ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರವಾಗಿ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಮತ್ತು ಸರ್ಕಾರದ ನಡುವೆ ತಿಕ್ಕಾಟ ಪ್ರಾರಂಭವಾಗಿದೆ. ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ವೇತನ ಪರಿಷ್ಕರಣೆಗೆ ಸರ್ಕಾರವನ್ನು ಒತ್ತಾಯಿಸಿ ಇಂದಿನಿಂದ ಆರೋಗ್ಯ ಸೇವೆಯಲ್ಲಿ, ಕೆಲಸಗಳಲ್ಲಿ ತೊಡಗಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಹೀಗಾಗಿ ಇಂದಿನಿಂದ ರಾಜ್ಯದಲ್ಲಿ ಹೆಲ್ತ್ ಎಮೆರ್ಜಿನ್ಸಿ ಎದುರಾಗಲಿದೆ. ಅಲ್ಲದೆ ಕೊರೊನಾ ರಿಪೋರ್ಟ್ ಸೇರಿ ಬೇರೆ ಯಾವುದೇ ಆರೋಗ್ಯ ಸಂಬಂಧಿ ರಿಪೋರ್ಟ್ ಸಿಗಲ್ಲ. ಒಂದು ವಾರದೊಳಗೆ ಸರ್ಕಾರ ಎಚ್ಚೆತ್ತು ಬೇಡಿಕೆ ಈಡೇರಿಸದಿದ್ದರೆ ಸರ್ಕಾರಿ ಆಸ್ಪತ್ರೆ ಬಂದ್ ಮಾಡುತ್ತೇವೆ. ಕೇವಲ ಎಮರ್ಜೆನ್ಸಿ ಮಾತ್ರ ಓಪನ್ ಇರಲಿದೆ ಅನ್ನೋ ಎಚ್ಚರಿಕೆಯನ್ನು ವೈದ್ಯರು ನೀಡಿದ್ದಾರೆ.
ವೈದ್ಯರ ಬೇಡಿಕೆಗಳು ಏನು..?
ಸರ್ಕಾರದಿಂದ ಡಾಕ್ಟರ್ಸ್ ಡೇ ಮಾಡುವಂತೆ ಒತ್ತಾಯ
ಕೋವಿಡ್ ವೇಳೆ ಮೃತ ಪಟ್ಟ ವೈದ್ಯರಿಗೆ ಸರ್ಕಾರ ಪರಿಹಾರ ನೀಡುವಂತೆ ಬೇಡಿಕೆ
ಪ್ರಮುಖವಾಗಿ ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯ
ಡಿಸಿ ಮತ್ತು ಸಿಇಓಗಳ ದಬ್ಬಾಳಿಕೆಯನ್ನ ತಪ್ಪಿಸಿಬೇಕು
ವೈದ್ಯರ ಪ್ರತಿಭಟನೆಯಿಂದ ಆಗುವ ಅನಾಹುತಗಳೇನು?
ಇಂದಿನಿಂದ ರಾಜ್ಯದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದರೇ ಕೊರೊನಾ ಸೇರಿದಂತೆ ಯಾವುದೇ ಹೆಲ್ತ್ ಬುಲೆಟಿನ್ ಸಿಗೋದು ಡೌಟು. ಹಾಗೇ ಕೋವಿಡ್ ವರದಿಗಳನ್ನ ನೀಡದಿದ್ದರೆ ಮತ್ತಷ್ಟು ಕೇಸ್ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸಾವು ನೋವು ಹೆಚ್ಚಾಗಬಹುದು. ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಲ್ಬಣಗೊಳ್ಳುತ್ತೆ. ಡಿಸಿ ಮತ್ತು ಸಿಇಓ ಮೀಟಿಂಗ್ ಗಳಿಗೆ ವೈದ್ಯರು, ವೈದ್ಯಾಧಿಕಾರಿಗಳು ಭಾಗವಹಿಸದಿದ್ದರೇ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಕಷ್ಟಸಾಧ್ಯವಾಗುತ್ತದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.