ಇಂದಿನಿಂದ 3 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಯೆಲ್ಲೋ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗ್ತಿದೆ. ಇಂದು ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಚಂಡಮಾರುತ ಸೃಷ್ಟಿಯಾಗಲಿದ್ದು, ಇದರ ಪ್ರಭಾವದಿಂದಾಗಿ ಶನಿವಾರ ಮತ್ತು ಭಾನುವಾರ ಅಂದ್ರೆ ಸೆಪ್ಟೆಂಬರ್ 18 ಹಾಗೂ 19ರಂದು ದೇಶದ ವಿವಿಧ ರಾಜ್ಯಗಳು (ಕರಾವಳಿ ಭಾಗಗಳಲ್ಲಿ) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದ್ರಲ್ಲೂ ರಾಜ್ಯದ ಕರಾವಳಿ ಭಾಗಗಳಾದದ , ಉಡುಪಿ , ದಕ್ಷಿಣ ಕನ್ನಡ , ಉತ್ತರ ಕನ್ನಡ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನಲಾಗ್ತಿದೆ.
ಇನ್ನೂ ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಗುಜರಾತ್ ನಲ್ಲಿಯು ಇಂದಿನಿಂದ ಮೂರು ದಿನಗಳ ಕಾಲ ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇತ್ತ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ ನಿಂದ ನಿರಂತರ ಮಳೆಯಾಗ್ತಿದೆ. ಇಂದೂ ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಮಲೆನಾಡು ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆಯಾಗಿದೆ. ಶಿವಮೊಗ್ಗ , ಹಾಸನ , ಚಿಕ್ಕಮಗಳೂರು , ಸಕಲೇಶಪುರ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯೆತಯಿರುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.