ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗಕ್ಕೂ ಬರಗಾಲಕ್ಕೂ ಎಲ್ಲಿಲ್ಲದ ನಂಟು. ಪ್ರತಿ ವರ್ಷ ಬರಗಾಲ ಪೀಡಿತ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವ ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ರಾತ್ರಿ ಧಾರಾಕಾರ ಮಳೆ ಸುರಿದಿದೆ.
ಮಳೆಯ ಅಬ್ಬರಕ್ಕೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದ ಪರಿಣಾಮ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಮನೆಗಳಿಗೂ ನೀರು ನುಗ್ಗಿದ್ದು ಜನರು ಪರದಾಟ ನಡೆಸುವಂತಾಗಿದೆ.
ಹೊಳಲ್ಕೆರೆ, ಹಿರಿಯೂರು ತಾಲೂಕುಗಳಲ್ಲೂ ಭರ್ಜರಿ ಮಳೆಯಾಗಿದೆ. ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ, ಗೊಲ್ಲರಹಟ್ಟಿ, ಕೋಮ್ಮಾರನಹಳ್ಳಿ, ಹೊರಕೆರೆ ದೇವರಪುರದಲ್ಲಿ ಭಾರಿ ಮಳೆಯಾಗಿದೆ. ಹೊಳಲ್ಕೆರೆ ತಾಲೂಕಿನ ತೇಕಲವಟ್ಟಿ ಗ್ರಾಮದ 6 ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ.
ಹಿರಿಯೂರು ತಾಲೂಕಿನ ಮಸ್ಕಲ್, ಧರ್ಮಪುರ, ಐಮಂಗಲ ಭಾಗದಲ್ಲೂ ಕಳೆದ ರಾತ್ರಿ ವರುಣ ಅಬ್ಬರಿಸಿದ್ದಾನೆ. ಅರಳಿಹಳ್ಳಿಯಲ್ಲಿ ದೊಡ್ಡಹಳ್ಳ ಕೆರೆ ಭರ್ತಿಯಾಗಿ ಹರಿಯುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತಾಗಿದೆ.
ಗದಗ್ನಲ್ಲಿ ಮತ್ತೆ ವರುಣನ ಅಬ್ಬರ; ಗ್ರಾಮಗಳು ಜಲಾವೃತ pic.twitter.com/qkJdjPC99O
— Saakshatv-videos (@Saakshatv_video) September 9, 2020