ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mysore : ಪಿಎಚ್‍ಸಿ, ಉಪಕೇಂದ್ರಗಳಲ್ಲೂ ಜನ ಔಷಧಿ ಕೇಂದ್ರ ನಿರ್ಮಿಸುವ ಪ್ರಯತ್ನ – ಸುಧಾಕರ್

Namratha Rao by Namratha Rao
March 7, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಪಿಎಚ್‍ಸಿ, ಉಪಕೇಂದ್ರಗಳಲ್ಲೂ ಜನ ಔಷಧಿ ಕೇಂದ್ರ ನಿರ್ಮಿಸುವ ಪ್ರಯತ್ನ, ಆರು ತಿಂಗಳಲ್ಲಿ 500 ಕೇಂದ್ರ ನಿರ್ಮಿಸುವ ಗುರಿ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ವೈದ್ಯರು, ಬಡ ರೋಗಿಗಳಿಗೆ ದುಬಾರಿ ಬ್ರ್ಯಾಂಡೆಡ್ ಔಷಧಿ ಖರೀದಿಗೆ ಸೂಚಿಸಬೇಡಿ

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಜನ ಔಷಧಿ ಕೇಂದ್ರ

ಮೈಸೂರು, ಮಾರ್ಚ್ 7 :  ಅತಿ ಕಡಿಮೆ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸುವ ಜನ ಔಷಧಿ ಕೇಂದ್ರಗಳನ್ನು ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮಾತ್ರವಲ್ಲದೆ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲೂ ಆರಂಭಿಸುವ ಗುರಿ ಇದೆ. ಆರು ತಿಂಗಳಲ್ಲಿ ಹೊಸ 500 ಜನ ಔಷಧಿ ಕೇಂದ್ರಗಳನ್ನು ನಿರ್ಮಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಜಿಲ್ಲೆಯ ಖಾಸಗಿ ಹೋಟೆಲ್ ನಲ್ಲಿ ಜನ ಔಷಧಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಮೊದಲು ಫಲಾನುಭವಿಗಳು ಹಾಗೂ ಕೇಂದ್ರಗಳ ಮಾಲೀಕರನ್ನುದ್ದೇಶಿಸಿ ಮಾತನಾಡಿದರು.

ಕಳೆದ 68 ವರ್ಷಗಳಲ್ಲಿ ಯಾರಿಗೂ ಔಷಧಿಗಳ ಬೆಲೆ ಕಡಿಮೆ ಮಾಡಬೇಕು ಎಂಬ ಆಲೋಚನೆ ಬಂದಿರಲಿಲ್ಲ ಎಂಬುದು ಸೋಜಿಗದ ಸಂಗತಿ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ಷ್ಮ ವಿಚಾರಗಳ ಬಗ್ಗೆ ಚಿಂತನೆ ಮಾಡಿ, ಬದ್ಧತೆಯಿಂದ ಜನ ಔಷಧಿ ಯೋಜನೆಯನ್ನು ಬಲಗೊಳಿಸಿದರು. ಪ್ರಸ್ತುತ ದೇಶದಲ್ಲಿ 8 ಸಾವಿರಕ್ಕೂ ಅಧಿಕ ಹಾಗೂ ರಾಜ್ಯದಲ್ಲಿ 952 ಜನ ಔಷಧಿ ಕೇಂದ್ರಗಳಿವೆ. ಇದರೊಂದಿಗೆ ಅತಿ ಹೆಚ್ಚು ಕೇಂದ್ರಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ 3 ನೇ ಸ್ಥಾನದಲ್ಲಿದೆ. ಮುಂದಿನ ಆರು ತಿಂಗಳಲ್ಲಿ ಸುಮಾರು 500 ಹೊಸ ಕೇಂದ್ರಗಳನ್ನು ನಿರ್ಮಿಸುವ ಗುರಿಯನ್ನೂ ಇರಿಸಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮಾತ್ರವಲ್ಲದೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲೂ ಇದನ್ನು ನಿರ್ಮಿಸಬೇಕೆಂಬ ಗುರಿ ಇದೆ. ಈ ಗುರಿ ಸಾಧಿಸುವುದರೊಂದಿಗೆ ಕರ್ನಾಟಕ ಮೊದಲ ಸ್ಥಾನಕ್ಕೇರಲಿದೆ ಎಂದು ತಿಳಿಸಿದರು.

ಖಾಸಗಿ ಜಾಗಗಳಲ್ಲೂ ಹೆಚ್ಚು ಜನ ಔಷಧಿ ಕೇಂದ್ರಗಳನ್ನು ಆರಂಭಿಸಿ, ಹೆಚ್ಚು ಜನರನ್ನು ತಲುಪುವಂತಾಗಬೇಕು. ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್, ಮೂತ್ರಪಿಂಡ ಸಂಬಂಧಿ ಸಮಸ್ಯೆ ಸೇರಿದಂತೆ ಅನೇಕ ಅನಾರೋಗ್ಯಗಳನ್ನು ನಿವಾರಿಸುವ ಔಷಧಿಗಳು ಮಾರುಕಟ್ಟೆಯಲ್ಲಿದೆ. ಆದರೆ ಅವುಗಳ ದರ ಅತಿ ಹೆಚ್ಚಾಗಿದೆ. ಸಾಮಾನ್ಯ ಜನರು ತಮ್ಮ ಸಂಬಳದಲ್ಲಿ 30%-40% ನಷ್ಟು ಮೊತ್ತವನ್ನು ಔಷಧಿ ಖರೀದಿಗೆ ಬಳಸುತ್ತಿದ್ದಾರೆ. ಇದನ್ನು ಗಮನಿಸಿಯೇ ಶೇ.70-80 ರಷ್ಟು ಕಡಿಮೆ ದರದಲ್ಲಿ ಔಷಧಿಗಳನ್ನು ನೀಡಲಾಗುತ್ತಿದೆ. ಬ್ರ್ಯಾಂಡೆಡ್ ನಂತೆಯೇ ಗುಣಮಟ್ಟದ ಔಷಧಿಗಳು ಇಲ್ಲಿ ಲಭ್ಯವಿದೆ. ಅದನ್ನು ತಯಾರಿಸಿ ಪರೀಕ್ಷೆಗೆ ಒಳಪಡಿಸಿಯೇ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ ಜನ ಔಷಧಿ ಕೇಂದ್ರಗಳ ಔಷಧಿಗಳ ಬಗ್ಗೆ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ವೈದ್ಯರಿಗೆ ಮನವಿ

ಜನ ಔಷಧಿ ಕೇಂದ್ರಗಳ ಬಗ್ಗೆ ಜನರು ವಿಶ್ವಾಸ ಇರಿಸಿಕೊಳ್ಳಬೇಕು. ಒಂದು ರೂಪಾಯಿ ಮೌಲ್ಯದ ಔಷಧಿ ಕೇವಲ 20 ಪೈಸೆಗೆ ದೊರೆಯುವಂತಹ ಸೌಲಭ್ಯ ಇಲ್ಲಿದೆ. ಖಾಸಗಿ ಆರೋಗ್ಯ ವಲಯದಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಬಡ ಜನರಿಗಾಗಿ ಔಷಧಿ ಬರೆದುಕೊಡುವಾಗ ಬ್ರ್ಯಾಂಡೆಡ್ ಔಷಧಿಗಳ ಹೆಸರು ಬರೆಯಬೇಡಿ. ಜನರ ಆರ್ಥಿಕ ಪರಿಸ್ಥಿತಿ ಪರಿಗಣಿಸಿ ರಾಸಾಯನಿಕವಾದ ಹೆಸರು ನಮೂದಿಸಬೇಕು. ಮಾನವೀಯತೆಯ ದೃಷ್ಟಿಯಿಂದ ವೈದ್ಯರು ಜನ ಔಷಧಿ ಮಳಿಗೆಗಳಿಗೆ ಔಷಧಿ ಖರೀದಿಗೆ ಶಿಫಾರಸು ಮಾಡಬೇಕು ಎಂದು ಸಚಿವರು ಮನವಿ ಮಾಡಿದರು.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ರಾಜ್ಯ ಖಾತೆ ಸಚಿವರಾದ ಭಗವಂತ ಖೂಬಾ ಉಪಸ್ಥಿತರಿದ್ದರು.

Tags: Healthjana oushadhi kendrasaaksshatvSudhakar
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram