ಬರು ಆರೋಪ ಪ್ರತ್ಯಾರೋಪ ಮಾಡಿಕೊಂಡು ಮತ ಕೇಳುತ್ತಿದ್ದರು. ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್ ನಾಯಕರು ನೇರವಾಗಿ ಹೋಗಿದ್ದು ದೇವೇಗೌಡರ ಮನೆ ಬಾಗಿಲಿಗೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ.. ನಾವು ಬೆಂಬಲ ನೀಡುತ್ತೇವೆ ಅಂತ ಹೇಳಿದಾಗ ದೇವೇಗೌಡರಿಗೆ ಆದ ಸಂತಸಕ್ಕೆ ಪಾರವೇ ಇಲ್ಲ. ಯಾಕಂದ್ರೆ ಜನ ಬೆಂಬಲವಿಲ್ಲದಿದ್ರೂ ಮಗ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ ಅಂದಾಗ ಯಾರು ಬೇಡ ಅಂತಾರೆ. ಹಾಗೇ ಸಮ್ಮಿಶ್ರ ಸರ್ಕಾರವೂ ರಚನೆಯಾಯ್ತು. ಪರಮೇಶ್ವರ್ ಉಪಮುಖ್ಯಮಂತ್ರಿಯಾದ್ರು.
ಇನ್ನೊಂದೆಡೆ ಪರಮ ಶತ್ರುಗಳಾಗಿ ಕಿತ್ತಾಡಿಕೊಳ್ಳುತ್ತಿದ್ದ ಡಿ.ಕೆ. ಶಿವ ಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ಆಪ್ತ ಮಿತ್ರರಾದ್ರು. ಅಷ್ಟೇ ಅಲ್ಲ ಜೋಡೆತ್ತುಗಳು ಎಂದು ಹೇಳಿಕೊಳ್ಳುತ್ತಾ ಸಮ್ಮಿಶ್ರ ಸರ್ಕಾರದ ಎರಡು ಕಣ್ಣುಗಳಂತಿದ್ದರು. ಮಂಡ್ಯ ಲೋಕ ಸಭೆಯ ಉಪ ಚುನಾವಣೆಯಲ್ಲೂ ಡಿಕೆಶಿ ಮತ್ತು ಎಚ್‍ಡಿಕೆ ಜೊತೆಯಾಗಿ ನಿಂತು ಪ್ರಚಾರ ಮಾಡಿದ್ದರು.
ಆನಂತರ ಸಮ್ಮಿಶ್ರ ಸರ್ಕಾರ ಬಿದ್ದು ಹೋಯ್ತು. ಬಿಎಸ್‍ವೈ ಸರ್ಕಾರ ರಚನೆ ಮಾಡಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್‍ನ ಶಾಸಕರು ಆಪರೇಷನ್ ಕಮಲಕ್ಕೆ ಬಲಿಯಾದ್ರು. ಆಗ ಡಿ.ಕೆ. ಶಿವ ಕುಮಾರ್ ನೇರವಾಗಿ ಮುಂಬೈಗೆ ಹೋಗಿ ಅಲ್ಲಿ ಅತೃಪ್ತ ಶಾಸಕರನ್ನು ಮನವೋಲಿಸಿದ್ದರು. ಅಲ್ಲದೆ ಮುಂಬೈ ಪೊಲೀಸರ ವಶಕ್ಕೂ ಪಡೆದುಕೊಂಡಿದ್ದರು. ಅಂದು ಡಿ.ಕೆ. ಶಿವಕುಮಾರ್ ಸರ್ಕಾರ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು.
ಆದ್ರೆ ಡಿ.ಕೆ. ಶಿವಕುಮಾರ್ ಅಂದು ಡ್ರಾಮಾ ಮಾಡಿದ್ರು ಎಂಬುದು ಕುಮಾರಸ್ವಾಮಿಯವರ ಈಗಿನ ಹೇಳಿಕೆಯಿಂದ ಗೊತ್ತಾಗುತ್ತದೆ. ಮಂಡ್ಯ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಸಾಥ್ ನೀಡಲಿಲ್ಲ. ಡಿ.ಕೆ. ಶಿವಕುಮಾರ್ ಪ್ರಚಾರಕ್ಕೆ ಬಂದು ಭಾಷಣ ಮಾಡಿ ಹೋಗಿದ್ರು. ಸ್ಥಳೀಯ ಕಾಂಗ್ರೆಸ್ ನಾಯಕರು ನಮಗೆ ಬೆಂಬಲ ನೀಡಿಲ್ಲ. ಅವರು ಮನಸ್ಸು ಮಾಡಿದ್ರೆ ಆಗುತ್ತಿತ್ತು ಎಂದು ಪರೋಕ್ಷವಾಗಿ ಡಿಕೆಶಿಗೆ ಟಾಂಗ್ ನೀಡಿದ್ರು.
ಇನ್ನು ರಾಮನಗರದಲ್ಲಿ ನನ್ನ ಪ್ರಾಬಲ್ಯವನ್ನು ಕುಗ್ಗಿಸಲು ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಹಂಬಲ ಇದೆ. ಇದಕ್ಕಾಗಿ ಡಿಕೆಶಿ ಅವರ ತಮ್ಮ ಸಂಸದ ಡಿ.ಕೆ. ಸುರೇಶ್ ಕುಮಾರ್ ಮೂಲಕ ರಾಮನಗರದಲ್ಲಿ ನಮ್ಮ ಪಕ್ಷವನ್ನು ಮುಗಿಸುವ ಯತ್ನ ನಡೆಸುತ್ತಿದ್ದಾರೆ. ಆದ್ರೆ ಅದೆಲ್ಲಾ ಸಾಧ್ಯವಿಲ್ಲ. ನನಗೆ ನನ್ನ ಜನರ ಬಗ್ಗೆ ನಂಬಿಕೆ ಇದೆ ಎಂದು ಎಚ್‍ಡಿಕೆ ಹೇಳಿದ್ರು.
ಡಿ.ಕೆ. ಶಿವಕುಮಾರ್ ಮತ್ತು ನಾನು ಅಂದು ಮಿತ್ರರಾಗಿದ್ದು ನಿಜ. ಆದ್ರೆ ಈಗ ಅಲ್ಲ. ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಮುಖ್ಯ ಕಾರಣ ಬೆಳಗಾವಿ ರಾಜಕಾರಣ. ಬೆಳಗಾವಿ ರಾಜಕಾರಣದಿಂದಲೇ ಸಮ್ಮಿಶ್ರ ಸರ್ಕಾರ ಪತನಗೊಂಡಿದ್ದು. ಡಿಕೆಶಿ ಮನಸ್ಸು ಮಾಡಿದ್ರೆ ಸರ್ಕಾರವನ್ನು ಉಳಿಸಬಹುದಿತ್ತು. ಟ್ರಬಲ್ ಶೂಟರ್ ಯಾರು ಎಂಬುದು ಗೊತ್ತಿದೆ ಎಂದು ಎಚ್‍ಡಿಕೆ ಡಿಕೆಶಿ ಬ್ರದರ್ಸ್ ವಿರುದ್ಧ ವಾಗ್ದಾಳಿ ನಡೆಸಿದ್ರು.

Related posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

March 21, 2026
ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

March 21, 2026
Tags: BJPCongressD.K. Shiva kumard.k. suresh kumarH D KUMARASWAMYJDSkpccKPCC PresidentKPCC President D.K. shiva kumar
ShareTweetSendShare
Join us on:

Related Posts

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರ ಭರವಸೆ: ಡಿಕೆ ಶಿವಕುಮಾ‌ರ್

by Shwetha
March 21, 2026
0

ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಡಿ. ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವರನ್ನು...

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ

by Shwetha
March 21, 2026
0

ಬೆಂಗಳೂರು ನಗರದ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ದಿಶೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಟೆಂಡರ್ ಆಹ್ವಾನಿಸಿದೆ. ಈ ಕುರಿತು ಎಮ್. ಬಿ. ಪಾಟೀಲ್ ಪ್ರತಿಕ್ರಿಯಿಸಿ,...

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

ಮಧ್ಯಪ್ರಾಚ್ಯದಲ್ಲಿ ಮಹಾ ಸಂಘರ್ಷ: ಹಾರ್ಮುಜ್‌ ಜಲಸಂಧಿಯಲ್ಲಿ ಹಡಗು ಸಾಗಿಸಲು ಇರಾನ್ ವಿಧಿಸಿದೆ 18 ಕೋಟಿ ರೂಪಾಯಿ ಟೋಲ್!.

by Shwetha
March 21, 2026
0

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಕಾರ್ಮೋಡದ ನಡುವೆಯೇ ಇರಾನ್ ಜಗತ್ತಿನ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಇದು ಜಾಗತಿಕ...

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

ಗ್ಯಾಸ್ ಬುಕ್ಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ ಇನ್ಮುಂದೆ ದಿನದ 24 ಗಂಟೆಯೂ ಬುಕ್ ಮಾಡುವಂತಿಲ್ಲ : ಗ್ಯಾಸ್ ಬುಕ್ ಮಾಡುವ ಮುನ್ನ ಈ ಸುದ್ದಿ ಓದಿ ಹೊಸ ಟೈಮಿಂಗ್ಸ್ ಮಿಸ್ ಆದ್ರೆ ಸಿಲಿಂಡರ್ ಸಿಗಲ್ಲ!

by Shwetha
March 21, 2026
0

ಬೆಂಗಳೂರು: ಅಡುಗೆ ಅನಿಲ ಗ್ರಾಹಕರಿಗೆ ತೈಲ ಕಂಪನಿಗಳು ಮಹತ್ವದ ಸುದ್ದಿಯೊಂದನ್ನು ನೀಡಿದ್ದು ಸಿಲಿಂಡರ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಇದುವರೆಗೆ ನಿಮಗೆ ಇಷ್ಟ ಬಂದ...

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

ಸಾಲದ ಶೂಲದಲ್ಲಿ ರಾಜ್ಯವಿದ್ದರೂ ಹೈಕಮಾಂಡ್ ಪಾಲಿಗೆ ಕರ್ನಾಟಕವೇ ಕಾಮಧೇನು ಡಿಕೆಶಿ ವಿರುದ್ಧ ಐಶ್ವರ್ಯ ಅನಂತಕುಮಾರ್ ನೇರ ವಾಗ್ದಾಳಿ

by Shwetha
March 21, 2026
0

ಬೆಂಗಳೂರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಕೇವಲ ತನ್ನ ಪಕ್ಷದ ಹೈಕಮಾಂಡ್‌ಗೆ ಹಣ ಒದಗಿಸುವ ಮೂಲವನ್ನಾಗಿ ಮಾಡಿಕೊಂಡಿದೆ ಎಂದು ದಿವಂಗತ ಕೇಂದ್ರ ಸಚಿವ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram