ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಆತಂಕಕಾರಿ : ಸಚಿವ ಸುಧಾಕರ್‌

admin by admin
May 21, 2021
in Newsbeat, State, ರಾಜ್ಯ
minister dr sudhakar minister basavaraj bommayi saakshatv
Share on FacebookShare on TwitterShare on WhatsappShare on Telegram

ಹಾವೇರಿ ಜಿಲ್ಲೆಯಲ್ಲಿ ಮರಣ ಪ್ರಮಾಣ ಆತಂಕಕಾರಿ : ಸಚಿವ ಸುಧಾಕರ್‌ – ಹೆಚ್ಚಿನ ವೈದ್ಯ ಸೌಲಭ್ಯ ಇಲ್ಲದಿರುವುದರಿಂದ ಜಾಗೃತೆಯಿಂದ ಕೆಲಸ ಮಾಡಬೇಕು

minister dr sudhakar minister basavaraj bommayi saakshatvಹಾವೇರಿ : ಜಿಲ್ಲೆಯಲ್ಲಿ ಉತ್ತಮ ಮಟ್ಟದ ಆರೋಗ್ಯ ವ್ಯವಸ್ಥೆ ಇಲ್ಲದ ಕಾರಣಕ್ಕೆ ಕೋವಿಡ್‌ ನಿಯಂತ್ರಣದಲ್ಲಿ ಜಿಲ್ಲಾಡಳಿತ ಜವಾಬ್ದಾರಿಯುತವಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

Related posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

June 27, 2026
ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

June 27, 2026

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್‌ ನಿಯಂತ್ರಣ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಹಾವೇರಿ ಜಿಲ್ಲೆ ಮರಣ ಪ್ರಮಾಣದ ಸರಾಸರಿಯಲ್ಲಿ ಮೊದಲ ಸ್ಥಾನದಲ್ಲಿರುವುದು ಆತಂಕಕಾರಿ ವಿಷಯ ಎಂದರು.

ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಇದ್ದರೂ ಸಾವಿನ ಪ್ರಮಾಣ ರಾಜ್ಯದ ಸರಾಸರಿಗೆ ಹೋಲಿಸಿದಾಗ ಹೆಚ್ಚಿದೆ. ಹೀಗಾಗಿ ಹರಡುವಿಕೆ ಮತ್ತು ಸಾವಿನ ಪ್ರಮಾಣ ನಿಯಂತ್ರಣಕ್ಕೆ ಒತ್ತು ನೀಡಬೇಕು. ಸೋಂಕಿತರು ಪತ್ತೆ ಆದ ತಕ್ಷಣ ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲು ಮಾಡಬೇಕು. ಸದ್ಯ ಜಿಲ್ಲೆಯಲ್ಲಿ ಸಕ್ರೀಯ ಪ್ರಕರಣಗಳು ೧೮೩೬ ಇದೆ. ಈ ಪೈಕಿ ಹೋಮ್‌ ಐಸೊಲೇಶನ್‌ ನಲ್ಲಿ ೬೧೩ ಮಂದಿ ಇದ್ದಾರೆ. ಇಂದು ೨೦೯ ಡಿಸ್ಚಾರ್ಜ್‌, ಏಳು ಸಾವಿನ ಪ್ರಕರಣ ವರದಿಯಾಗಿದೆ ಎಂದು ವಿವರಿಸಿದರು.

minister dr sudhakar minister basavaraj bommayi saakshatvಬೇಗ ಸ್ಥಳಾಂತರಿಸಿ
ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಮನೆಯಲ್ಲೇ ಇರುವ ಸೋಂಕಿತರನ್ನು ಆದಷ್ಟು ಬೇಗ ಸ್ಥಳಾಂತರಿಸಿ ಹಾರೈಕೆ ನೀಡಬೇಕು. ಟೆಸ್ಟಿಂಗ್‌, ಟ್ರಾಕಿಂಗ್‌, ಟ್ರೀಟ್‌ಮೆಂಟ್‌ ಸೂತ್ರವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ಸಾವಿನ ಪ್ರಮಾಣ ತಡೆಯಲಿ ಕ್ರಮವಹಿಸಬೇಕು. ಸೋಂಕಿತರ ಸಂಪರ್ಕಿತರು ಮತ್ತು ಐಎಲ್‌ಐ ಹಾಗೂ ಸಾರಿ ಪ್ರಕರಣಗಳ ಟೆಸ್ಟಿಂಗ್‌ ಕಡ್ಡಾಯಗೊಳಿಸಬೇಕು. ಇದರಿಂದ ಆರಂಭದಲ್ಲೇ ಸೋಂಕನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಾಧ್ಯ ಎಂದು ಕಿವಿಮಾತು ಹೇಳಿದರು.
೩೬ ಗಂಟೆಯೊಳಗೆ ಟೆಸ್ಟ್‌ಗಳ ಪರೀಕ್ಷಾ ವರದಿ ನೀಡಬೇಕು. ಇದರಿಂದ ಸೋಂಕಿತರಿಗೆ ಆರಂಭದಿಂದಲೇ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ೬ ತಾಲ್ಲೂಕು ಆಸ್ಪತ್ರೆಗಳಲ್ಲಿ ಎಲ್ಲಿ ಆಕ್ಸಿಜನ್‌ ಹಾಸಿಗೆ ಮತ್ತು ವೆಂಟಿಲೇಟರ್‌ ಕೊರತೆ ಇದ್ದರೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೊರತೆ ಇದ್ದಲ್ಲಿ ತಕ್ಷಣ ಒದಗಿಸಲು ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು.

minister dr sudhakar minister basavaraj bommayi saakshatvಶೀಘ್ರ ನೇಮಕ

ಜಿಲ್ಲಾ ಆಸ್ಪತ್ರೆಯಲ್ಲಿ ೨೨ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲ. ತಾಲ್ಲೂಕು ಆಸ್ಪತ್ರೆಯಲ್ಲಿ ಇರುವ ಐದು ವೆಂಟಿಲೇಟರ್‌ ಪೈಕಿ ನಾಲ್ಕು ಕೆಲಸ ಮಾಡುತ್ತಿಲ್ಲ ಎಂದು ಇದೀಗ ತಿಳಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಕೊರತೆ ಇರುವ ತಜ್ಞರು ಮತ್ತು ವೈದ್ಯರ ಹುದ್ದೆಗಳನ್ನು ಒಂದು ವಾರದಲ್ಲಿ ನೇಮಕ ಮಾಡಲಾಗುವುದು. ಜಿಲ್ಲೆಗೆ ಬೇಕಾದ ಔಷಧಗಳ ವಿವರಗಳನ್ನು ಔಷಧ ಸಾಫ್ಟ್‌ವೇರ್‌ನಲ್ಲಿ ದಾಖಲು ಮಾಡಬೇಕು. ಇಲ್ಲದಿದ್ದರೆ ನಿಮಗೆ ಸರಿಯಾದ ಸಮಯಕ್ಕೆ ಔಷಧಗಳು ಸಿಗುವುದಿಲ್ಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಆಕ್ಸಿಜನ್‌ ಕಾನ್ಸ್‌ಟ್ರೇಟರ್ಸ್‌ ಇನ್ನೂ ೨೫ ರಿಂದ ೩೦ ಕಳುಹಿಸಿಕೊಡಲಾಗುವುದು. ಕೊರತೆ ಇರುವ ಔಷಧಗಳನ್ನು ತಕ್ಷಣವೇ ರವಾನೆ ಮಾಡಲು ಸೂಚನೆ ಕೊಡಲಾಗಿದೆ. ಬ್ಲಾಕ್‌ ಫಂಗಸ್‌ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಇಂಜೆಕ್ಷನ್‌ ಕಳುಹಿಸಿಕೊಡಲಾಗುವುದು. ಇಎನ್‌ಟಿ ತಜ್ಞರ ಸಮಿತಿ ರಚಿಸಿ ಅವರಿಂದ ಸಮಗ್ರ ದೃಷ್ಟಿಕೋನದ ಚಿಕಿತ್ಸಾ ವಿಧಾನವನ್ನು ಮಾರ್ಗಸೂಚಿಯಲ್ಲಿ ನೀಡಿರುವಂತೆ ಚಿಕಿತ್ಸೆ ಕೊಡುವ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದರು.

minister dr sudhakar minister basavaraj bommayi saakshatvಲಸಿಕೆ ವಿತರಣೆ ತ್ವರಿತಗೊಳಿಸಿ

ಲಸಿಕಾ ವಿತರಣೆಯಲ್ಲಿ ಇದುವರೆಗೆ ೧,೭೧,೧೪೭ ಜನರಿಗೆ ನೀಡಲಾಗಿದೆ. ಜಿಲ್ಲಾ ಉಗ್ರಾಣದಲ್ಲಿ ೩೬೩೦ ಡೋಸ್‌ ದಾಸ್ತಾನು ಇದೆ. ೧೧,೩೯೦ಡೋಸ್‌ ಜಿಲ್ಲೆಯಲ್ಲಿ ಹಂಚಿಕೆ ಆಗಿರುವ ದಾಸ್ತಾನು ಇದೆ. ಮೊದಲ ಮತ್ತು ಎರಡನೇ ಡೋಸ್‌ಗೆ ದೊಡ್ಡ ಅಂತರ ಇದೆ. ಅದನ್ನು ಸರಿಪಡಿಸಬೇಕು. ಜಿಲ್ಲಾಡಳಿತ ಪ್ರತಿದಿನ ಮಾಧ್ಯಮಗಳ ಮೂಲಕ ಲಸಿಕೆ ವಿತರಣೆ, ಚಿಕಿತ್ಸಾ ವಿಧಾನ, ಸಿಸಿಸಿಗಳಲ್ಲಿ ಊಟ ಮತ್ತು ಹಾರೈಕೆ ವಿಷಯಗಳ ಬಗ್ಗೆ ಮಾಹಿತಿ ಮತ್ತು ವಿಡಿಯೋಗಳನ್ನು ನೀಡುವುದರಿಂದ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ ಎಂದು ಕಿವಿಮಾತು ಹೇಳಿದರು.

ಹತ್ತು ಮೆಟ್ರಿಕ್‌ ಟನ್‌ ಆಕ್ಸಿಜನ್‌ ಸರಿಯಾಗಿ ಬಳಕೆ ಮಾಡಬೇಕು. ಆಗ ಯಾವುದೇ ಕೊರತೆ ಆಗುವುದಿಲ್ಲ. ಆಕ್ಸಿಜನ್‌ ಬಳಕೆ ವಿಷಯದಲ್ಲಿ ಜವಾಬ್ದಾರಿಯಿಂದ ಬಳಸಬೇಕು. ಪ್ರತಿ ರೋಗಿಗೆ ನೀಡುತ್ತಿರುವ ಆಕ್ಸಿಜನ್‌ ಬಗ್ಗೆ ಪ್ರತಿದಿನ ಆಡಿಟ್‌ ಮಾಡಬೇಕು. ವ್ಯರ್ಥ ಆಗದಂತೆ ಎಚ್ಚರವಹಿಸಬೇಕು ಎಂದರು.

ಆಸ್ಪತ್ರೆ, ಮೆಡಿಕಲ್‌ ಕಾಲೇಜು ಸ್ಥಳ ಪರಿಶೀಲನೆ
ಕೋವಿಡ್‌ ಪರಿಶೀಲನಾ ಸಭೆಗೂ ಮೊದಲು ಸುಧಾಕರ್‌ ಅವರು ಉಸ್ತುವಾರಿ ಸಚಿವರಾದ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಂಸದರಾದ ಶಿವಕುಮಾರ್‌ ಉದಾಸಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಮತ್ತು ನೂತನ ಮೆಡಿಕಲ್‌ ಕಾಲೇಜು ನಿರ್ಮಾಣದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

Tags: #cmbsy#home minister basavaraj bommai#saakshatvCovid indiacovid karnatakaCovid19haverihealth minister dr.sudhakarkarnataka
ShareTweetSendShare
Join us on:

Related Posts

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್‌ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು

by Shwetha
June 27, 2026
0

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

ಕೋರ್ಟ್ ನಲ್ಲಿ ಕ್ಷಮೆ ಕೇಳಲು ನಿರಾಕರಿಸಿದ ಪ್ರದೀಪ್ ಈಶ್ವರ್: ಕಾನೂನು ಸಮರದಲ್ಲಿ ಪ್ರತಾಪ್ ಸಿಂಹಗೆ ಮೇಲುಗೈ?- ಚಿಕ್ಕಬಳ್ಳಾಪುರ ಶಾಸಕರಿಗೆ ಕಾನೂನು ಶಾಕ್

by Shwetha
June 27, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ಕಾನೂನು ಸಂಘರ್ಷ ಈಗ ಹೊಸ ತಿರುವು ಪಡೆದುಕೊಂಡಿದೆ. ಪ್ರದೀಪ್ ಈಶ್ವರ್ ಅವರು ತಮ್ಮ...

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram