ಸಾಲದ ಶೂಲಕ್ಕೆ ಹೆಡ್ ಕಾನ್ಸ್ ಟೇಬಲ್ ಬಲಿ
ಬೆಂಗಳೂರು : ಸಾಲ ಬಾಧೆ ತಾಳಲಾರದೇ ಹೆಡ್ ಕಾನ್ಸ್ ಟೇಬಲ್ ನೇಣಿಗೆ ಕೊರಳೊಡ್ಡಿರುವ ಘಟನೆ ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದುಬಾಸಿಪಾಳ್ಯದ ನಿವಾಸಿ ಹೆಡ್ ಕಾನ್ಸ್ಟೇಬಲ್ ಕುಮಾರ್ (36) ಮೃತರು.
ಇವರು ಕಳೆದ ಮೂರು ವರ್ಷಗಳಿಂದ ಪಶ್ವಿಮ ವಿಭಾಗದ ಸಶಸ್ತ್ರ ವಿಭಾಗದಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಎಂದಿನಂತೆ ಉಳ್ಳಾಲದಲ್ಲಿರುವ ಸಿಎಆರ್ ಕಚೇರಿಗೆ ನಿನ್ನೆ ಕರ್ತವ್ಯಕ್ಕೆಂದು ತೆರಳಿದ್ದರು.
ಯಾರೂ ಇಲ್ಲದಿರುವಾಗ ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಸ್ಥಳಕ್ಕೆ ಜ್ಞಾನಭಾರತಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ರವಾನಿಸಲಾಗಿದೆ.